ಸೋಮವಾರ, ಫೆಬ್ರವರಿ 1, 2021

ಆರೋಪಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡಿಕ್ಕಿ ಕೊಲ್ಲಬೇಕು :ಮೋಹಿನಿ ಸಿದ್ದೇಗೌಡ ಆಕ್ರೋಶ



 ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿರುವ ಲೈಂಗಿಕ ಪ್ರಕರಣದ ಆರೋಪಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡಿಕ್ಕಿ ಕೊಲ್ಲಬೇಕು ಎಂದು ಸಾಂತ್ವನ ಕೇಂದ್ರದ ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ ಆಕ್ರೋಶ ಹೊರಹಾಕಿದ್ದಾರೆ .

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಪ್ರಕರಣದ ಬಗ್ಗೆ ತೀವ್ರ ಬೇಸರ ಹೊರಹಾಕಿದ್ದಾರೆ .ಈ ಕೃತ್ಯಕ್ಕೆ ಮುಖ್ಯ ಕಾರಣಕರ್ತರಾಗಿರುವ ಬಾಲಕಿಯ ಚಿಕ್ಕಮ್ಮ ನ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ 

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಮಹಿಳೆಯರಿಗೆ ರಕ್ಷಣೆ ಇಲ್ಲದ ಸ್ಥಿತಿ ಇನ್ನೂ ಇದೆ ಎಂದು ವಿಷಾದಿಸಿದ ಮೋಹಿನಿ ಸಿದ್ದೇಗೌಡ ,ಕೋರ್ಟು ,ಕಚೇರಿ ,ವಕೀಲರು ಎಂದು ಆರೋಪಿಗಳು ಹೊರಬರುವ ಸಾಧ್ಯತೆಗಳು ಇದೆ ಎಂದು ಹೇಳಿದರು .


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...