ಚಿಕ್ಕಮಗಳೂರು :ಶೃಂಗೇರಿ ಹಾಗೂ ಮಲ್ಲಂದೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಯಿತು .
ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸ್ಕ್ವೇರ್ ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳನ್ನು ಬಂಧಿಸದೆ ರಕ್ಷಣೆ ನೀಡಲಾಗುತ್ತದೆ, ಮಲ್ಲಂದೂರಿನ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿದರು .
ಶೃಂಗೇರಿ ಪ್ರಕರಣದಲ್ಲಿ ಓರ್ವ ಅಧಿಕಾರಿಯನ್ನು ಅಮಾನತು ಮಾಡಿದರೆ ಮತ್ತೊಬ್ಬರನ್ನು ಎತ್ತಂಗಡಿ ಮಾಡಲಾಗಿದೆ.ಅಧಿಕಾರಿಗಳು ಪ್ರಭಾವಕ್ಕೆ ಮಣಿದಿರುವುದನ್ನು ಇದು ಸೂಚಿಸುತ್ತದೆ ಎಂದು ಟೀಕಿಸಿದರು.
ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಇಲ್ಲವಾದಲ್ಲಿ ಚಳವಳಿಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ