ಚಿಕ್ಕಮಗಳೂರು: ವಿಧಾನಪರಿಷತ್ ಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸುವ ಕುರಿತು ಸಭಾಪತಿಗಳ ಜತೆ ಚರ್ಚಿಸುವುದಾಗಿ ಪರಿಷತ್ ಉಪ ಸಭಾಪತಿ ಎಂ. ಕೆ .ಪ್ರಾಣೇಶ್ ತಿಳಿಸಿದ್ದಾರೆ .
ಪಕ್ಷದ ಕಚೇರಿಯಲ್ಲಿ ನೀಡಿದ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೂತೆ ಮಾತನಾಡಿದ ಅವರು ಸದನಕ್ಕೆ ಮೊಬೈಲನ್ನು ತೆಗೆದುಕೊಂಡು ಹೋಗುವ ಅವಶ್ಯಕತೆಯೇ ಇಲ್ಲ .ತುರ್ತು ಸಂದರ್ಭ ಬಳಸಬೇಕಾದಲ್ಲಿ ಅದಕ್ಕಾಗಿಯೇ ಜಾಗವನ್ನು ಮೀಸಲಿಡಲಾಗಿದೆ ಎಂದರು ಉಪಸಭಾಪತಿ ಸ್ಥಾನ ಅನಿರೀಕ್ಷಿತವಾಗಿ ಒಲಿದಿದೆ ಸದನದ ಘನತೆ ಗೌರವವನ್ನು ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ .ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುವುದಾಗಿ ಹೇಳಿದರು .
ಈ ಹಿಂದೆ ನಡೆದ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು .ಘಟನೆ ಸಂಬಂಧ ನೀಡಿರುವ ಮಧ್ಯಂತರ ವರದಿ ಬಗ್ಗೆ ಸಭಾಪತಿಗಳ ಜೊತೆ ಚರ್ಚಿಸಿದ್ದೇನೆ. ಎಂದು ತಿಳಿಸಿದರು .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ