ಚಿಕ್ಕಮಗಳೂರು :ಕಾಫಿ ಉದ್ಯಮ ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಆಲ್ದೂರು ಬೆಳೆಗಾರರ ಸಂಘದ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು
ಉತ್ಪಾದನಾ ವೆಚ್ಚ ಹೆಚ್ಚಳ, ಬೆಲೆಯಲ್ಲಿ ಏರಿಳಿಕೆ ,ಕಾಡುಪ್ರಾಣಿಗಳ ಹಾವಳಿ ,ಅಕಾಲಿಕ ಮಳೆಯಿಂದ ಆಗಿರುವ ಹಾನಿ ಇನ್ನಿತರೆ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಯಿತು .
ಉದ್ಯಮದ ಸಮಸ್ಯೆಯ ಅರಿವಿದ್ದು ಎಲ್ಲಾ ವಿವರಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ .ಸದ್ಯವೇ ಇದಕ್ಕೆ ಪರಿಹಾರ ಸಿಗಲಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಭರವಸೆ ನೀಡಿದರು . ಬೆಳೆಗಾರರ ಸಂಘದ ಡಿ ಎಂ ವಿಜಯ್ ,ಸುರೇಶ್ ಇತರರು ಇದ್ದರು .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ