ಸೋಮವಾರ, ಮಾರ್ಚ್ 15, 2021

ತರೀಕೆರೆ ಶಾಸಕರ ದೌರ್ಜನ್ಯ :ಸಿಎಂ ಪುತ್ರನ ಮುಂದೆ ಕುಟುಂಬಸ್ಥರ ಕಣ್ಣೀರು

 ಚಿಕ್ಕಮಗಳೂರು :ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತರೀಕೆರೆ ಕ್ಷೇತ್ರದ ಶಾಸಕ  ಸುರೇಶ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನೊಂದ ಕುಟುಂಬಸ್ಥರು ಸಿಎಂ ಪುತ್ರ ವಿಜಯೇಂದ್ರ ನ ಮುಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ .



ರೀಕೆರೆ ಲಕ್ಕವಳ್ಳಿ ಸಮೀಪ ಚಿಕ್ಕಮಗಳೂರು ಮೂಲದ ಪ್ರಸನ್ನ 7 ವರ್ಷದ ಹಿಂದೆ  50 ಎಕರೆ  ಜಮೀನು ಖರೀದಿ ಮಾಡಿದ್ದರು.

ಕಳೆದ ಒಂದು ವರ್ಷದಿಂದ ತರೀಕೆರೆ ಶಾಸಕ ಸುರೇಶ್ ದೌರ್ಜನ್ಯ ನಡೆಸುತ್ತಿರುವ ಬಗ್ಗೆ ಆರೋಪ ಮಾಡಿದ  ಪ್ರಸನ್ನ ಕುಟುಂಬ ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಶಾಸಕರು ಹಿಂಬಾಲಕರ ಮೂಲಕ ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿದರು.

ನ್ಯಾಯ  ಇಲ್ಲವೇ ದಯಾಮರಣ ಕೊಡಿ ಎಂದು ಆಕ್ರೋಶ ಹೊರಹಾಕಿ ಬಿಕ್ಕಿ ಬಿಕ್ಕಿ ಅತ್ತರು .ಪೊಲೀಸ್ ಠಾಣೆಗೆ ದೂರು ನೀಡಿದರೆ ನ್ಯಾಯ ಸಿಗುತ್ತಿಲ್ಲ ಎಂದು ಕುಟುಂಬಸ್ಥರು ದೂರಿದರು 

ಚಿಕ್ಕಮಗಳೂರು ನಗರದ ಖಾಸಗಿ ಕಾರ್ಯಕ್ರಮದಲ್ಲಿ  ಈ  ಘಟನೆ ನಡೆದಿದ್ದು ವಿಜಯೇಂದ್ರ ಕ್ಷಣಕಾಲ ಮುಜುಗರಕ್ಕೆ ಒಳಗಾದರು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...