ಚಿಕ್ಕಮಗಳೂರು :ಜಿಲ್ಲೆಯ ಕೊಪ್ಪ ಪಟ್ಟಣ ಪಂಚಾಯತಿಯ ಸಮುದಾಯ ಸಮನ್ವಯ ಅಧಿಕಾರಿ ಸುಬ್ಬಣ್ಣ ಎಂಬುವವರ ಮೇಲೆ ಖಾಸಗಿ ಲಾಡ್ಜ್ ನಲ್ಲಿ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆಂದು ಕೊಪ್ಪ ಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದು, ಈ ಸಂಭಂದ ಎಫ್.ಐ.ಆರ್ ದಾಖಲಾಗಿದೆ.
ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ, ಪಟ್ಟಣ ಪಂಚಾಯತಿ ಸದಸ್ಯ ಶ್ರೀನಿವಾಸ್ ಶೆಟ್ಟಿ ಹಾಗೂ ಪ್ರಸನ್ನ ಶೆಟ್ಟಿ ಎಂಬುವವರ ಮೇಲೆ ದೂರು ದಾಖಲಾಗಿದೆ.
ಜೆ.ಎಂ.ಜೆ ಲಾಡ್ಜ್ ನ ಕೊಠಡಿಯೊಂದರಲ್ಲಿ ತನ್ನ ಮೇಲೆ ಹಲ್ಲೆ ನಡೆಯುವ ವೇಳೆಯಲ್ಲಿ ಪ.ಪಂ ಮುಖ್ಯಧಿಕಾರಿ ಬಸವರಾಜ್ ಹಾಗೂ ಸಿಬ್ಬಂದಿ ಕಿಶೋರ್ ಇದ್ದು, ಸುಮ್ಮನೆ ನಿಂತಿದ್ದರು ಎಂದು ಆರೋಪಿಸಿದ್ದಾರೆ .
ಈ ಘಟನೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ನ್ಯಾಯ ದೊರಕಿಸ ಕೊಡಬೇಕೆಂದು ದೂರು ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಒಪ್ಪಿಗೆ ಮೇರೆಗೆ ಈ ಪ್ರಕರಣ ದಾಖಲಾಗಿದೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ