ಸೋಮವಾರ, ಮಾರ್ಚ್ 29, 2021

ಮಾಜಿ ಸಚಿವ ಜಾರಕಿಹೊಳಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ


 ಚಿಕ್ಕಮಗಳೂರು :ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ .

 ಈ ವಿಷಯವನ್ನು ಗಂಭೀರವಾಗಿ ಚರ್ಚಿಸಿದ ಪಕ್ಷದ ಕಾರ್ಯಕಾರಿಣಿ ಸಭೆ , ಪ್ರಕರಣವನ್ನು ದಿಕ್ಕು ತಪ್ಪಿಸುವ ಯತ್ನ ನಡೆದಿದ್ದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರನ್ನು ಉದ್ದೇಶಪೂರ್ವಕವಾಗಿ ಎಳೆದು ತಂದಿರುವುದನ್ನು ಖಂಡಿಸಿತು .

ಬೆಳಗಾವಿಯಲ್ಲಿ ಡಿ .ಕೆ .ಶಿವಕುಮಾರ್ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವುದನ್ನು ಪಕ್ಷ ಖಂಡಿಸಿತಲ್ಲದೆ  ರಮೇಶ್ ಜಾರಕಿಹೊಳಿ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಸಭೆ ನಿರ್ಧರಿಸಿತು .

ಪಕ್ಷದ ಜಿಲ್ಲಾ ಅಧ್ಯಕ್ಷ ಅಂಶುಮಂತ್, ಮಾಜಿ ಶಾಸಕರಾದ ಬಿ ಎಲ್ ಶಂಕರ್,ಮೋಟಮ್ಮ , ಗಾಯತ್ರಿಶಾಂತೇಗೌಡ ,ಶ್ರೀನಿವಾಸ್ ಇತರರು ಪಾಲ್ಗೊಂಡಿದ್ದರು .


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...