ಭಾನುವಾರ, ಮಾರ್ಚ್ 21, 2021

ಮೀಸಲು ಅರಣ್ಯ ಪ್ರಸ್ತಾವನೆ ಹಿಂದೆ ಪಡೆಯಲು ಒತ್ತಾಯ


 ಚಿಕ್ಕಮಗಳೂರು :ರಾಜ್ಯ ಸಚಿವ ಸಂಪುಟದ ಮುಂದಿರುವ ಮುಳ್ಳಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ಪ್ರಸ್ತಾವನೆಯನ್ನು ಹಿಂದೆ ಪಡೆಯುವಂತೆ ಹೋರಾಟ ಸಮಿತಿ ಒತ್ತಾಯಿಸಿದೆ .

ಈ ಭಾಗದ ಅರಣ್ಯದಲ್ಲಿರುವ ಜನವಸತಿ ಪ್ರದೇಶಗಳ ಪುರಾವೆಗಳನ್ನು ಗಮನಿಸಿ ಧೃಢ ಪಡಿಸಿಕೊಂಡು ಸೂಕ್ತ ಪರಿಹಾರ ನೀಡುವಂತೆ ಸಮಿತಿ ಆಗ್ರಹಿಸಿದೆ .

ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶದ15,897 ಎಕರೆಯನ್ನು ಸಂಪುಟದ ಅನುಮೋದನೆಗಾಗಿ ಜಿಲ್ಲಾಡಳಿತ ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ  ಸರ್ಕಾರಕ್ಕೆ ಸಲ್ಲಿಸಿದೆ ಎಂದು ಸಮಿತಿ ಪ್ರಧಾನ ಸಂಚಾಲಕ ವಿಜಯಕುಮಾರ್ ಆರೋಪಿಸಿದ್ದಾರೆ .

ಸಮಿತಿಯ ಹೋರಾಟದ ಫಲವಾಗಿ 5ಸಾವಿರ ಎಕರೆ ಪ್ರದೇಶವನ್ನು ಕೈಬಿಡಲಾಗಿದ್ದರೂ ಯಾವ ಸರ್ವೆ ನಂಬರ್  ಎಂಬುದನ್ನು ಸ್ಪಷ್ಟಪಡಿಸಿಲ್ಲ .  ಈ ವಿಷಯದಲ್ಲಿ ಅನೇಕ ಗೋಜಲು ಗಳಿದ್ದು ಸೂಕ್ತ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...