ಚಿಕ್ಕಮಗಳೂರು: ಸಿಡಿನೂ' ಇಲ್ಲ ಏನೂ ಇಲ್ಲ ಸುಮ್ನೆ ಹೇಳ್ತಾರೆ ಅಷ್ಟೆ ಎಂದು ಸಚಿವ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು
ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು .
ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ನೋವಿನಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದರು
ಕಾಂಗ್ರೆಸ್, ಜೆಡಿಎಸ್ ನಿಂದ ಬಂದ ಅರ್ಹತೆ ಇದ್ದವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ ,ಮುನಿರತ್ನ, ಹೆಚ್ ವಿಶ್ವನಾಥ್ ಅವರನ್ನು ಹೊರತುಪಡಿಸಿ ಎಲ್ಲರಿಗೂ ಸಚಿವ ಸ್ಥಾನ ಸಿಕ್ಕಿದೆ ಎಂದು ತಿಳಿಸಿದರು .
ಸಚಿವ ಸ್ಥಾನ ಸಿಗಲಿಲ್ಲ ಎಂದು ಏನೋ ಪದವನ್ನ ಬಳಸಬಹುದು.ಆದರೆ ಇದು ನಿಮ್ಮ ಭವಿಷ್ಯಕ್ಕೆ ಒಳ್ಳೆಯದಲ್ಲ ಎಂದು ಎಚ್ಚರಿಕೆ ನೀಡಿದರು .
ಎಲ್ಲ ಶಾಸಕರು ಕಲ್ಲುಬಂಡೆಯಂತೆ ಪಕ್ಷದಲ್ಲಿ ಇದ್ದಾರೆ 'ಸರ್ಕಾರ ಬಿಲ್ ಕುಲ್ ಪತನವಾಗಲ್ಲ ಎಂದು ಹೇಳಿದರು

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ