ಸೋಮವಾರ, ಫೆಬ್ರವರಿ 15, 2021

ರಾಮಮಂದಿರಕ್ಕೆ ಹಣ ನೀಡದವರ ಮನೆಗಳಿಗೆ ಗುರುತು: ಕುಮಾರಸ್ವಾಮಿ ಆರೋಪ


 "ರಾಮಮಂದಿರಕ್ಕಾಗಿ ಹಣ  ಕೊಡದವರ  ಮನೆಗಳನ್ನು ಗುರುತು ಮಾಡುತ್ತಿರುವುದು ಗಮನಕ್ಕೆ ಬಂದಿದ್ದು ಇದು ಹಿಟ್ಲರ್ ಆಡಳಿತ ನೆನಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ . 

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಹಿಟ್ಲರ್ ಕಾಲದಲ್ಲಿ ನಾಜಿ, ಮತ್ತು ಜ್ಯೂ ಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು.   ಆ ದಿನಗಳಲ್ಲೂ ಇದೇ ರೀತಿ ಮನೆಗಳಿಗೆ ಗುರುತು ಹಾಕಲಾಗುತ್ತಿತ್ತು   ಇದು ಎಲ್ಲಿಗೆ ಹೋಗುತ್ತೆ ? ಯಾತಕ್ಕೆ ಮನೆಗಳನ್ನು ಗುರುತು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ  ? 

ಆರ್ ಎಸ್ ಎಸ್ ಹುಟ್ಟಿದ್ದು ಜರ್ಮನಿಯಲ್ಲಿ. ನಾಜಿ ಹುಟ್ಟಿದ  ಕಾಲದಲ್ಲೇ ಎಂದು ಚರಿತ್ರಾಕಾರರು ಹೇಳುತ್ತಾರೆ.  ಆ ನೀತಿಗಳನ್ನೆ ಮುಂದುವರೆಸಿದರೆ  ಮುಂದೇನಾಗುತ್ತದೆ ಎನ್ನುವ ಭೀತಿ ಆವರಿಸಿದೆ ಎಂದು ಕಳವಳ ಹೊರಹಾಕಿದ್ದಾರೆ . 

ದೇಶದಲ್ಲಿ ಮಾತಾಡುವ ಮೂಲಭೂತ ಹಕ್ಕನ್ನೆ ಕಸಿಯುತ್ತಿದ್ದಾರೆ.ಸ್ವತಂತ್ರವಾಗಿ ಯಾರೂ ಭಾವನೆಗಳನ್ನೆ ವ್ಯಕ್ತಪಡಿಸಲು ಸಾಧ್ಯವಿಲ್ಲ.  ಅಘೋಷಿತ ತುರ್ತು ಪರಿಸ್ಥಿತಿ ಇದೆ  ವಾತಾವರಣ ನೋಡಿದಾಗ ಮುಂದೆ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂದಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...