ಶನಿವಾರ, ಜನವರಿ 16, 2021

ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಒತ್ತಾಯ


 ಚಿಕ್ಕಮಗಳೂರು :ಶೇಕಡಾವಾರು ಜನಸಂಖ್ಯೆಗೆ ಅನುಗುಣವಾಗಿ ಒಕ್ಕಲಿಗ ಜನಾಂಗಕ್ಕೆ ಶೇಕಡ ೧೭ ರಷ್ಟು ಮೀಸಲಾತಿ ನೀಡುವಂತೆ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹಿಸಿದೆ .

ಸುದ್ದಿಗಾರರ ಜೊತೆ  ಮಾತನಾಡಿದ ಸಮಿತಿಯ ಪ್ರಧಾನ ಸಂಚಾಲಕ ನಾಗರಾಜ್  ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು, ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಮನ ಹರಿಸುವಂತೆ ಒತ್ತಾಯಿಸಿದರು .

ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ರೂಪಿಸುವುದಾಗಿ ತಿಳಿಸಿದ ಅವರು ಜನಸಂಖ್ಯೆಗೆ ಅನುಗುಣವಾಗಿ ಎಲ್ಲಾ ಜನಾಂಗದವರಿಗೆ  ಮೀಸಲಾತಿ ನೀಡುವಂತೆ ಮನವಿ ಮಾಡಿದರು . 

ಪದಾಧಿಕಾರಿಗಳಾದ ರಾಜೇಗೌಡ ,ಧರ್ಮರಾಜ್, ಮುಕುಂದ ರಾಜ್ ಉಪಸ್ಥಿತರಿದ್ದರು 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...