ಗುರುವಾರ, ಅಕ್ಟೋಬರ್ 20, 2022

ಚಿಕ್ಕಮಗಳೂರಿನಲ್ಲಿ ರಾಜ್ಯಮಟ್ಟದ ಯುವಜನೋತ್ಸವ


ಚಿಕ್ಕಮಗಳೂರು:  ರಾಜ್ಯಮಟ್ಟದ ಯುವಜನೋತ್ಸವನ್ನು ಚಿಕ್ಕಮಗಳೂರಿನಲ್ಲಿ  ಡಿ. ೧೬, ೧೭ ಮತ್ತು ೧೮ ಅಥವಾ ಡಿ. ೨೧, ೨೨ ಮತ್ತು ೨೩ರಂದು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.  ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ  ಮಾತನಾಡಿ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಪ್ರತಿ ಜಿಲ್ಲೆಯಿಂದ ೫೭ ಜನ ಕಲಾವಿದರಂತೆ ಒಟ್ಟು ೧೭೬೭ ಕಲಾಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದಿದ್ದಾರೆ .   

ಅಧ್ಯಕ್ಷತೆ ವಹಿಸಿದ್ದ  ಶಾಸಕ ಸಿ.ಟಿ.ರವಿ ಮಾತನಾಡಿ, ರಾಜ್ಯಮಟ್ಟದ  ಯುವಜನೋತ್ಸವವನ್ನು ಸಣ್ಣ ಕೊರತೆಯೂ ಆಗದಂತೆ ಅದ್ಧೂರಿಯಾಗಿ ಆಯೋಜಿಸಲಾಗುತ್ತದೆ. ಹವಾಮಾನ, ಮಳೆಯ ವರದಿಗಳನ್ನು ಗಮನಿಸಿಕೊಂಡು ಕಾರ್ಯಕ್ರಮದ ದಿನಾಂಕವನ್ನು ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.  

ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್.ಸಿ, ಉಪವಿಭಾಗಾಧಿಕಾರಿ ರಾಜೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕಿ ಡಾ. ಮಂಜುಳಾ,  ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...