ಮಂಗಳವಾರ, ಮಾರ್ಚ್ 16, 2021

ಮೀಸಲು ಅರಣ್ಯ ವಿರೋಧಿಸಿ ಮತ್ತೆ ಚುನಾವಣೆ ಬಹಿಷ್ಕಾರ :ಸರಣಿ ಸಭೆ


 ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿಗೆ ಕಂಟಕಪ್ರಾಯವಾಗಿರುವ ಹುಲಿಯೋಜನೆ, ಮೀಸಲು ಅರಣ್ಯ ,ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕಾರಕ್ಕೆ ಸಿದ್ಧತೆ ನಡೆದಿದೆ .

ಯೋಜನೆ ವ್ಯಾಪ್ತಿಗೆ ಒಳಪಡುವ ಗ್ರಾಮ ಪಂಚಾಯ್ತಿಗಳಿಗೆ ಈ ಹಿಂದೆ ನಡೆದ ಚುನಾವಣೆಯನ್ನು ಜನ ಬಹಿಷ್ಕರಿಸಿದ್ದರು.

ಮತ್ತೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ನಾಮಪತ್ರ ಸಲ್ಲಿಸದಂತೆ ಸರಣಿ ಸಭೆಗಳು ನಡೆಯುತ್ತಿವೆ . ಬಹುತೇಕ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳು ಕಡಿಮೆ ಇವೆ .

ಕಳೆದ 1ವಾರದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಣಿ ಸಭೆಗಳನ್ನು ನಡೆಸಿ ಚುನಾವಣೆಯನ್ನು ಬಹಿಷ್ಕರಿಸುವಂತೆ ಜನ ನಿರ್ಧರಿಸಿದ್ದಾರೆ .

ಒಂದೆರಡು ಕಡೆ ನಾಮಪತ್ರ ಸಲ್ಲಿಕೆ ಆಗಿದ್ದರೂ ಅದನ್ನು ಹಿಂದೆ ತೆಗೆಸುವ ವಿಶ್ವಾಸವನ್ನು ಜನ ಹೊಂದಿದ್ದಾರೆ .

ಮುಳ್ಳಯ್ಯನಗಿರಿ ಮೀಸಲು ಅರಣ್ಯ ಘೋಷಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು ಯಾವುದೇ ಕ್ಷಣದಲ್ಲಿ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಗಳು ಇವೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...