ಮಂಗಳವಾರ, ಮಾರ್ಚ್ 9, 2021

ಜನಪ್ರತಿನಿಧಿಗಳ ರಾಜೀನಾಮೆಗೆ ಜೆಡಿಎಸ್ ಆಗ್ರಹ


 ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಭಾವಿ ರಾಜಕಾರಣಿಗಳು ಇದ್ದರೂ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಲು ಅವರಿಗೆ ಕಾಳಜಿ ಇಲ್ಲದಿರುವುದರಿಂದ ಅಧಿಕಾರದಲ್ಲಿ ಮುಂದುವರಿಯಲು ಅರ್ಹರಲ್ಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್ ಎಚ್ ದೇವರಾಜ್ ಒತ್ತಾಯಿಸಿದ್ದಾರೆ .

ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಪ್ರಭಾವಿಗಳು. ಆದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾತ್ರ ಶೂನ್ಯ ಎಂದು ವ್ಯಂಗ್ಯವಾಡಿದ ಅವರು ಇವರು ಕೇವಲ ಭಾಷಣಕ್ಕೆ ಸೀಮಿತರಾಗಿದ್ದಾರೆ ಎಂದು ಟೀಕಿಸಿದ್ದಾರೆ .

ರಾಜ್ಯ ಬಜೆಟ್ ನಲ್ಲಿ  ಜಿಲ್ಲೆಗೆ ಆದ್ಯತೆ ನೀಡದೆ ನಿರಾಸೆಯಾಗಿದೆ .  ವೈದ್ಯಕೀಯ , ಎಂಜಿನಿಯರಿಂಗ್ ಕಾಲೇಜು ಇನ್ನಿತರೆ ಯೋಜನೆಗಳ ಪ್ರಸ್ತಾವವೂ ಇಲ್ಲ ಎಂದು ಛೇಡಿಸಿದರು .

ಕ್ಷೇತ್ರದ ಶಾಸಕ ಸಿ ಟಿ ರವಿ ತಮಿಳುನಾಡಿನ ಉಸ್ತುವಾರಿಯನ್ನು ಹೊತ್ತಿದ್ದು ಗೊತ್ತಿಲ್ಲದ ಭಾಷೆಯಲ್ಲಿ ಮಾತನಾಡಿ ಕ್ಷೇತ್ರದ ಜನ ತಲೆತಗ್ಗಿಸುವಂತೆ ಮಾಡುತ್ತಿದ್ದರೆಂದು ವಿಷಾದಿಸಿದರು . 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...