ಸೋಮವಾರ, ಮಾರ್ಚ್ 29, 2021

ಕ್ಷೇತ್ರ ಪುನರ್ ವಿಂಗಡನೆ ಪ್ರಸ್ತಾಪ :ವೈಎಸ್ವಿದತ್ತ ತೀವ್ರ ಆಕ್ಷೇಪ


 ಚಿಕ್ಕಮಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾವನೆಗೆ ಮಾಜಿ ಶಾಸಕ ವೈಎಸ್ ವಿ ದತ್ತಾ ತೀರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ .

ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಂದಿನ ಹತ್ತು ವರ್ಷಗಳ ಅವಧಿಗೆಮೀಸಲಾತಿ ನಿಗದಿಪಡಿಸಿ   ಚುನಾವಣಾ ಆಯೋಗ ಈ ಹಿಂದೆ ನಿರ್ಧಾರ ಮಾಡಿತ್ತು ಎಂದರು .

ಸರ್ಕಾರ ಮತ್ತೆ ಈಗ 5ವರ್ಷಗಳಿಗೆ ಸೀಮಿತಗೊಳಿಸಿ ಕ್ಷೇತ್ರಗಳ ಮರು ವಿಂಗಡಣೆಗೆ ಕರಡು ಪ್ರಸ್ತಾವನೆಯನ್ನು ಚುನಾವಣೆ ಆಯೋಗಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದ್ದು ಇದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪಿಸಿದರು .

ಸರ್ಕಾರದ ಹಸ್ತಕ್ಷೇಪ ಸರಿಯಲ್ಲ ಎಂದಿರುವ ದತ್ತ ಸರ್ಕಾರದ ಕೈಗೊಂಬೆಯಾಗದೆ  ಚುನಾವಣಾ ಆಯೋಗ ಈ ವಿಷಯದಲ್ಲಿ ಖಡಕ್ ನಿರ್ಧಾರ ಮಾಡಬೇಕಿತ್ತು   ಎಂದಿರುವ ಅವರು ಕಾನೂನಾತ್ಮಕ ಹೋರಾಟ ಅನಿವಾರ್ಯ ಎಂದರು . 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...