ಗುರುವಾರ, ಫೆಬ್ರವರಿ 4, 2021

ಹಿಂದೂ ಧರ್ಮದ ಅವಹೇಳನ :ಸಾಹಿತಿ ಭಗವಾನ್ ಮುಖಕ್ಕೆ ಮಸಿ


 ಬೆಂಗಳೂರು :ಹಿಂದೂ ಧರ್ಮ ಹಾಗೂ ಶ್ರೀರಾಮನ ಬಗ್ಗೆ ಸದಾ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಸಾಹಿತಿ ಪ್ರೊ.ಭಗವಾನ್  ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಇಂದು ಕೋರ್ಟ್ ಆವರಣದಲ್ಲೇ ಮಸಿ ಬಳಿದಿದ್ದಾರೆ.

ಪ್ರಕರಣ ಒಂದರಲ್ಲಿ ಜಾಮೀನು ಪಡೆಯಲು ಕೋರ್ಟ್ ಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ಮೀರಾ ರಾಘವೇಂದ್ರ ಮಸಿ ಬಳಿದು, ಇಷ್ಟು ವಯಸ್ಸಾಗಿದೆ ಸದಾ ದೇವರ ಬಗ್ಗೆ ರಾಮನ ಬಗ್ಗೆ ಮಾತಾಡ್ತಿರ ನಾಚಿಕೆ ಆಗಲ್ವಾ ನಿಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ  .

 ಈ ವೇಳೆ ಭಗವಾನ್ ಅರೆಸ್ಟ್ ಮಾಡಿ ಅವರನ್ನ ಅಂತಾರೆ. ಅದಕ್ಕೆ ಪ್ರತಿಕ್ರಿಯಿಸುವ ಮೀರಾ ರಾಘವೇಂದ್ರ ನಾನು ಎಲ್ಲದಕ್ಕೂ ರೆಡಿ, ಜೈಲಿಗೆ ಹೋಗಲೂ ಸಿದ್ಧ ಎಂದು ಹೇಳಿರುವುದು ದೃಶ್ಯದಲ್ಲಿ ಸೆರೆಯಾಗಿದೆ.

 ಇನ್ನು ಭಗವಾನ್ ರನ್ನು ಗನ್ ಮ್ಯಾನ್ ಹಾಗೂ ಪೊಲೀಸರು ಕೋರ್ಟ್ ಆವರಣದಿಂದ ಕರೆದೊಯ್ದಿದ್ದಾರೆ. ಭಗವಾನ್ ಈಗ ದೂರು ನೀಡಲು ಠಾಣೆಗೆ ತೆರಳಿದ್ದಾರೆ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...