ಬುಧವಾರ, ಮಾರ್ಚ್ 17, 2021

ಚಾರ್ಮಾಡಿ ಘಾಟಿಯಲ್ಲಿ ಬಸ್ ಸಂಚಾರಕ್ಕೆ ಅವಕಾಶ


 ಚಿಕ್ಕಮಗಳೂರು :ಭಾರಿ ಮಳೆಯಿಂದ ಕಳೆದ 2ವರ್ಷಗಳಿಂದ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದ ಚಾರ್ಮಾಡಿ ಘಾಟಿಯಲ್ಲಿ ಕೊನೆಗೂ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ .

ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೀಡಿದ ವರದಿ ಆಧರಿಸಿ ಜಿಲ್ಲಾಧಿಕಾರಿ ಕೆ.ಎನ್ . ರಮೇಶ್ ಆದೇಶ ನೀಡಿದ್ದಾರೆ .
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್, 6ಚಕ್ರದ ಲಾರಿಗಳು, ಟೆಂಪೋ ಸೇರಿದಂತೆ  ಇನ್ನಿತರೆ ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ .
6 ಚಕ್ರ ಮೇಲ್ಪಟ್ಟ ವಾಹನಗಳಿಗೆ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ . ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ .
ಈ ಭಾಗದಲ್ಲಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಕೊಟ್ಟಿಗೆಹಾರ , ಚಾರ್ಮಾಡಿ ಭಾಗದ ಗ್ರಾಮಸ್ಥರು ತೀವ್ರ ಒತ್ತಾಯವನ್ನು ಹೇರಿದ್ದನ್ನು  ಇಲ್ಲಿ ನೆನಪಿಸಬಹುದು .
ಜಿಲ್ಲಾಡಳಿತ ಆದೇಶದಿಂದಾಗಿ ದಕ್ಷಿಣ ಕನ್ನಡ, ಉಡುಪಿ  ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ .

1 ಕಾಮೆಂಟ್‌:

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...