ಚಿಕ್ಕಮಗಳೂರು : ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ ಪ್ರಸಕ್ತ ಸಾಲಿನಲ್ಲಿ 368. 29 ಕೋಟಿ ರೂ ಆದಾಯ ನಿರೀಕ್ಷಿಸಿದ್ದು 143.63ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಿದ್ದು, 224 ಕೋಟಿ ರೂ ಉಳಿತಾಯ ಆಗಲಿದೆ .
ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಪ್ರಾಧಿಕಾರದ ಅಧ್ಯಕ್ಷ ಆನಂದ ಹಾಗೂ ಪ್ರಭಾರಿ ಆಯುಕ್ತ ಬಸವರಾಜ್ ಬೈಪಾಸ್ ರಸ್ತೆಯಿಂದ ದಂಟರಮಕ್ಕಿ ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ಅತ್ಯಾಧುನಿಕ ವಸತಿ ಬಡಾವಣೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು .
ಉದ್ಯಾನವನ, ಕೆರೆಗಳ ಅಭಿವೃದ್ಧಿ ಜೊತೆಗೆ ಯಗಚಿ ಹಳ್ಳದ ಇಕ್ಕೆಲಗಳ ಬಫರ್ ಜಾಗವನ್ನು ಗುರುತಿಸಿ ಒತ್ತುವರಿ ತಡೆಯಲಾಗುತ್ತದೆ ಎಂದು ತಿಳಿಸಿದರು.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ