ಚಿಕ್ಕಮಗಳೂರು : ಜನವರಿ ೧೮ರಿಂದ ೨೨ವರೆಗೆ ೪ ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಉತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲಾಗುತ್ತದೆ. ಎಲ್ಲರೂ ಕೈಜೋಡಿಸಿ, ಒಗ್ಗಟ್ಟಾಗಿ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹೇಳಿದ್ದಾರೆ.
ಉತ್ಸವದ ಹಿನ್ನೆಲೆಯಲ್ಲಿ ಶಾಸಕ ಸಿ ಟಿ ರವಿ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು .
ಕೆಂಪೇಗೌಡ ಪ್ರತಿಮೆಗೆ ಮೃತ್ತಿಕೆ ಸಂಗ್ರಹ
ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪ್ರತೀ ಜಿಲ್ಲೆಯಿಂದ ಮೃತ್ತಿಕೆ ಸಂಗ್ರಹಿಸುವ ಅಭಿಯಾನಕ್ಕೆ ಜಿಲ್ಲೆಯಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಚಾಲನೆ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನ.೧೧ರಂದು ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಸರ್ಕಾರವು ಪ್ರತಿ ಜಿಲ್ಲೆಯ ಪ್ರತಿ ಗ್ರಾಮಗಳಿಂದ ಮಣ್ಣು ಸಂಗ್ರಹ ಅಭಿಯಾನವನ್ನು ಕೈಗೊಂಡಿದ್ದು, ಪ್ರತಿ ಜಿಲ್ಲೆಗೆ ತೆರಳಿ ಮಣ್ಣು ಸಂಗ್ರಹ ಮಾಡಲಾಗುತ್ತದೆ ಎಂದು ತಿಳಿಸಿದರು.
ಬೀರಲಿಂಗೇಶ್ವರ ಸಮುದಾಯ ಭವನ ಉದ್ಘಾಟನೆ
ಚಿಕ್ಕಮಗಳೂರು : ಕಡೂರು ತಾಲ್ಲೂಕು ನಿಡಘಟ್ಟ ಗ್ರಾಮದಲ್ಲಿ ನಿರ್ಮಿಸಲಾದ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ(ಬೈರತಿ) ಉದ್ಘಾಟನೆಗೊಳಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವ ಯಾವ
ಕಾಗಿನೆಲೆ ಕನಕ ಗುರು ಪೀಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಮಹಾಸ್ವಾಮಿ . ನಿಡಘಟ್ಟ ಶ್ರೀ ಬೀರಲಿಂಗೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಎನ್.ಆರ್.ರೇಣುಕಮೂರ್ತಿ ,
ಶಾಸಕ ಸಿ.ಟಿ.ರವಿ, ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ, ಮಾಜಿ ಸಚಿವ ಎಚ್.ಎಂ.ರೇವಣ್ಣ, ನಿಡಘಟ್ಟ ಶ್ರೀ ಬೀರಲಿಂಗೇಶ್ವರ ಸೇವಾ ಸಮಿತಿಯ ಕಾರ್ಯದರ್ಶಿ ಎನ್.ಕೆ.ನಂಜುಂಡಪ್ಪ ಉಪಸ್ಥಿತರಿದ್ದರು.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ