ಶನಿವಾರ, ಮಾರ್ಚ್ 20, 2021

ಚಿಕ್ಕಮಗಳೂರು: ಚಲನ್ ಗೋಲ್ಮಾಲ್ :೩೦ ಪ್ರಕರಣ ಬೆಳಕಿಗೆ


 ಚಿಕ್ಕಮಗಳೂರು :ಇಲ್ಲಿನ ನಗರಸಭೆಯಲ್ಲಿ ನಡೆದಿರುವ ಆಸ್ತಿ ತೆರಿಗೆ ಪಾವತಿ ಚಲನ್ ಮೇಲೆ ನಕಲಿ ಸೀಲು ,ಸಹಿ ಹಾಕಿ ಹಣ ಗುಳುಂ ಮಾಡಿದ ೩೦ ಪ್ರಕರಣಗಳು ಬೆಳಕಿಗೆ ಬಂದಿವೆ.

ಚಲನ್ ಒಂದರಲ್ಲಿ ದಿನಾಂಕ ಮತ್ತು ಮೊಹರಿನ ದಿನಾಂಕದಲ್ಲಿ ಕಂಡುಬಿಟ್ಟೆ ವ್ಯತ್ಯಾಸದಿಂದ ಈ ಹಗರಣ  ಬೆಳಕಿಗೆ ಬಂದಿತ್ತು .

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಗರಸಭೆ ಆಯುಕ್ತ ಬಿ ಸಿ ಬಸವರಾಜ್  ಪರಿಶೀಲನೆ ನಡೆಸಲು ಸೂಚನೆ ನೀಡಿದ್ದು ೩೦ ಪ್ರಕಣಗಳು ಪತ್ತೆಯಾಗಿವೆ .

ಈ ಸಂಬಂಧ ಬಿಲ್ ಕಲೆಕ್ಟರ್ ಶ್ಯಾಮ್ ಹಾಗೂ ಗುತ್ತಿಗೆದಾರ ಕೇಶವ ವಿರುದ್ಧ ನಗರ ಠಾಣೆಗೆ ದೂರು ನೀಡಿದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ .

ಕೇಶವ್ ಆಡಳಿತ ಬಿಜೆಪಿ ಪಕ್ಷದ ಸಕ್ರಿಯ ಸದಸ್ಯನಾಗಿದ್ದು ರಕ್ಷಣೆಗೆ ತೆರೆಮರೆಯ ಯತ್ನ ,ಒತ್ತಡಗಳು ಗಳು ನಡೆದಿವೆ .

ಈ ಮಧ್ಯೆ ಜಿಲ್ಲಾಧಿಕಾರಿಗಳು ನಗರಸಭೆಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿ ಮುಂದಿನ ಕ್ರಮದ ಜೊತೆಗೆ ಬಿಲ್ ಕಲೆಕ್ಟರ್ ಶ್ಯಾಮ್ ನನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...