ಚಿಕ್ಕಮಗಳೂರು :ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಚಳವಳಿಗೆ ಕರ್ನಾಟಕದ ರೈತರು ಬೆಂಬಲ ವ್ಯಕ್ತಪಡಿಸಿದ್ದಾರೆ .
ಕಳೆದ 1ತಿಂಗಳಿನಿಂದ ರಾಜ್ಯದ ವಿವಿಧ ಭಾಗಗಳಿಂದ ರೈತರು ತಂಡೋಪತಂಡವಾಗಿ ದೆಹಲಿಗೆ ತೆರಳಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಚಳವಳಿಗೆ ಅಳಿಲು ಸೇವೆ ಸಲ್ಲಿಸಿದ್ದಾರೆ .
ಕರ್ನಾಟಕ ಜನಶಕ್ತಿ ತಂಡದ ಸಿರಿಮನೆ ನಾಗರಾಜ್, ವಾಸು ,ಮಲ್ಲಿಗೆ ಇತರೆ ಗೆಳೆಯರು ಈಗಾಗಲೇ ದೆಹಲಿಗೆ ತೆರಳಿದ್ದು , ಹೋರಾಟ ನಡೆಸುತ್ತಿರುವ ರೈತರನ್ನು ಭೇಟಿಯಾಗಿ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ .
ಚಿಕ್ಕಮಗಳೂರಿನಿಂದ ಕಳಸದ ವಾಸು ,ರಾಮುಕೌಳಿ, ಹಾಗಲಗಂಚಿ ವೆಂಕಟೇಶ್ ಸೇರಿದಂತೆ ಅನೇಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ