ಚಿಕ್ಕಮಗಳೂರು: ಇಲ್ಲಿನ ಜಿಲ್ಲಾಧಿಕಾರಿಗಳಾಗಿದ್ದ ಬಗಾದಿ ಗೌತಮ್ ಅವರನ್ನು ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ .
ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿದ್ದ ರಮೇಶ್ ಇಲ್ಲಿನ ಡಿ.ಸಿ.ಯಾಗಿ ಆಗಮಿಸುತ್ತಿದ್ದಾರೆ . ಜಿಲ್ಲಾಧಿಕಾರಿಗಳ ಕೋರಿಕೆ ಮೇರೆಗೆ ಈ ವರ್ಗಾವಣೆ ನಡೆದಿದೆ .
ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ರವರನ್ನು ಮಂಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ .
ಕುಮಾರ್ ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಆಗಮಿಸಲು ಪ್ರಯತ್ನಿಸುತ್ತಿದ್ದರು

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ