ಸಿಐಎಸ್ ಎಫ್ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ
ಕಂತೆ ಕಂತೆ ಹಣ ಸಿಕ್ಕಿದೆ .
ಚೆನ್ನೈನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸ್ಟಮ್ಸ್ ಅಧಿಕಾರಿ ಇರ್ಫಾನ್ ಅಹಮ್ಮದ್ ಮೊಹಮ್ಮದ್ ಲಕ್ನೋಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಾಗ ಪ್ರಕರಣ ಪತ್ತೆಯಾಗಿದೆ .
ಕೇಂದ್ರ ಸರ್ಕಾರದ ಅಧಿಕಾರಿ ದಂಪತಿ ಬಳಿ ಇತ್ತು ಲಕ್ಷ ಲಕ್ಷ ಹಣ ಇದ್ದು, ಸಿಐಎಸ್ ಎಫ್ ಅಧಿಕಾರಿಗಳ ಪರಿಶೀಲನೆ ವೇಳೆ ಬಾತ್ ರೂಂ ನಲ್ಲಿ ಬಿಸಾಡಿರುವುದು ಬೆಳಕಿಗೆ ಬಂದಿದೆ .
ಅಧಿಕಾರಿಯ ಪತ್ನಿ ಬಾತ್ ರೂಂ ನಲ್ಲಿ 10 ಲಕ್ಷ ರೂ ಬಿಸಾಡಿದ್ದರೆ ,ಎರಡು ಕಾಸ್ಟ್ಲಿ ಮೊಬೈಲ್, ಆಫಲ್ ವಾಚ್ ಒಂದು ಸೂಟ್ ಕೇಸ್, ಬ್ಯಾಗ್ ನಲ್ಲಿ 74 ಲಕ್ಷ ರೂ ಪತ್ತೆಯಾಗಿದೆ .
ಒಟ್ಟು 74 ಲಕ್ಷದ 81 ಸಾವಿರದ 500 ರೂ ಹಣ ಜಪ್ತಿ ಮಾಡಿದ್ದು ಪ್ರಕರಣವನ್ನು ಸಿಐಎಸ್ ಎಫ್ ಪೊಲೀಸರು ಕೇಸ್ ನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ