ಚಿಕ್ಕಮಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನವಿರೋಧಿ ಕಾಯಿದೆಗಳನ್ನು ವಿರೋಧಿಸಿ ಜ.೨೬ ರಂದು ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ ಎಂದು ಸಂಯುಕ್ತ ಹೋರಾಟ ಸಮಿತಿ ಕಾರ್ಯದರ್ಶಿ ಕೆ. ಎಲ್ ಅಶೋಕ್ ತಿಳಿಸಿದ್ದಾರೆ .
ಸುದ್ದಿಗಾರರ ಜೂತೆ ಮಾತನಾಡಿದ ಅವರು ಎಲ್ಲಾ ರೀತಿಯ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲ ಸಂಘಟನೆಗಳು ಒಂದಾಗಿ ಈ ಹೋರಾಟವನ್ನು ನಡೆಸುತ್ತಿದ್ದು ಎರಡನೆ ಸ್ವಾತಂತ್ರ ಸಂಗ್ರಾಮಕ್ಕೆ ಮುನ್ನುಡಿ ಆಗಲಿದೆ ಎಂದು ಹೇಳಿದರು .
ದೆಹಲಿಯಲ್ಲಿ ನಡೆಯುತ್ತಿರುವ ಚಳವಳಿ ಹೊಸ ಭಾಷ್ಯವನ್ನು ಬರೆದಿದೆ .ದಿಕ್ಕನ್ನು ತೋರಿಸಿದೆ.ಸುಗ್ರೀವಾಜ್ಞೆಗಳ ಮೂಲಕ ಕಾಯಿದೆಗಳನ್ನು ತಂದು ಸರ್ಕಾರ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು . ಗೌಸ್ ಮೊಯಿದಿನ್ ಇತರರು ಪಾಲ್ಗೊಂಡಿದ್ದರು .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ