ಬುಧವಾರ, ಫೆಬ್ರವರಿ 10, 2021

ಅತ್ಯಾಚಾರ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ


 ಚಿಕ್ಕಮಗಳೂರು :ಶೃಂಗೇರಿ ಹಾಗೂ ಮಲ್ಲಂದೂರಿನಲ್ಲಿ ಅಪ್ರಾಪ್ತ  ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ  ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಯಿತು .

ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸ್ಕ್ವೇರ್ ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳನ್ನು ಬಂಧಿಸದೆ ರಕ್ಷಣೆ ನೀಡಲಾಗುತ್ತದೆ, ಮಲ್ಲಂದೂರಿನ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿದರು .

 ಶೃಂಗೇರಿ ಪ್ರಕರಣದಲ್ಲಿ ಓರ್ವ ಅಧಿಕಾರಿಯನ್ನು ಅಮಾನತು ಮಾಡಿದರೆ ಮತ್ತೊಬ್ಬರನ್ನು ಎತ್ತಂಗಡಿ ಮಾಡಲಾಗಿದೆ.ಅಧಿಕಾರಿಗಳು ಪ್ರಭಾವಕ್ಕೆ ಮಣಿದಿರುವುದನ್ನು ಇದು ಸೂಚಿಸುತ್ತದೆ ಎಂದು ಟೀಕಿಸಿದರು. 

ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಇಲ್ಲವಾದಲ್ಲಿ  ಚಳವಳಿಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...