ಶುಕ್ರವಾರ, ಜನವರಿ 22, 2021

ಅರಣ್ಯ ಹಕ್ಕು ಕಾಯ್ದೆ ಸರಳೀಕರಣಕ್ಕೆ ಒತ್ತಾಯ


 ಚಿಕ್ಕಮಗಳೂರು :ಈಗಾಗಲೇ ಜಾರಿಗೆ ತಂದಿರುವ ಅರಣ್ಯ ಹಕ್ಕು ಕಾಯ್ದೆಯನ್ನು ಇನ್ನಷ್ಟು ಸರಳೀಕರಣ ಗೊಳಿಸುವಂತೆ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಒತ್ತಾಯಿಸಿದ್ದಾರೆ .

ಮಲೆನಾಡು ಅಭಿವೃದ್ಧಿ ಮಂಡಳಿ ಕಾರ್ಯಚಟುವಟಿಕೆಗಳ ಕುರಿತು ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಈಗ ಜಾರಿಯಲ್ಲಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಯವರನ್ನು ಹೊರತುಪಡಿಸಿ ಉಳಿದವರು  3 ತಲೆಮಾರಿನ ದಾಖಲೆ ,ಇಬ್ಬರ ಸಾಕ್ಷಿಯನ್ನು  ನೀಡಬೇಕಾಗಿದೆ ಇದು ಕಷ್ಟದ ಕೆಲಸ ಎಂದರು .

ಕಾಯ್ದೆಯನ್ನು ಸರಳ ಗೊಳಿಸಿ ಕೆಲವೊಂದು ಮಾರ್ಪಾಡು ಮಾಡಿ 5ಎಕರೆ ವರೆಗಿನ ಒತ್ತುವರಿಯನ್ನು  ಸಕ್ರಮಗೊಳಿಸುವುದು ಸೂಕ್ತವೆಂದು ಅಭಿಪ್ರಾಯಿಸಿದರು .   

 ಸಂಸತ್ ಸದಸ್ಯ ರಾಘವೇಂದ್ರ ಅವರ ಜೂತೆ ಮಾತನಾಡಿದ್ದು , ಸಂಸತ್ತಿನಲ್ಲಿ ಚರ್ಚಿಸಿ ಕಾಯ್ದೆ ಜಾರಿಗೊಳಿಸಬೇಕು ಎಂದರು .


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...