ಚಿಕ್ಕಮಗಳೂರು: ದೇಶದ ಸಾರ್ವಭೌಮತೆಗೆ ಧಕ್ಕೆ ತರುತ್ತಿರುವ ಒಳ ಏಟುಗಳನ್ನು ನಾವೆಲ್ಲರೂ ಒಗ್ಗಟ್ಟಾಗಿ ಹತ್ತಿಕ್ಕಬೇಕಾಗಿದೆ ಎಂದು ಅರಣ್ಯ ಸಚಿವ ಲಿಂಬಾವಳಿ ಕರೆ ನೀಡಿದ್ದಾರೆ .
ಜಿಲ್ಲಾ ಆಟದ ಮೈದಾನದಲ್ಲಿ ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು ಭಯೋತ್ಪಾದನೆ 'ಕೋಮು ದಳ್ಳುರಿ ಇನ್ನಿತರ ಅನೇಕ ಸಂಗತಿಗಳು ದೇಶದ ಸಾರ್ವಭೌಮತೆಗೆ ಅಪಾಯವನ್ನು ತಂದೊಡ್ಡುತ್ತವೆ ಎಂದು ಕಳವಳ ಹೊರಹಾಕಿದರು .
ಶಾಸಕ ಸಿ ಟಿ ರವಿ ,ವಿಧಾನ ಪರಿಷತ್ ಸದಸ್ಯ ಭೋಜೇಗೌಡ , ಜಿಲ್ಲಾ ಪರಿಷತ್ ಅಧ್ಯಕ್ಷೆ ಸುಜಾತಕೃಷ್ಣಪ್ಪ,ಉಪಾಧ್ಯಕ್ಷ ಸೋಮಶೇಖರ್ ಪಾಲ್ಗೊಂಡಿದ್ದರು .ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಆಧುನಿಕ ಬೈಕ್ ಗಳನ್ನು ವಿತರಿಸಲಾಯಿತು .


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ