ಚಿಕ್ಕಮಗಳೂರು :ಜಿಲ್ಲೆಯ ಮಲೆನಾಡ ಭಾಗವನ್ನು ಕಾಡುತ್ತಿರುವ ಮುಳ್ಳಯ್ಯನಗಿರಿ ಮೀಸಲು ಅರಣ್ಯ , ಹುಲಿ ಸಂರಕ್ಷಣಾ ರೋಜನೆ, ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಸರ್ಕಾರದ ಸ್ಪಷ್ಟ ನಿಲುವಿಗೆ ಒತ್ತಾಯಿಸಿ ಸರಣಿ ಸಭೆಗಳು ಆರಂಭವಾಗಿದೆ .
ಮುಳ್ಳಯ್ಯನಗಿರಿ ,ಜಾಗರ, ಕೊಳಗಾಮೆ ,ಖಾಂಡ್ಯ, ಸಂಗಮೇಶ್ವರಪೇಟೆ ಸೇರಿದಂತೆ ಹಲವು ಗ್ರಾಮಗಳ ಜನರು ಈಗಾಗಲೇ ವಿವಿಧ ಹಂತಗಳಲ್ಲಿ ಹೋರಾಟಗಳನ್ನು ಮಾಡಿದ್ದಾರೆ .
ಗ್ರಾಮ ಪಂಚಾಯ್ತಿ ಚುನಾವಣೆಗಳನ್ನು ಮೊದಲ ಹಂತದಲ್ಲಿ ಬಹಿಷ್ಕರಿಸಲಾಗಿದ್ದುಎರಡನೇ ಹಂತದ ಚಹನಾವಣೆ ದಿನಾಂಕ ಪ್ರಕಟವಾಗಿದ್ದು ಮುಂದಿನ ನಿರ್ಧಾರ ಕುರಿತು ಚರ್ಚಿಸಲು ಸಭೆಗಳು ನಡೆಯುತ್ತಿವೆ .
ಮಲೆನಾಡ ಜನರ ಬದುಕಿಗೆ ಮಾರಕವಾಗಿರುವ ಈ ಯೋಜನೆಗಳ ಬಗ್ಗೆ ಸರ್ಕಾರ ಹಾಗೂ ನ್ಯಾಯಾಲಯದಿಂದ ಈವರೆಗೂ ಯಾವುದೇ ಸ್ಪಷ್ಟ ಆದೇಶ ಬಾರದಿರುವುದು ಜನರನ್ನು ಆತಂಕಕ್ಕೆ ದೂಡಿದೆ .
ಈ ಮಧ್ಯೆ ಚುನಾವಣೆ ಬಹಿಷ್ಕರಿಸುವ ನಿಟ್ಟಿನಲ್ಲಿ ಕೆಲವು ಗ್ರಾಮಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು , ಒಂದೊಮ್ಮೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ .


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ