ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ .
ಚಾಲಕ ಯತೀಶ್ ಬಂಧಿತ ಆರೋಪಿಯಾಗಿದ್ದು ,ಈತ ಬಾಲಕಿಗೆ ಪದೇಪದೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪವಿದೆ .
ಈ ಮಧ್ಯೆ ಬಾಲಕಿ ೨೦೦ ಕ್ಕೂ ಅಧಿಕ ಸಂಖ್ಯೆಗಳನ್ನು ಬ್ಲ್ಯಾಕ್ ಲಿಸ್ಟ್ ನಲ್ಲಿ ಸೇರಿಸಿದ್ದು ಆ ಕುರಿತು ತನಿಖೆ ನಡೆಯುತ್ತಿದೆ .ಇನ್ನೊಂದು ಪ್ರಕರಣ : ಈ ಮಧ್ಯೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ .
ಶೃಂಗೇರಿ ಪ್ರಕರಣದ ಸಮಗ್ರ ತನಿಖೆ ಹಾಗೂ ಉಳಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರದಲ್ಲಿ ವಿವಿಧ ಸಂಘಟನೆಗಳು ನಿತ್ಯ ಪ್ರತಿಭಟನೆ ನಡೆಸುತ್ತಿರುವುದು ಗಮನಾರ್ಹ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ