ಭಾನುವಾರ, ಅಕ್ಟೋಬರ್ 30, 2022

ಕೃಷಿ ಕ್ಷೇತ್ರದಲ್ಲಿ ಸಾಧನೆ: ರಾಜ್ಯೋತ್ಸವ ಪ್ರಶಸ್ತಿ ಗೆ ಚಂದ್ರಶೇಖರ ನಾರಾಯಣಪುರ

 


ಚಿಕ್ಕಮಗಳೂರು :ರಾಜ್ಯ ಸರ್ಕಾರ ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ,ಜಿಲ್ಲೆಯ ಚಂದ್ರಶೇಖರ ನಾರಾಯಣಪುರ ಪ್ರಶಸ್ತಿಗೆ ಭಾಜನರಾಗಿದ್ದಾರೆ .

ಕೃಷಿ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ತರೀಕೆರೆ ತಾಲ್ಲೂಕಿನ ನಾರಾಯಣಪುರದ ಚಂದ್ರಶೇಖರ್  ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿ ಬಳಿಕ ತಮ್ಮ ಕ್ಷೇತ್ರವನ್ನು ಕೃಷಿಯತ್ತ ಬದಲಾಯಿಸಿದ್ದರು 

ಮೂಗ್ತಿಹಳ್ಳಿ  ಬಳಿ  ಜಮೀನು ಖರೀದಿಸಿ ನೈಸರ್ಗಿಕ ಕೃಷಿಗೆ ವಿಶೇಷ ಗಮನ ನೀಡಿ ಅಪಾರ ಸಾಧನೆ ಮಾಡಿ ಮನ್ನಣೆ ಗಳಿಸಿದ್ದರು .

ಇವರ ನೈಸರ್ಗಿಕ ಕೃಷಿ ಕ್ಷೇತ್ರಕ್ಕೆ ಹತ್ತು ಹಲವು ಗಣ್ಯರು ಭೇಟಿ ನೀಡಿ ಪ್ರಶಂಸೆ ಹೊರಹಾಕಿದ್ದರು .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...