ಬುಧವಾರ, ಜನವರಿ 27, 2021

ದೆಹಲಿ ಘಟನೆ ಹಿಂದೆ ಖಲಿಸ್ಥಾನವಾದಿಗಳ ಕೈವಾಡ: ಸಂಸದೆ ಶೋಭಾ ಕರಂದ್ಲಾಜೆ ಆರೋಪ


 ಚಿಕ್ಕಮಗಳೂರು: ನಿನ್ನೆ ದೆಹಲಿಯಲ್ಲಿ ನಡೆದ ಘಟನೆ ಹಿಂದೆ ಖಾಲಿಸ್ತಾನ್ ಚಳವಳಿ ಹಾಗೂ ಉಮರ್ ಖಾಲಿದ್ ಬೆಂಬಲಿಗರ ಕೈವಾಡವಿದ್ದು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಸಂಸತ್ ಸದಸ್ಯ ಶೋಭಾ ಕರಂದ್ಲಾಜೆ ಹೇಳಿದ್ದಾರೆ .

ಸುದ್ದಿಗಾರರ ಜೊತೆ ಮಾತನಾಡಿದ ಅವರು  ನಿಜವಾದ ರೈತರು ಚಳವಳಿಯ ನಾಯಕತ್ವವನ್ನು ವಹಿಸಿಕೊಂಡಿಲ್ಲ.ಕೆಂಪುಕೋಟೆ ಹತ್ತಿದವರು ರೈತರಲ್ಲ. ತಾವು ಈ ಹಿಂದೆಯೇ ಇದರ ಬಗ್ಗೆ ಕಳವಳ ವ್ಯಕ್ತ ಪಡಿಸಿದ್ದಾಗಿ ತಿಳಿಸಿದರು .

ರೈತರ ಹೆಸರಲ್ಲಿ ಹೋರಾಟವನ್ನು ದಿಕ್ಕು ತಪ್ಪಿಸುವ ವ್ಯವಸ್ಥಿತ ಯತ್ನ ನಡೆದಿದೆ. ಇದಕ್ಕೆ ರೈತರು ಬಲಿಯಾಗಬಾರದು ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದರು .

ಕಾಯ್ದೆಯಲ್ಲಿ ರೈತ ವಿರೋಧಿ ಅಂಶಗಳು ಇದ್ದರೆ ಚರ್ಚೆ ಮೂಲಕ ಬಗೆಹರಿಸಿಕೊಳ್ಳಲು, ತಿದ್ದುಪಡಿ ಮಾಡಲು ಸಾಧ್ಯವಿದೆ .ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ರೈತರು ಮಾತುಕತೆಗೆ ಬರುವಂತೆ ಮನವಿ ಮಾಡಿದ್ದಾರೆ .

ತೇಲಿ ಘಟನೆಗೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆಯ ವೈಫಲ್ಯವಿಲ್ಲ ಪೊಲೀಸರು ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿದ್ದಾರೆ .ಘಟನೆ ಎಲ್ಲ ಮಗ್ಗಲುಗಳನ್ನೂ ಪರಿಶೀಲಿಸಿ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು .

ಕೆಂಪು ಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ್ದು ಬಿಜೆಪಿಗರು ಎಂಬುದು ಸುಳ್ಳು ಆರೋಪ ಸರಿಯಲ್ಲ .ಇದೊಂದು ಅಪಪ್ರಚಾರ, ವ್ಯವಸ್ಥಿತ ಷಡ್ಯಂತ್ರ     ಇದೆ ಎಂದು ಆರೋಪಿಸಿದರು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...