ಚಿಕ್ಕಮಗಳೂರು :ನಗರದ ಐಡಿಎಸ್ ಜಿ ಕಾಲೇಜು ಆವರಣದ ಹೆಲಿಪ್ಯಾಡ್ ಗೆ ರಸ್ತೆ ನಿರ್ಮಿಸದಿದ್ದರೂ 19.38 ಲಕ್ಷ ರೂ ಬಿಲ್ ಪಾವತಿಸಿರುವ ಹಗರಣ ಬೆಳಕಿಗೆ ಬಂದಿದೆ .
ದಾಖಲೆ ಸಮೇತ ಈ ಹಗರಣವನ್ನು ಬೆಳಕಿಗೆ ತಂದಿರುವ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ರಸೂಲ್ ಖಾನ್ ಕಾಮಗಾರಿಗೆ ೨೧ ಲಕ್ಷ ರೂ ಗುತ್ತಿಗೆ ನೀಡಲಾಗಿತ್ತು. ಆದರೆ ರಸ್ತೆಯನ್ನು ನಿರ್ಮಿಸಿಲ್ಲ .ಹೀಗಿದ್ದೂ ಲೋಕೋಪಯೋಗಿ ಇಲಾಖೆಯಿಂದ ಹಣ ಪಾವತಿಸಲಾಗಿದೆ ಎಂದು ಆರೋಪಿಸಿದ್ದಾರೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಉಡಾಫೆ ಉತ್ತರವನ್ನು ನೀಡುತ್ತಾರೆ ಎಂದು ಹೇಳಿರುವ ಅವರು ಈ ಬಗ್ಗೆ ಲೋಕಾಯುಕ್ತ ಹಾಗೂ ಎಸಿಬಿಗೆ ದೂರು ಸಲ್ಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಈ ಪ್ರಕರಣದಲ್ಲಿ ಗುತ್ತಿಗೆದಾರನ ಗಮನಕ್ಕೆ ಬಾರದೆ ಬೇರೊಬ್ಬರಿಗೆ ಹಣ ಪಾವತಿಯಾಗಿರುವುದು ಅಚ್ಚರಿ ಮೂಡಿಸಿದೆ .
ಲೋಕೋಪಯೋಗಿ ಇಲಾಖೆಯಿಂದ ನಡೆದಿರುವ ಕಾಮಗಾರಿಗಳ ಸಮಗ್ರ ತನಿಖೆ ನಡೆದರೆ ಇನ್ನಷ್ಟು ಹಗರಣ ಬೆಳಕಿಗೆ ಬರುವ ಸಾಧ್ಯತೆಗಳು ಇವೆ .


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ