ಚಿಕ್ಕಮಗಳೂರು :ಈಗಾಗಲೇ ಜಾರಿಗೆ ತಂದಿರುವ ಅರಣ್ಯ ಹಕ್ಕು ಕಾಯ್ದೆಯನ್ನು ಇನ್ನಷ್ಟು ಸರಳೀಕರಣ ಗೊಳಿಸುವಂತೆ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಒತ್ತಾಯಿಸಿದ್ದಾರೆ .
ಮಲೆನಾಡು ಅಭಿವೃದ್ಧಿ ಮಂಡಳಿ ಕಾರ್ಯಚಟುವಟಿಕೆಗಳ ಕುರಿತು ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಈಗ ಜಾರಿಯಲ್ಲಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಯವರನ್ನು ಹೊರತುಪಡಿಸಿ ಉಳಿದವರು 3 ತಲೆಮಾರಿನ ದಾಖಲೆ ,ಇಬ್ಬರ ಸಾಕ್ಷಿಯನ್ನು ನೀಡಬೇಕಾಗಿದೆ ಇದು ಕಷ್ಟದ ಕೆಲಸ ಎಂದರು .
ಕಾಯ್ದೆಯನ್ನು ಸರಳ ಗೊಳಿಸಿ ಕೆಲವೊಂದು ಮಾರ್ಪಾಡು ಮಾಡಿ 5ಎಕರೆ ವರೆಗಿನ ಒತ್ತುವರಿಯನ್ನು ಸಕ್ರಮಗೊಳಿಸುವುದು ಸೂಕ್ತವೆಂದು ಅಭಿಪ್ರಾಯಿಸಿದರು .
ಸಂಸತ್ ಸದಸ್ಯ ರಾಘವೇಂದ್ರ ಅವರ ಜೂತೆ ಮಾತನಾಡಿದ್ದು , ಸಂಸತ್ತಿನಲ್ಲಿ ಚರ್ಚಿಸಿ ಕಾಯ್ದೆ ಜಾರಿಗೊಳಿಸಬೇಕು ಎಂದರು .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ