ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ರಕ್ಷಣೆ ನೀಡಿದ್ದಾರೆಂಬ ಆರೋಪದ ಮೇಲೆ ತನಿಖಾಧಿಕಾರಿ ಸಿದ್ದರಾಮಪ್ಪನ ಅವರನ್ನು ಅಮಾನತುಪಡಿಸಲಾಗಿದೆ .
ಕೆಲವರನ್ನು ಮಾತ್ರ ಈವರೆಗೆ ಬಂಧಿಸಿದ್ದು ಉಳಿದವರನ್ನು ಬಂಧಿಸುವಲ್ಲಿ ಮೀನಮೇಷ ಎಣಿಸುತ್ತಿದ್ದು , ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ಇವರ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ದೂರು ನೀಡಿದ್ದರು .
ಪೊಲೀಸರು ಬಾಲಕಿಯನ್ನು ರಕ್ಷಿಸಿದಾಗ ಸಮಿತಿ ಗಮನಕ್ಕೆ ತಂದಿಲ್ಲ. ದೂರು ನೀಡಿ 2ದಿನ ಕಳೆದಿದ್ದರು ಪ್ರಕರಣ ದಾಖಲಿಸಿರಲಿಲ್ಲ ಎಂದು ಆರೋಪಿಸಲಾಗಿತ್ತು.
ಈ ಪ್ರಕರಣದಲ್ಲಿ ಬಿಜೆಪಿ ಹಾಗೂ ಅದರ ಅಂಗ ಸಂಸ್ಥೆಯ ಅನೇಕ ಕಾರ್ಯಕರ್ತರು ಆರೋಪಿಗಳಾಗಿರುವುದು ಕಾಲ ಗಮನಾರ್ಹ ಸಂಗತಿಯಾಗಿದೆ .ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಹಾಗೂ ತನಿಖಾಧಿಕಾರಿ ಅಮಾನತಿಗೆ ಒತ್ತಾಯಿಸಿ ಕಾಂಗ್ರೆಸ್ ಘಟಕದ ವತಿಯಿಂದ ಶೃಂಗೇರಿ ಠಾಣೆಮುಂದೆ ಬೃಹತ್ ಪ್ರತಿಭಟನೆ ನಡೆದು ಮುತ್ತಿಗೆ ಹಾಕುವ ಯತ್ನ ನಡೆದಿತ್ತು.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ