ಶನಿವಾರ, ಸೆಪ್ಟೆಂಬರ್ 24, 2022

ಚಿಕ್ಕಮಗಳೂರು-ಬೇಲೂರು-ಹಾಸನ ರಾಜ್ಯ ಹೆದ್ದಾರಿ ಇನ್ನು ಮುಂದೆ ರಾಷ್ಟೀಯ ಹೆದ್ದಾರಿ- ಸಿ.ಟಿ. ರವಿ

 


ಚಿಕ್ಕಮಗಳೂರು: ಇಲ್ಲಿನ ಎ.ಐ.ಟಿ. ಸರ್ಕಲ್ ರಾಷ್ಟ್ರೀಯ  ಹೆದ್ದಾರಿ ೧೭೩ ರಿಂದ ಪ್ರಾರಂಭವಾಗಿ ಬೇಲೂರು - ಹಾಸನ - ಹೊಳೆನರಸೀಪುರ - ಬಿಳಿಕೆರೆ ರಸ್ತೆಯನ್ನು ರಾಷ್ಟ್ರೀಯ  ಹೆದ್ದಾರಿಯಾಗಿ  ಮೇಲ್ದರ್ಜೆಗೇರಿಸಿ  ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. 

ಈ ಮೂಲಕ ಚಿಕ್ಕಮಗಳೂರಿನ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಈ ಹಿಂದೆ ಬೇಲೂರಿನಿಂದ ಬಿಳಿಕೆರೆ ರಸ್ತೆಯನ್ನು   ಮೇಲ್ದರ್ಜೆಗೇರಿಸುವ ಸಂದರ್ಭ ಚಿಕ್ಕಮಗಳೂರಿನಿಂದ ಬೇಲೂರಿನವರೆಗೆ ಸುಮಾರು ೨೫ ಕಿ.ಮೀ. ಕೈಬಿಟ್ಟು ಹೋಗಿತ್ತು, ಸತತ ಪ್ರಯತ್ನದ ಫಲವಾಗಿ  ಬೇಡಿಕೆ ಈಡೇರಿದಂತಾಗಿದೆ .

ರಸ್ತೆಯನ್ನು ರಾಷ್ಟ್ರೀಯ  ಹೆದ್ದಾರಿ ವಿಭಾಗಕ್ಕೆ ಹಸ್ತಾಂತರಿಸಿದ ನಂತರ  ಅಭಿವೃದ್ಧಿ ಕಾರ್ಯ ಪ್ರಾರಂಭವಾಗಲಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ. 

ಈ ರಸ್ತೆ ಅಭಿವೃದ್ಧಿಪಡಿಸುವುದರಿಂದ ಚಿಕ್ಕಮಗಳೂರಿನಿಂದ ಬೆಂಗಳೂರು ಹಾಗೂ ಮೈಸೂರಿಗೆ ಸಂಚಾರ ಇನ್ನಷ್ಟು ಸುಗಮವಾಗಲಿದೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...