ಚಿಕ್ಕಮಗಳೂರು; ಇದೇ ತಿಂಗಳ ೨೦ ರಂದು ಮಧ್ಯಾಹ್ನ ಶಿವಮೊಗ್ಗದಲ್ಲಿ ನಡೆಯಲಿರುವ ರೈತ ಪಂಚಾಯತ್ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಲಿದೆ .
ಕಾರ್ಯಕ್ರಮದ ಯಶಸ್ವಿಗೆ ಸಂಘಟಕರು ಟೊಂಕಕಟ್ಟಿ ನಿಂತಿದ್ದು ಪ್ರತಿ ಹಳ್ಳಿ ಹಳ್ಳಿಗಳಿಗೂ ತಲುಪಿ ಸಭೆಗಳನ್ನು ನಡೆಸುತ್ತಿದ್ದಾರೆ .
ಹೊಸ ಕೃಷಿ ಕಾಯ್ದೆಯ ಸಾಧಕ ಬಾಧಕಗಳನ್ನು ಮನವರಿಕೆ ಮಾಡಿಕೊಡುವ ಕರಪತ್ರಗಳನ್ನು ಹಂಚಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸುತ್ತಿದ್ದಾರೆ .
ಐಕ್ಯ ಹೋರಾಟ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ಉತ್ತಮ ಬೆಂಬಲ ವ್ಯಕ್ತವಾಗಿದೆ .
ಅಂದು ನಡೆಯುವ ಕಾರ್ಯಕ್ರಮ ರೈತ ಹೋರಾಟದಲ್ಲಿ ಹೊಸ ಭರವಸೆ - ಆಶಯ -ಹೆಜ್ಜೆ ಗುರುತನ್ನು ಮೂಡಿಸುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ .
ಹೊಸ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಚಳವಳಿ ಈಗಾಗಲೇ ೧೦೦ ದಿನಗಳನ್ನು ಪೂರೈಸಿದ್ದು 'ದಕ್ಷಿಣ ಭಾರತದಲ್ಲಿಯೂ ಹೋರಾಟವನ್ನು ತೀವ್ರಗೊಳಿಸುವ ಕಹಳೆ ರೈತ ಪಂಚಾಯತ್ ನಲ್ಲಿ ಮೊಳಗಲಿದೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ