ಶುಕ್ರವಾರ, ಮಾರ್ಚ್ 19, 2021

ವಿದ್ಯುತ್ ಅವಘಡ: ಸುಟ್ಟು ಕರಕಲಾದ ಮನೆ


 ಚಿಕ್ಕಮಗಳೂರು :ಬದುಕಿನ ನಿರ್ವಹಣೆಗೆ ಸಣ್ಣ ಹೋಟೆಲ್ಲನ್ನು ಇಟ್ಟುಕೊಂಡಿದ್ದ  ಜಯನಗರದ ರೂಪಾ ಅವರ ಮನೆಗೆ ಇಂದು ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಸಂಭವಿಸಿದೆ .

ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ .ಕ್ಷಣಮಾತ್ರದಲ್ಲಿ ಬೆಂಕಿ ಮನೆಯನ್ನು ಆವರಿಸಿತು. ಅಕ್ಕಪಕ್ಕದವರು ಬೆಂಕಿ ನಂದಿಸಲು ಮಾಡಿದ ಪ್ರಯತ್ನ ವಿಫಲವಾಗಿದೆ .

ಇತರ ಮನೆಗಳಿಗೂ ಬೆಂಕಿ ಹರಡುವ ಸಾಧ್ಯತೆಗಳಿದ್ದವು , ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಬಹಳಷ್ಟು ವಸ್ತುಗಳು ಸುಟ್ಟು ಕರಕಲಾಗಿ ಹೋಗಿ ಭಾರಿ ನಷ್ಟ ಸಂಭವಿಸಿದೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...