ಶನಿವಾರ, ಅಕ್ಟೋಬರ್ 22, 2022

ಸರ್ಕಾರಿ ಶಾಲೆಗಳಲ್ಲಿ ಪೋಷಕರಿಂದ ದೇಣಿಗೆ ಸಂಗ್ರಹದ ಸುತ್ತೋಲೆ: ಸಿಪಿಐ ತೀವ್ರ ಟೀಕೆ

 ಚಿಕ್ಕಮಗಳೂರು :ಶಾಲೆಗಳಲ್ಲಿನ ಮೂಲ ಸೌಕರ್ಯಗಳನ್ನು ಒದಗಿಸಲು ಶಾಲಾ ಮಕ್ಕಳ ಪೋಷಕರಿಂದ ದೇಣಿಗೆ ಸಂಗ್ರಹಿಸುವ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆಯ ಕ್ರಮ ರಾಜ್ಯ ಸರ್ಕಾರ ಆರ್ಥಿಕ ದಿವಾಳಿತನ ಎದುರಿಸುತ್ತಿರುವುದರ ಸಂಕೇತವಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ಟೀಕಿಸಿದೆ .

 ಈ ಕೂಡಲೆ ದೇಣಿಗೆ ಸಂಗ್ರಹದ ಸುತ್ತೋಲೆ ಹಿಂಪಡೆಯಬೇಕೆಂದು  ಪಕ್ಷ (ಸಿಪಿಐ) ಆಗ್ರಹ ಪಡಿಸಿದ್ದು ಶಾಲಾ ಶಿಕ್ಷಣ ಮಕ್ಕಳ ಸಂವಿಧಾನ ಬದ್ಧ ಮೂಲಭೂತ ಹಕ್ಕಾಗಿದೆ.ಮಕ್ಕಳ ಕಲಿಕೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಾಗರೀಕ ಸರ್ಕಾರದ ಜವಾಬ್ದಾರಿ ಯಾಗಿದೆ. ಸುತ್ತೋಲೆ ಹಿಂಡೆಯದಿದ್ದರೆ   ರಾಜ್ಯಾದ್ಯಂತ ಚಳವಳಿ ರೂಪಿಸುವ ಮೂಲಕ ಸರ್ಕಾರಿ ಶಾಲೆಗಳ ಉಳಿಸಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಪಕ್ಷದ  ರಾಜ್ಯ ಸಹ ಕಾರ್ಯದರ್ಶಿ ಅಮ್ಜದ್ ಎಚ್ಚರಿಸಿದ್ದಾರೆ 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...