ಬುಧವಾರ, ಮಾರ್ಚ್ 10, 2021

ಸಿಡೀ ಹಗರಣ :ಕಾನೂನು ತಂದರೆ ವಿಧಾನಸೌಧದಲ್ಲಿ ಕೊಠಡಿ ಬುಕ್ -ಮಲಾಲಿ ವ್ಯಂಗ್ಯ


 ಚಿಕ್ಕಮಗಳೂರು: ರಾಸಲೀಲೆ ಸೇರಿದಂತೆ ರಾಜಕಾರಣಿಗಳ ವಿರುದ್ಧ ಸುಳ್ಳು ಆರೋಪ ಹೊರಿಸಿ ಸೀಡಿಗಳನ್ನು ಬಿಡುಗಡೆ ಮಾಡುವುದನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರುವುದರಲ್ಲಿ ಯಾವುದೇ ಅರ್ಥ ಇಲ್ಲ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮಲಾಲಿ ಅಭಿಪ್ರಾಯಿಸಿದ್ದಾರೆ .

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಇಂತಹ ಕಾನೂನುಗಳು ರಾಜಕಾರಣಿಗಳಿಗೆ ಪರವಾನಿಗೆ ನೀಡಿದಂತೆ ಆಗುತ್ತದೆ. ಮುಂದೆ ಇಂಥ ಕೃತ್ಯಗಳಿಗೆ ವಿಧಾನ ಸೌಧದಲ್ಲಿ ಕೊಠಡಿಗಳನ್ನು ಕಾದಿರಿಸುತ್ತಾರೆ ಎಂದು ವ್ಯಂಗ್ಯವಾಡಿದರು .

ವೇಶ್ಯಾವಾಟಿಕೆಯನ್ನು ಮೊದಲು ನಿಲ್ಲಿಸಬೇಕು ರಾಜಕಾರಣಿಗಳು ತಮ್ಮ ಮನೆ ,ಕುಟುಂಬ ,ಸಾಮಾಜಿಕ ಜೀವನದ ಬಗ್ಗೆ ಯೋಚನೆ ಮಾಡುವುದು ಅಗತ್ಯ .ಕೆಲವು ರಾಜಕಾರಣಿಗಳಿಗೆ ಇದೊಂದು ಹವ್ಯಾಸವಾಗಿ ಹೋಗಿದೆ.ಈವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ  ಎಂದು ಬೇಸರ ಹೊರಹಾಕಿದರು .

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ದೊಡ್ಡ ದುರಂತ ಈ ಘಟನೆಯ ಹಿಂದೆ ದೊಡ್ಡ ಷಡ್ಯಂತ್ರವಿದೆ ,ಯಾರನ್ನೊ  ಹಣಿಯಬೇಕು, ರಾಜೀನಾಮೆ ಕೊಡಿಸಬೇಕು ಎನ್ನುವ ಉದ್ದೇಶದಿಂದ ವ್ಯವಸ್ಥಿತವಾಗಿ ಮಾಡಿದ ಪಿತೂರಿ ಎಂದು ಟೀಕಿಸಿದರು .

ಸುಳ್ಳು ಆರೋಪ ಹೊರಿಸಿ ಈ ರೀತಿ ಮಾಡುವವರ ವಿರುದ್ಧ ಮೊಕದ್ದಮೆ ಹೂಡುವುದು ಸ್ವಾಗತಾರ್ಹ .ಖಾಸಗಿ ವ್ಯಕ್ತಿತ್ವ  ಹಾಳು ಮಾಡುವುದನ್ನು ನಿಲ್ಲಿಸಬೇಕು .ಕಾನೂನಿನಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...