ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು .
ಇದೊಂದು ಗಂಭೀರ ಪ್ರಕರಣವಾಗಿದೆ .ಇದರಲ್ಲಿ ಬಿಜೆಪಿ' ಭಜರಂಗದಳ ,ವಿಶ್ವಹಿಂದೂ ಪರಿಷತ್ತಿನ ನಂಟು ಹೊಂದಿರುವ ಅನೇಕ ವ್ಯಕ್ತಿಗಳು ಆರೋಪಿಗಳಾಗಿದ್ದಾರೆ ಎಂದು ಟೀಕಿಸಿದರು .
ರಾಜಕೀಯ ಒತ್ತಡ ತಂದು ಪ್ರಕರಣವನ್ನು ಮೂಲೆಗುಂಪಾಗಿಸುವ ಯತ್ನವೂ ನಡೆದಿದೆ ಎಂದು ಶಂಕಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಂಶುಮಂತ್, ಮಾಜಿ ಅಧ್ಯಕ್ಷ ವಿಜಯ ಕುಮಾರ್, ಮಹಿಳಾ ಘಟಕದ ರೇಖಾ ಹುಲಿಯಪ್ಪ ,ರಾಷ್ಟ್ರೀಯ ಕಾರ್ಯದರ್ಶಿ ಸಂದೀಪ್ ಇತರರು ನೇತೃತ್ವ ವಹಿಸಿದ್ದರು .
ಈ ಮಧ್ಯೆ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಂಸತ್ ಸದಸ್ಯೆ ಶೋಭಾ ಕರಂದ್ಲಾಜೆ ಘಟನೆ ನಡೆದ ದಿನವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿ ತನಿಖೆಗೆ ಸೂಚಿಸಿದ್ದೇನೆ ಎಂದಿದ್ದಾರೆ .
ಸೂಕ್ಷ್ಮ ಪ್ರಕರಣವಾಗಿದ್ದು ಮಾಧ್ಯಮಗಳಲ್ಲಿ ಹೇಳಿಕೆ ನೀಡುವುದು ಸರಿ
ಯಲ್ಲ ಎಂದು ಭಾವಿಸಿದ್ದು . ಆರೋಪಿ ಚಿಕ್ಕಮ್ಮನ ಬಗ್ಗೆ ವಿಶೇಷ ತನಿಖೆ ನಡೆಯಬೇಕಾದ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ .


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ