ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಇದು ದುರಾದೃಷ್ಟಕರ ಘಟನೆ ಎಂದು ಖಂಡಿಸಿದ್ದಾರೆ .
ತಾತ್ವಿಕ ಬಿನ್ನಾಭಿಪ್ರಾಯ ದೈಹಿಕ ಹಲ್ಲೆ , ಹಿಂಸೆ ರೂಪ ತಾಳಬಾರದು ,ಮಸಿ ಬಳಿಯವುದು ಕನ್ನಡದ ಸಂಸ್ಕೃತಿ ಅಲ್ಲಎಂದು ಹೇಳಿದ್ದಾರೆ.
ಕ್ರಮಕ್ಕೆ ಒತ್ತಡ :ಸಾಹಿತಿ ಭಗವಾನ್ ಮೇಲೆ ಹಲ್ಲೆ ನಡೆಸಿರುವ ವಕೀಲೆ ಮೀರಾ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ಅಧಿಕವಾಗಿದೆ .
ನ್ಯಾಯಾಲಯದ ಆವರಣದಲ್ಲೇ ಇಂತಹ ಕೃತ್ಯಕ್ಕೆ ಮುಂದಾಗಿರುವ ಇವರ ಸದಸ್ಯತ್ವವನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆಯಬೇಕು ಎಂಬ ಒತ್ತಾಯವೂ ಕೇಳಿಬಂದಿದೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ