ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿರುವ ಲೈಂಗಿಕ ಪ್ರಕರಣದ ಆರೋಪಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡಿಕ್ಕಿ ಕೊಲ್ಲಬೇಕು ಎಂದು ಸಾಂತ್ವನ ಕೇಂದ್ರದ ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ ಆಕ್ರೋಶ ಹೊರಹಾಕಿದ್ದಾರೆ .
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಪ್ರಕರಣದ ಬಗ್ಗೆ ತೀವ್ರ ಬೇಸರ ಹೊರಹಾಕಿದ್ದಾರೆ .ಈ ಕೃತ್ಯಕ್ಕೆ ಮುಖ್ಯ ಕಾರಣಕರ್ತರಾಗಿರುವ ಬಾಲಕಿಯ ಚಿಕ್ಕಮ್ಮ ನ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಮಹಿಳೆಯರಿಗೆ ರಕ್ಷಣೆ ಇಲ್ಲದ ಸ್ಥಿತಿ ಇನ್ನೂ ಇದೆ ಎಂದು ವಿಷಾದಿಸಿದ ಮೋಹಿನಿ ಸಿದ್ದೇಗೌಡ ,ಕೋರ್ಟು ,ಕಚೇರಿ ,ವಕೀಲರು ಎಂದು ಆರೋಪಿಗಳು ಹೊರಬರುವ ಸಾಧ್ಯತೆಗಳು ಇದೆ ಎಂದು ಹೇಳಿದರು .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ