ಚಿಕ್ಕಮಗಳೂರು :ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನ ವಿರೋಧಿ ಕಾಯ್ದೆಗಳನ್ನು ಹಿಂದೆ ಪಡೆಯದೇ ಇದ್ದರೆ ಜನವರಿ ೨೬ ರಂದು ದೆಹಲಿ ಹಾಗೂ ಬೆಂಗಳೂರಿನಲ್ಲಿ ಜನರ ಗಣರಾಜ್ಯೋ ತ್ಸವ ನಡೆಯಲಿದೆ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ .
ಗಣರಾಜ್ಯೋತ್ಸವ ಸಂದೇಶ ಮುಗಿದ ತಕ್ಷಣ ಎರಡೂ ಕಡೆಗಳಲ್ಲಿ ರೈತರು ಸಾವಿರಾರು ಸಂಖ್ಯೆಯಲ್ಲಿ ಟ್ರ್ಯಾಕ್ಟರ್ ನೊಂದಿಗೆ ರಾಷ್ಟ್ರಧ್ವಜ ಹಿಡಿದು ನಗರವನ್ನು ಪ್ರವೇಶಿಸಲಿದ್ದಾರೆ ಎಂದು ಹೇಳಿದರು .
ಕರೋನ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡಿರುವ ಸರ್ಕಾರಗಳು ಜನವಿರೋಧಿ ಕಾಯಿದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದಿವೆ .ಸಾರ್ವಜನಿಕ ಸೇವಾ ವಲಯಗಳನ್ನು ಖಾಸಗೀಕರಣ ಮಾಡುತ್ತಿವೆ ಎಂದು ಆರೋಪಿಸಿದರು .
ಪ್ರಪಂಚದ ಇತರ ಅನೇಕ ರಾಷ್ಟ್ರಗಳೂ ರೈತರ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡುತ್ತಿವೆ. ನಮ್ಮ ಪ್ರಧಾನಿಗಳು ಮೌನವಾಗಿದ್ದಾರೆ ಎಂದು ಕಿಡಿಕಾರಿದರು.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ