ಬುಧವಾರ, ಜನವರಿ 20, 2021

ಜ ೨೬ ರಂದು ಐತಿಹಾಸಿಕ ಹೋರಾಟ :ಕೆ ಎಲ್. ಅಶೋಕ್


 ಚಿಕ್ಕಮಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನವಿರೋಧಿ ಕಾಯಿದೆಗಳನ್ನು ವಿರೋಧಿಸಿ  ಜ.೨೬ ರಂದು ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ ಎಂದು ಸಂಯುಕ್ತ ಹೋರಾಟ ಸಮಿತಿ ಕಾರ್ಯದರ್ಶಿ ಕೆ. ಎಲ್ ಅಶೋಕ್ ತಿಳಿಸಿದ್ದಾರೆ .

ಸುದ್ದಿಗಾರರ ಜೂತೆ ಮಾತನಾಡಿದ ಅವರು ಎಲ್ಲಾ ರೀತಿಯ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲ ಸಂಘಟನೆಗಳು ಒಂದಾಗಿ ಈ ಹೋರಾಟವನ್ನು  ನಡೆಸುತ್ತಿದ್ದು ಎರಡನೆ ಸ್ವಾತಂತ್ರ ಸಂಗ್ರಾಮಕ್ಕೆ ಮುನ್ನುಡಿ ಆಗಲಿದೆ ಎಂದು ಹೇಳಿದರು .

ದೆಹಲಿಯಲ್ಲಿ ನಡೆಯುತ್ತಿರುವ ಚಳವಳಿ ಹೊಸ ಭಾಷ್ಯವನ್ನು ಬರೆದಿದೆ .ದಿಕ್ಕನ್ನು ತೋರಿಸಿದೆ.ಸುಗ್ರೀವಾಜ್ಞೆಗಳ ಮೂಲಕ ಕಾಯಿದೆಗಳನ್ನು ತಂದು ಸರ್ಕಾರ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು . ಗೌಸ್ ಮೊಯಿದಿನ್ ಇತರರು ಪಾಲ್ಗೊಂಡಿದ್ದರು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...