ಗುರುವಾರ, ಫೆಬ್ರವರಿ 11, 2021

ಶೃಂಗೇರಿ ಅತ್ಯಾಚಾರ ಪ್ರಕರಣ :ಬಂಧಿತರ ಸಂಖ್ಯೆ 14ಕ್ಕೆ ಏರಿಕೆ


 ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ .

ಚಾಲಕ ಯತೀಶ್ ಬಂಧಿತ ಆರೋಪಿಯಾಗಿದ್ದು ,ಈತ ಬಾಲಕಿಗೆ ಪದೇಪದೆ ಕರೆ ಮಾಡಿ  ಕಿರುಕುಳ ನೀಡುತ್ತಿದ್ದ ಆರೋಪವಿದೆ .

ಈ ಮಧ್ಯೆ ಬಾಲಕಿ ೨೦೦ ಕ್ಕೂ ಅಧಿಕ  ಸಂಖ್ಯೆಗಳನ್ನು  ಬ್ಲ್ಯಾಕ್ ಲಿಸ್ಟ್ ನಲ್ಲಿ ಸೇರಿಸಿದ್ದು ಆ ಕುರಿತು ತನಿಖೆ ನಡೆಯುತ್ತಿದೆ .ಇನ್ನೊಂದು ಪ್ರಕರಣ : ಈ ಮಧ್ಯೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ .

ಶೃಂಗೇರಿ ಪ್ರಕರಣದ ಸಮಗ್ರ ತನಿಖೆ ಹಾಗೂ ಉಳಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರದಲ್ಲಿ ವಿವಿಧ ಸಂಘಟನೆಗಳು ನಿತ್ಯ ಪ್ರತಿಭಟನೆ ನಡೆಸುತ್ತಿರುವುದು ಗಮನಾರ್ಹ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...