ಶನಿವಾರ, ಜನವರಿ 16, 2021

ಕೋವಿಡ್ ಲಸಿಕೆ :ಮೊದಲ ದಿನ ಉತ್ತಮ ಪ್ರತಿಕ್ರಿಯೆ


 ಚಿಕ್ಕಮಗಳೂರು: ಜಿಲ್ಲಾ ಕೇಂದ್ರದ 2ಕಡೆ ಸೇರಿದಂತೆ ಜಿಲ್ಲೆಯ 9ಕಡೆಗಳಲ್ಲಿ ಇಂದು ಕೋವಿಡ್ ಲಸಿಕೆ ನೀಡಲಾಯಿತು .

ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸೋಮಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು .

ಪೌರಕಾರ್ಮಿಕ ಗುರಮ್ಮ ಮೊದಲ ಪ್ರಶಸ್ತಿಯನ್ನು ಪಡೆದರು . ಆರಂಭದಿಂದ ೮೦೦ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು 4 ಗಂಟೆ ವೇಳೆಗೆ ಶೇಕಡಾ ೫೦ ರಷ್ಟು  ಸಾಧನೆಯಾಗಿತ್ತು .

ಜಿಲ್ಲೆಯಲ್ಲಿ ಈವರೆಗೆ ೧೦೫೭೯ ಜನ ಲಸಿಕೆ ಪಡೆಯಲು ನೋಂದಣಿ ಮಾಡಿಸಿದ್ದಾರೆ ಇದರಲ್ಲಿ ೭೫೦೦ ಸರ್ಕಾರಿ '೩೦೭೭ ಜನ ಖಾಸಗಿ ಆಸ್ಪತ್ರೆಗಳಲ್ಲಿ ಹೆಸರು ನೋಂದಾಯಿಸಿದ್ದಾರೆ .

ಲಸಿಕೆ ಪಡೆದವರ ಮೇಲೆ  ೩೦ ನಿಮಿಷಗಳ ಕಾಲ ನಿಗಾ ವಹಿಸಲಾಯಿತು .ಆರಂಭದಲ್ಲಿ ಸದ್ಯಕ್ಕೆ ಯಾವುದೇ ಅಡ್ಡ ಪರಿಣಾಮಗಳು ಕಂಡು ಬಂದಿಲ್ಲ .


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...