ಬುಧವಾರ, ಮಾರ್ಚ್ 31, 2021

ಪಂಚಾಯಿತಿ ಚುನಾವಣೆ :ಮತ ಎಣಿಕೆ ಪೂರ್ಣ :ವಿಜಯೋತ್ಸವ


 ಚಿಕ್ಕಮಗಳೂರು :ಜಿಲ್ಲೆಯಲ್ಲಿ 32 ಗ್ರಾಮ ಪಂಚಾಯಿತಿಗಳ 257  ಸ್ಥಾನಗಳಿಗೆ ನಡೆದ  ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಪೂರ್ಣಗೊಂಡಿತು .

ಒಟ್ಟು 663 ಅಭ್ಯರ್ಥಿಗಳು  ಕಣದಲ್ಲಿ ಇದ್ದು ಬೆಳಿಗ್ಗೆ ೮ ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಯಿತು .

ಚಿಕ್ಕಮಗಳೂರು ಸೇರಿದಂತೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಭರದಿಂದ ಸಾಗಿದ್ದು ಸಿಬ್ಬಂದಿ ನೇಮಕ ಸೇರಿದಂತೆ  ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು .

ಮತ ಎಣಿಕೆ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಇದ್ದರೂ ಕೂಡ ಅದನ್ನು ಲೆಕ್ಕಿಸದೆ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು . ಕೋವಿಡ್ ನಿಯಮಗಳ ವ್ಯಾಪಕ ಉಲ್ಲಂಘನೆಯಾಗಿತ್ತು .

ಗೆದ್ದವರು ಬಿಗಿ ವಿಜಯೋತ್ಸವ ಆಚರಿಸಿದರೆ ,ಸೋತವರು ಸಪ್ಪೆ ಮುಖ ಹಾಕಿಕೊಂಡು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...