ಮಂಗಳವಾರ, ಫೆಬ್ರವರಿ 2, 2021

ದೇವಸ್ಥಾನದ ನೋಂದಣಿ ಕಡ್ಡಾಯ: ಹೆಚ್.ಎಲ್ ನಾಗರಾಜ್


 ಚಿಕ್ಕಮಗಳೂರು,ಫೆ.೦೨: ದಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಖಾಸಗಿ ಹಿಂದೂ ದೇವಸ್ಥಾನಗಳು ಒಂದು ತಿಂಗಳ ಒಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು, ನೋಂದಣಿ ಮಾಡಿಕೊಳ್ಳಲು ನಿರಾಕರಿಸಿದ್ದಲ್ಲಿ ಅಂತಹ ದೇವಸ್ಥಾನದ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ತಿಳಿಸಿದರು. 

ಧಾರ್ಮಿಕ ದತ್ತಿ ಸಮಿತಿ ೨೦೧೧ರ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ೨೦೧೫ ರಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ೨೦೧೧ ರನ್ನೊಳಗೊಂಡಂತೆ ಕಲಂ-೫೩ ರ ಅಡಿಯಲ್ಲಿ ಆಯಾಯ ಸಹಾಯಕ ಆಯುಕ್ತರು ನೋಂದಣಿ ಮಾಡುವುದು ಕಡ್ಡಾಯವಾಗಿರುತ್ತದೆ,
 ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಪ್ರತಿಯೊಂದು ಖಾಸಗಿ ಹಿಂದೂ ದೇವಸ್ಥಾನಗಳು ನೋಂದಣಿ ಮಾಡಿಕೊಳ್ಳಬೇಕು. 
ನೋಂದಣಿ ಮಾಡಿಕೊಂಡ ದೇವಸ್ಥಾನಗಳಿಗೆ ಅರ್ಚಕರನ್ನು ನೇಮಿಸಿ ಗ್ರೇಡ್‌ಗಳನ್ನು ನೀಡಲಾಗುತ್ತದೆ ಎಂದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...