ಬುಧವಾರ, ಮಾರ್ಚ್ 3, 2021

ಮುಳ್ಳಯ್ಯನಗಿರಿ ರಕ್ಷಿತ ಅರಣ್ಯ ಘೋಷಣೆ ವಿರೋಧಿಸಿ ಮತ್ತೆ ಪ್ರತಿಭಟನೆ


 ಚಿಕ್ಕಮಗಳೂರು :ಮುಳ್ಳಯ್ಯನಗಿರಿ ಮೀಸಲು ಅರಣ್ಯ ಘೋಷಣೆ ಪ್ರಸ್ತಾವನೆ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಮತ್ತೆ ಪ್ರತಿಭಟನೆ ನಡೆದಿದೆ .

ಮುಳ್ಳಯ್ಯನಗಿರಿ ವ್ಯಾಪ್ತಿಯ ಗ್ರಾಮಸ್ಥರುವಿವಿಧ ಪಕ್ಷ ಸಂಘಟನೆಗಳ ಆಶ್ರಯದಲ್ಲಿ ಚಿಕ್ಕಮಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು  .

ಮುಳ್ಳಯ್ಯನಗಿರಿ ಮೀಸಲು ಅರಣ್ಯ ವಿರೋಧಿ ಹೋರಾಟ ಸಮಿತಿಯ ಆಶ್ರಯದಲ್ಲಿ ಪ್ರತಿಭಟನಾ ಸಭೆ ನಡೆದು ಸರ್ಕಾರ ಈ ಪ್ರಸ್ತಾವನೆಯನ್ನು ಕೈಬಿಡುವಂತೆ ಒತ್ತಾಯಿಸಿದರು .

ಉದ್ದೇಶಿತ ಪ್ರಸ್ತಾವನೆಯಿಂದ ಈ ಭಾಗದ ಗ್ರಾಮಸ್ಥರ ಬದುಕಿನ ಮೇಲೆ ಗಂಭೀರ ಪರಿಣಾಮ ಎದುರಾಗಲಿದೆ .ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಕಾನೂನು ಜಾರಿ ನೆಪದಲ್ಲಿ ಜನರಿಗೆ ಕಿರುಕುಳ ನೀಡುವ ಸಾಧ್ಯತೆ ಇದೆ ಎಂದು ಆರೋಪಿಸಿದರು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...