ಬುಧವಾರ, ನವೆಂಬರ್ 30, 2022

ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಮತ್ತೆ ಲೋಕಾಯುಕ್ತಕ್ಕೆ ದೂರು

 



ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಶಾಸಕರಾಜೇಗೌಡ ವಿರುದ್ಧ ಮತ್ತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ

ಕೊಪ್ಪ ಮೂಲದ ದಿನೇಶ್ ಹೊಸೂರು  ದೂರು ಸಲ್ಲಿಸುವ ಮೂಲಕ ಕಾಂಗ್ರೆಸ್ ಶಾಸಕರಿಗೆ ಕಂಟಕವಾಗುತ್ತಾ ಶಬಾನಾ ರಂಜಾನ್ ಸಂಸ್ಥೆ ಎನ್ನುವ ಅನುಮಾನ ಕಾಡುತ್ತಿದೆ

ಟಿ.ಡಿ.ರಾಜೇಗೌಡ 123 ಕೋಟಿಯಷ್ಟು ಅಕ್ರಮ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಇದೇ ತಿಂಗಳ 18ರಂದು ಕೊಪ್ಪ ಮೂಲದ ವಿಜಯಾನಂದ ದೂರು ನೀಡಿದ್ದು

ದೂರು ದಾಖಲಾದ 4-5 ದಿನದಲ್ಲಿ ಕೇಸ್ ಹಿಂಪಡೆದಿದ್ದರು.

ವಾರ್ಷಿಕ 35 ಲಕ್ಷ ಆದಾಯ ತೋರಿಸಿದ್ದ ರಾಜೇಗೌಡ, 123 ಕೋಟಿ ಆಸ್ತಿ ಖರೀದಿ ಹೇಗೆ ಎಂದು ದೂರಿನಲ್ಲಿ ಪ್ರಶ್ನಿಸಿ ತನಿಖೆಗೆ ಒತ್ತಾಯಿಸಿದ್ದಾರೆ


ಮಂಗಳವಾರ, ನವೆಂಬರ್ 29, 2022

ಕಡೂರು ತಹಸಿಲ್ದಾರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ -ಗುರು ಶಾಂತಪ್ಪ


 

ಚಿಕ್ಕಮಗಳೂರು: ಮೃತ ವ್ಯಕ್ತಿಯ ಹೆಸರಿಗೆ ಖಾತೆ ಮಾಡಿ ಕೊಟ್ಟಿರುವುದು ಸೇರಿದಂತೆ ಅನೇಕ ಆರೋಪಗಳನ್ನು ಎದುರಿಸುತ್ತಿರುವ ಕಡೂರು ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರೈತ ಸಂಘ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಗುರು ಶಾಂತಪ್ಪ ಕಡೂರು ತಹಸಿಲ್ದಾರ್ ಉಮೇಶ್ ಬೇರೆಯವರ ಲಾಗಿನ್ ಬಳಸಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ರೈತ ಸಂಘದ ನಿರಂತರ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದರು ಉಪವಿಭಾಗಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಲ್ಲಿ ಮೀನಮೇಶ ಎಣಿಸುತ್ತಿದ್ದಾರೆ ಎಂದು ಟೀಕಿಸಿದರು.

ಈ ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ತುರ್ತಾಗಿ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರು ಸೂಚಿಸಿದರು ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಳ್ಳದೆ ಇರುವುದು ಅನುಮಾನಕ್ಕೆ ಎಡೆ ಮಾಡಿದೆ ಎಂದು  ಆರೋಪಿಸಿದರು.

8 ದಿನದ ಒಳಗೆ ಶಿಸ್ತುಕ್ರಮ ತೆಗೆದುಕೊಳ್ಳದೆ ಹೋದಲ್ಲಿ ಅನಿರ್ದಿಷ್ಟ ಅವಧಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಸಿದರು

ಕೊಪ್ಪ ಸರ್ವೆ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ -ಸಹನೆ ಕಳೆದುಕೊಂಡ ಜನರಿಂದ ಪ್ರತಿಭಟನೆ

 



ಕೊಪ್ಪ :ಇಲ್ಲಿನ ಭೂ ದಾಖಲೆಗಳ ಸರ್ವೆ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ ಎಂದು ಆರೋಪಿಸಿ ನೊಂದವರು ಪ್ರತಿಭಟನೆ ನಡೆಸಿದ್ದಾರೆ.

 ಸಹಾಯಕ ನಿರ್ದೇಶಕರ ಕಚೇರಿ ಬಾಗಿಲ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದೆ ಅಲ್ಲದೆ ಒಂದು ಹಂತದಲ್ಲಿ ಬೀಗ ಹಾಕಲು ಹೊರಟಿದ್ದರು.

ದಾಖಲೆಗಳನ್ನು ಪಡೆಯಲು ತಿಂಗಳಗಟ್ಟಲೆ ಅಲೆಯಬೇಕಾಗಿದೆ. ಹಣವಿಲ್ಲದೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ ಎಂದು ಅಧಿಕಾರಿ ಸಿಬ್ಬಂದಿ ವಿರುದ್ಧ ಕಿಡಿಕಾರಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಸಮಾಧಾನ ಪಡಿಸಲು ಮಾಡಿದ ಯತ್ನ ಫಲಿಸದೆ ಅವರ ಎದುರಿನಲ್ಲಿ ಪ್ರತಿಭಟನೆ ನಿರತರು ಇಲಾಖೆ ವಿರುದ್ಧ ಕೂಗಾಡಿದರು.

ಭ್ರಷ್ಟಾಚಾರ -ಪರ್ಸೆಂಟೇಜ್ ವ್ಯವಹಾರ ಬಿಜೆಪಿ ಸರ್ಕಾರದ ಸಾಧನೆ:ಡಿ.ಕೆ.ಶಿವಕುಮಾರ್

 

ಮೂಡಿಗೆರೆ:ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು  ಪರ್ಸಂಟೇಜ್ ವ್ಯವಹಾರ ಹೊರತುಪಡಿಸಿ ಜನಪರವಾಗಿ ಕೆಲಸ ಮಾಡಿಲ್ಲ ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ

     ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ  ಸಮಾವೇಶ ಉದ್ಘಾಟಿಸಿ ಬಿಜೆಪಿ ೩ ಬಾರಿ ನಡೆಸಿದ ಆಡಳಿತದಲ್ಲಿ ಜನರ ಬದುಕು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ.   ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ ಎಂದರು.

  ಇಲ್ಲಿಯವರೆಗೆ ಅಧಿಕಾರವಿದ್ದಾಗಲೇ ಜನರ ಬದುಕು ಹಸನು ಮಾಡಲು ಸಾಧ್ಯವಾಗಿಲ್ಲ. ಇನ್ನು ಅಧಿಕಾರ ಕಳೆದುಕೊಳ್ಳುವ ಸಮಯದಲ್ಲಿ  ಸಾಧ್ಯವೇ ಎಂದು ಪ್ರಶ್ನಿಸಿದರು.  

  ಬಿಜೆಪಿ  ಕೇವಲ ಭಾವನೆ, ಕೋಮು ಗಲಭೆಯಲ್ಲೇ ಕಾಲ ಕಳೆದಿದ್ದಾರೆ. ಜನರ ಬದುಕು ಹಸನಾಗಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ  ನ ಯಾವುದೇ ಅಭ್ಯರ್ಥಿ  ನಿಲ್ಲಿಸಿದರೂ ಅವರನ್ನು ಗೆಲ್ಲಿಸಿಕೊಡುವ ಕರ್ತವ್ಯ ನಿಮ್ಮದು ಎಂದು ಹೇಳಿದರು. 

ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್  ಮಾತನಾಡಿ ಫ್ಲೆಕ್ಸ್ ಹಾಕುವ ಬದಲು ಜನ ಸಂಪರ್ಕ ಮಾಡುವುದು ಒಳಿತು ಎಂದು ಕಿವಿ ಮಾತು ಹೇಳಿದರು


ಮಾಜಿ ಸಚಿವರಾದ ಮೋಟಮ್ಮ, ಬಿ.ಶಿವರಾಂ, ಕಾರ್ಯಧ್ಯಕ್ಷ ದೃವ ನಾರಾಯಣ್, ಬ್ಲಾಕ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಂಶು ಮಂತ್ ಇತರರು ಉಪಸ್ಥಿತರಿದ್ದರು. 

ನಾಗರತ್ನ ಮತ್ತು ನಯನ ಮೋಟಮ್ಮ ಪರ ಪ್ರತ್ಯೇಕವಾಗಿ ಭಾರಿ ಗಾತ್ರದ ಸೇಬಿನ ಹಾರ ಹಾಕುವ ಮೂಲಕ ಗುಂಪುಗಾರಿಕೆ ಬಿಂಬಿತಗೊಂಡಿತು.

ಸೋಮವಾರ, ನವೆಂಬರ್ 28, 2022

ಖಾಸಗಿ ಬಸ್ -ಟಿಪ್ಪರ್ ನಡುವೆ ಮುಖಾಮುಖಿ. ಓರ್ವ ಮಹಿಳೆ ಮೃತಪಟ್ಟು15 ಮಂದಿಗೆ ಗಾಯ

 


ಚಿಕ್ಕಮಗಳೂರು : ಖಾಸಗಿ ಬಸ್ -ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ
ಓರ್ವ ಮಹಿಳೆ  ಮೃತಪಟ್ಟು15 ಮಂದಿಗೆ ಗಾಯವಾಗಿದೆ
ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಘಟನೆ ನಡೆದಿದ್ದು ,ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ  ಸಾವಪ್ಪಿದ್ದಾರೆ
ಗಾಯಾಳುಗಳನ್ನುಎನ್.ಆರ್ ಪುರ ಹಾಗೂ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

250 ಕೋಟಿ ಬೆಲೆಗೆ ಜೀವರಾಜ್ ರವರೇ ಜಮೀನು ಖರೀದಿಸಲಿ :ಶಾಸಕ ರಾಜೇಗೌಡ ಸವಾಲು -ತನಿಖೆಗೆ ಸಿದ್ದ ಇರುವುದಾಗಿ ಘೋಷಣೆ

 


ಚಿಕ್ಕಮಗಳೂರು: ತಾವು ಬಾಳೆಹೊನ್ನೂರು ಬಳಿ ಖರೀದಿಸಿರುವ  ಜಮೀನನ್ನು 250 ಕೋಟಿಗೆ ಜೀವರಾಜ್ ರವರು ಖರೀದಿಸುವುದಾದರೆ ಸಂತೋಷದಿಂದ ಕೊಡುವುದಾಗಿ ಶೃಂಗೇರಿ ಶಾಸಕ ಟಿ.ಡಿ .ರಾಜೇಗೌಡ ಸವಾಲು ಹಾಕಿದ್ದಾರೆ.
ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಸರಿಸುಮಾರು 20 ಕೋಟಿ ರೂ.ಗಳಿಗೆ ಜಮೀನನ್ನು ಖರೀದಿಸಿದ್ದು ಯಾವುದೇ ರೀತಿಯ ಅವ್ಯವಹಾರ ಕಾನೂನು ಬಾಹಿರ ಕೃತ್ಯ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಮೀನು ಖರೀದಿ ನಮ್ಮ ಮತ್ತು ಸಿದ್ಧಾರ್ಥ ಕುಟುಂಬದ ನಡುವಿನ ವ್ಯವಹಾರ. ಅದು ಕಾಯ್ದೆ ಮತ್ತು ಕಾನೂನು ಚೌಕಟ್ಟಿನಲ್ಲಿ ಅಡಿಯಲ್ಲಿಯೇ ನಡೆದಿದೆ.ಈಗಾಗಲೇ ಸಿದ್ದಾರ್ಥ ಅವರ ಪತ್ನಿ ಮಾಳವಿಕಾರವರು ಕೂಡ ಸ್ಪಷ್ಟನೆ ನೀಡಿದ್ದಾರೆ ಎಂದರು.
ಲೋಕಾಯುಕ್ತಕ್ಕೆ  ತಮ್ಮ ವಿರುದ್ಧ ದೂರು ನೀಡಿದ ಬಗ್ಗೆ ಅಧಿಕೃತವಾಗಿ  ಮಾಹಿತಿ ಬಂದಿಲ್ಲ. ಹೀಗಾಗಿ ಸ್ಪಷ್ಟನೆಯನ್ನು ಕೊಟ್ಟಿರಲಿಲ್ಲ. ಆದರೆ ಕೊಪ್ಪಕ್ಕೆ ಬಂದ ಮುಖ್ಯಮಂತ್ರಿಗಳಾಗಿ ಎಲ್ಲರೂ ಈ ವಿಷಯವನ್ನು ಚರ್ಚಿಸುತ್ತಿರುವುದರಿಂದ ಸ್ಪಷ್ಟನೆ ನೀಡುತ್ತಿರುವುದಾಗಿ ಹೇಳಿದರು.
ಲೋಕಾಯುಕ್ತ ಸೇರಿದಂತೆ ಯಾವುದೇ ರೀತಿಯ ತನಿಖಾ ಸಂಸ್ಥೆಯಿಂದ ತನಿಖೆ ನಡೆದರು ತಾವು ಎದುರಿಸಲು ಸಿದ್ಧ . ಈ ಹಿಂದೆಯೂ ತಮ್ಮ ಹಾಗೂ ತಮ್ಮ ಬೆಂಬಲಿಗರ ವಿರುದ್ಧ ಹಲವು ರೀತಿಯ ತನಿಖೆಗಳು ಆಗಿವೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ ಸೋತು ಹತಾಶರಾಗಿರುವ ಡಿ .ಎನ್ ಜೀವರಾಜ್ ಗೆ ಒಂದೊಮ್ಮೆ ರಾಜಕೀಯ ಕಾರ್ಯದರ್ಶಿ ಸ್ಥಾನ ಸಿಗದೇ ಹೋಗಿದ್ದರೆ ಮಾನಸಿಕವಾಗಿ ಅಸ್ವಸ್ಥರಾಗುತ್ತಿದ್ದರು ಎಂದು ವ್ಯಂಗ್ಯವಾಡಿದರು.
ಜೀವರಾಜ್ ಮೇಲೆ ಇರುವಂತೆ ತಮ್ಮ ವಿರುದ್ಧ ಯಾವುದೇ ಆಪಾದನೆಗಳು ಇಲ್ಲ .ತನಿಖೆಗಳು ನಡೆಯುತ್ತಿಲ್ಲ ಪತ್ರಿಕೆಗಳಲ್ಲಿ ಸುದ್ದಿ ಬಾರದಂತೆ ತಡೆ ಆಜ್ಞೆಯನ್ನು ತಂದಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.
ತಮ್ಮ ವಿರುದ್ಧ ಭ್ರಷ್ಟಾಚಾರ ಸುಳ್ಳುಆಪಾದನೆ ಹೊರಿಸುತ್ತಿರುವ ಜೀವರಾಜ್ ಬಹುಶಃ ಅವರ ಅಧಿಕಾರ ಅವಧಿಯಲ್ಲಿ ಅದನ್ನೇ ಮಾಡಿದ್ದಾರೆ ಎಂದು ಟೀಕಿಸಿದರು.

ಕಾಡಾನೆ ಸೆರೆ ಕಾರ್ಯಾಚರಣೆ ; ಆರಂಭಿಕ ಗೆಲುವು- ಒಂದು ಆನೆ ಸೆರೆ



ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇತ್ತೀಚಿಗೆ ಮಹಿಳೆಯೊಬ್ಬರನ್ನು ಬಲಿ ತೆಗೆದುಕೊಂಡಿದ್ದ ಆನೆ ಕೊನೆಗೂ ಸೆರೆಯಾಗಿದೆ

ಕಾಡಾನೆ ಸೆರೆ ಹಿಡಿಯುವಂತೆ ಸ್ಥಳೀಯರು ಮತ್ತು ಜನಪ್ರತಿನಿಧಿಗಳ ನಿರಂತರ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರ ಕಾಡಾನೆ ಸೆರೆಗೆ ಆದೇಶ ಹೊರಡಿಸಿತ್ತು.

6 ಆನೆಗಳೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಸಿಬ್ಬಂದಿ ಮೊದಲ ಹಂತದಲ್ಲಿ ಯಶಸ್ವಿಯಾಗಿದ್ದು ಬೆಳಗೋಡಿನ ಕುಂಡರ ಕಾಡು ಎಂಬಲ್ಲಿ ಆನೆಯೊಂದನ್ನು ಸೆರೆ ಹಿಡಿಯಲಾಗಿದೆ.

ಆನೆ ಸೆರೆಹಿಡಿದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಸ್ಥಳೀಯರು ಈ ಭಾಗದಲ್ಲಿ ಇನ್ನಷ್ಟು ಆನೆಗಳು ಇದ್ದು ಅವುಗಳನ್ನು ಸೆರೆ ಹಿಡಿಯಬೇಕೆಂಬ ಒತ್ತಾಯ ವ್ಯಕ್ತಪಡಿಸಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಆನೆ ಸೆರೆ ಕಾರ್ಯಾಚರಣೆ ಮುಂದುವರೆದಿದೆ. ಹಿಡಿದಿರುವ ಆನೆಯನ್ನು ಎಲ್ಲಿಗೆ ಸಾಗಿಸುವುದು ಎನ್ನುವ ಸಮಾಲೋಚನೆಯು ನಡೆದಿದೆ

ಡಿ.6ರಿಂದ 8ರ ವರೆಗೆ ದತ್ತ ಜಯಂತಿ ; ದತ್ತ ಭಕ್ತರಿಂದ ದತ್ತ ಮಾಲಾ ಧಾರಣೆ-ಪ್ರವಾಸಿಗರಿಗೆ ನಿರ್ಬಂಧ

 


ಚಿಕ್ಕಮಗಳೂರು : ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ನಡೆಯಲಿರುವ ದತ್ತಜಯಂತಿ ಹಿನ್ನೆಲೆಯಲ್ಲಿ ಇಂದು ಮಾಲಾ ಧಾರಣೆ ಮಾಡಲಾಯಿತು
ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಶಾಸಕ ಸಿ.ಟಿ.ರವಿ ಸೇರಿ ಹಲವರಿಂದ ಮಾಲಾಧಾರಣೆ ನಡೆಯಿತು.
ನಗರದಲ್ಲಿ 100 ಕ್ಕೂ ಹೆಚ್ಚು ಭಕ್ತರು ಮಾಲಾ ಧಾರಣೆ ಮಾಡಿದ್ದು ಮುಂದಿನ ತಿಂಗಳ 6ರಂದು ಅನುಸೂಯ ಜಯಂತಿ 7 ರಂದು ಜಿಲ್ಲಾ ಕೇಂದ್ರದಲ್ಲಿ ಶೋಭ ಯಾತ್ರೆ 8 ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಪಾದುಕೆ ದರ್ಶನ' ಮಾಲಾ ವಿಸರ್ಜನೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪ್ರವಾಸಿಗರಿಗೆ ನಿರ್ಬಂಧ: ದತ್ತ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಡಿ. 6 ಬೆಳಿಗ್ಗೆ 6 ರಿಂದ ಡಿ.9 ರ ಬೆಳಿಗ್ಗೆ 10 ಗಂಟೆಯವರೆಗೆ ಮುಳ್ಳಯ್ಯನಗಿರಿ ಬಾಬಾ ಬುಡನ್ ಗಿರಿ ಶ್ರೇಣಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಮಾಡಲಾಗಿದೆ

ಭಾನುವಾರ, ನವೆಂಬರ್ 27, 2022

ಪಕ್ಷದ ನಿಷ್ಠಾವಂತನಾದ ತನಗೆ ಕಾಂಗ್ರೆಸಿಗ ಎಂಬ ಪಟ್ಟ ಕಟ್ಟಿದರು :ವಿಶ್ವಾಸದ್ರೋಹ ಮಾಡಿದರು- ವಿಜಯಾನಂದ ಪಶ್ಚಾತಾಪ

 


ಚಿಕ್ಕಮಗಳೂರು ಶೃಂಗೇರಿ ಕ್ಷೇತ್ರ ಶಾಸಕ ಟಿಡಿ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರು ಪ್ರಕರಣ ಈಗ ಹೊಸ ಆಯಾಮ ಪಡೆಯುತ್ತಿದೆ.

ದೂರುದಾರ ಡಿ ಎನ್ ಜೀವರಾಜ್ ಗೆ ಚಾಲಕನಾಗಿದ್ದ ವಿಜಯಾನಂದ ಬಿಡುಗಡೆ ಮಾಡಿರುವ ವಿಡಿಯೋ ಮತ್ತು ವಿಜಯಾನಂದ ಹಾಗೂ ಜೀವರಾಜ್ ಪರಮಾಪ್ತ ದಿನೇಶ್ ಮಧ್ಯ ನಡೆದಿರುವ ಆಡಿಯೋ ಸಂಭಾಷಣೆ ಭಾರಿ ಸದ್ದು ಮಾಡುತ್ತಿವೆ.

ನಿನ್ನೆ ಮತ್ತೆ ರಾತ್ರಿ ಬಿಟ್ಟಿರುವ ವಿಡಿಯೋದಲ್ಲಿ ವಿಜಯಾನಂದ ಪಶ್ಚಾತಾಪದ ಮಾತುಗಳನ್ನು ಆಡಿದ್ದಾರೆ.

ಪಕ್ಷದ ಸಿದ್ಧಾಂತ ನಂಬಿ ಪ್ರಾಮಾಣಿಕವಾಗಿ ದುಡಿದಿದ್ದ ತನಗೆ ಕಾಂಗ್ರೆಸ್ಸಿಗ ಎನ್ನುವ ಪಟ್ಟವನ್ನು ಕಟ್ಟಿದ್ದಾರೆ. ಸ್ನೇಹಿತರ ಎದುರು ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರಿನ ಸತ್ಯ ಸಂಗತಿ ತಿಳಿಯುತ್ತಿದ್ದಂತೆ ತನ್ನ ಕುಟುಂಬದಲ್ಲಿ ತಳಮಳ ಆರಂಭಗೊಂಡಿದೆ. ದೂರನ್ನು ಹಿಂದೆ ಪಡೆಯುವಂತೆ ತಾನೆ ಅನೇಕ ಬಾರಿ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಆನೆಯ ಜೊತೆ ಆನೆಯ ಗುದ್ದಾಟ ಮಾಡಬೇಕು ಎಂದು ಹೇಳುವ ಮೂಲಕ ಸತಕ ರಾಜೇಗೌಡರು ವಿರುದ್ಧ ಜೀವರಾಜ್  ದೂರನ್ನು ಸಲ್ಲಿಸಬೇಕಿತ್ತು ಎಂದು ಮಾರ್ವಿಕವಾಗಿ ತಿವಿದಿದ್ದಾರೆ.

ಆನೆ ಎದುರು ಆನೆಯ ತಾಕಬೇಕು ಇರುವೆಯನ್ನು ಹೊಸಕಿ ಹಾಕುತ್ತಾರೆ. ತನ್ನನ್ನು ನಡು ನೀರಿನಲ್ಲಿ ಕೈಬಿಟ್ಟರು ಎಂದು ಕಿಡಿ ಕಾರಿದ್ದಾರೆ. ತಾನು ದೂರನ್ನು ಹಿಂದೆ ಪಡೆದ ಬಗ್ಗೆ ಸಾಕಷ್ಟು ವಿಶ್ಲೇಷಣೆಗಳು ನಡೆಯುತ್ತಿವೆ. ಆ ಕುರಿತು ತನಗೆ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ ವಿಜಯಾನಂದ ಮತ್ತು ಜೀವರಾಜ್ ಆಪ್ತ ದಿನೇಶ್ ಮಧ್ಯೆ ನಡೆದ ಸಂಭಾಷಣೆ ಮತ್ತಷ್ಟು ರೋಚಕವಾಗಿದೆ.

ನಿನ್ನನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಒಂದೊಮ್ಮೆ ಜೀವರಾಜ್ ಸಹಾಯ ಮಾಡದಿದ್ದರೂ ತಾನು ಸಹಾಯ ಮಾಡುತ್ತೇನೆ ಎಂದು ದಿನೇಶ್ ಭರವಸೆ ಕೊಟ್ಟಿದ್ದಾರೆ. ಇನ್ನಿಬ್ಬರಿಂದ ದೂರನ್ನು ಕೊಡಿಸುತ್ತೇನೆ ಎಂದು ಧೈರ್ಯ ತುಂಬುವ ಕೆಲಸ ಮಾಡಿ ಯಾವುದಕ್ಕೂ ಧೈರ್ಯ ಕಳೆದುಕೊಳ್ಳಬೇಡ ಎಂದು ಹೇಳಿರುವ ದಿನೇಶ್ ದೂರು ಕೊಡಿಸುವಲ್ಲಿ ತನ್ನ ಪಾತ್ರವು ಮುಖ್ಯ ಎನ್ನುವುದನ್ನು ಸಾಬೀತು ಮಾಡಿದ್ದಾರೆ.


ಶನಿವಾರ, ನವೆಂಬರ್ 26, 2022

ಶಾಸಕ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ್ದ ದೂರು ವಾಪಸ್ : ಉದ್ಯೋಗದ ಆಮಿಷಕ್ಕೆ ಬಲಿಯಾಗಿ ದೂರು ನೀಡಿಕೆ -ದೂರುದಾರನ ಸ್ಪಷ್ಟನೆ

 


BIG NEWS

ಚಿಕ್ಕಮಗಳೂರು: ಶೃಂಗೇರಿ ಸೇರಿದಂತೆ ರಾಜ್ಯದಲ್ಲಿ ಸಂಚಲನ ಉಂಟುಮಾಡಿದ್ದ ಶಾಸಕ ಟಿ.ಡಿ. ರಾಜೇಗೌಡರ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರನ್ನು ಹಿಂದಕ್ಕೆ ಪಡೆಯಲಾಗಿದೆ.
ದೂರುದಾರ ವಿಜಯಾನಂದ ಈ ಬಗ್ಗೆ ಪ್ರಮಾಣ ಪತ್ರವನ್ನು ಸಲ್ಲಿಸಿದ್ದು ತಾವು ಮಾಹಿತಿ ಇಲ್ಲದೆ ಲೋಕಾಯುಕ್ತಕ್ಕೆ ಸಲ್ಲಿಸಿರುವ ದೂರನ್ನು ಹಿಂದೆ ಪಡೆಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ತಾವು ಈ ಹಿಂದೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ರವರಲ್ಲಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದು ಅನಗತ್ಯ ಆರೋಪಗಳನ್ನು ಹೊರೆಸಿ ಕೆಲಸದಿಂದ ತೆಗೆದುಹಾಕಿದ್ದರು ಎಂದು ಪ್ರಮಾಣ ಪತ್ರದಲ್ಲಿ ವಿವರಿಸಿದ್ದಾರೆ.
ಮತ್ತೆ ಉದ್ಯೋಗ ಕೇಳಿ ಹೋದ ಸಂದರ್ಭದಲ್ಲಿ ಶಾಸಕ ಟಿ.ಡಿ .ರಾಜೇಗೌಡರ ವಿರುದ್ಧ ಲೋಕಾಯುಕ್ತಕ್ಕೆ ದೂರು ಕೊಡಲು ಒಪ್ಪಿದರೆ ಮಾತ್ರ ಕೆಲಸ ಕೊಡುವ ಆಮಿಷ ಒಡ್ಡಿದ್ದು ಅದರಂತೆ ದೂರು ಪ್ರತಿಗೆ ಸಹಿ ಹಾಕಿ ನೀಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ದೂರು ಅರ್ಜಿಯ ವಿಷಯಗಳನ್ನು ತಮ್ಮ ಗಮನಕ್ಕೂ ತಂದಿಲ್ಲ ಪ್ರತಿಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿ ಸಿದ್ದಾರ್ಥ ಹೆಗಡೆಯವರಾಗಲಿ ರಾಜೇಗೌಡರ ಬಗ್ಗೆ ಆಗಲಿ ತನಗೆ ಯಾವುದೇ ಮತ್ಸರ ಇಲ್ಲದಿದ್ದು ನೀಡಿದ ದೂರಿನಿಂದ ಆದ ತೊಂದರೆಗೆ ವಿಷಾದವನ್ನು ವ್ಯಕ್ತಪಡಿಸಿದ್ದಾರೆ.
ಲೋಕಾಯುಕ್ತಕ್ಕೆ ನೀಡಿದ ದೂರನ್ನೇ ಬಂಡವಾಳವಾಗಿ ಇಟ್ಟುಕೊಂಡು ಸುದ್ದಿಗೋಷ್ಠಿ ಮೂಲಕ ಟಿ ಡಿ ರಾಜೇಗೌಡರ ತೇಜೋವಧೆಗೆ ಯತ್ನಿಸಿದ ಡಿ ಎನ್ ಜೀವರಾಜ್ ಮತ್ತು ಬಿಜೆಪಿ ಮುಖಂಡರಿಗೆ ಈಗ ಭಾರಿ ಮುಖಭಂಗವಾಗಿದೆ ಎನ್ನುವ ವಿಶ್ಲೇಷಣೆಗಳು ಕೇಳಿ ಬರುತ್ತಿವೆ.

ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ : ಚಾಲಕರನ್ನು ಕಟ್ಟಿ ಹಾಕಿ ಥಳಿತ

 



ಚಿಕ್ಕಮಗಳೂರು : ವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ  ಕ್ಯಾಬ್ ಚಾಲಕನನ್ನು ಕಟ್ಟಿಹಾಕಿ ಥಳಿಸಿದ ಘಟನೆ ನಡೆದಿದೆ

 ಚಾಲಕ ರಾಜಪ್ಪನನ್ನ ಕಂಬಕ್ಕೆ ಕಟ್ಟಿ ಕಡೂರು ತಾಲೂಕಿನ  ಸಖರಾಯಪಟ್ಟಣದ ಸಿದ್ದರಹಳ್ಳಿಯಲ್ಲಿ   ಥಳಿಸಲಾಗಿದೆ

ಚಾಲಕ ರಾಜಪ್ಪನ ಮೇಲೆ ಪೋಸ್ಕೋ ಕೇಸ್ ದಾಖಲು ಮಾಡಿದ್ದಾರೆ

ಕ್ಯಾಬ್ ನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ಕರೆತರುತ್ತಿದ್ದ ರಾಜಪ್ಪ

ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ಬಳಿಯೇ ಇರುತ್ತಿದ್ದ ಎಂದು ಆರೋಪಿಸಲಾಗಿದೆ

ಸಖರಾಯಪಟ್ಣಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


ಶುಕ್ರವಾರ, ನವೆಂಬರ್ 25, 2022

ಕಾಡಾನೆ ನಿಯಂತ್ರಿಸುವಲ್ಲಿ ವಿಫಲ: ರೊಚ್ಚಿಗೆದ್ದ ಯುವಕರು- ಕಾಫಿನಾಡಲ್ಲಿ ಫಾರೆಸ್ಟ್‌ ಆಫೀಸ್ ಪುಡಿ...ಪುಡಿ

 



ಚಿಕ್ಕಮಗಳೂರು :ಕಾಡಾನೆ ಹಿಡಿದು ನಿಯಂತ್ರಿಸುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಜನಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸ ಮಾಡಿದ ಘಟನೆ ನಡೆದಿದೆ
ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕೈಗೆ ಸಿಕ್ಕ... ಸಿಕ್ಕ... ವಸ್ತುಗಳನ್ನೆಲ್ಲಾ ಪುಡಿ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ
ಆನೆ ದಾಳಿಯನ್ನ ನಿಯಂತ್ರಿಸಲಾಗದ ಅರಣ್ಯ ಇಲಾಖೆ ವಿರುದ್ಧ ರೋಷ ವ್ಯಕ್ತಪಡಿಸಿನಿಮಗೆ ಪಟಾಕಿ ಕೊಡುವ ಯೋಗ್ಯತೆ ಇಲ್ಲವೆಂದು ಕಿಡಿ ಕಾರಿದ್ದಾರೆ
ಆನೆ ನಿಯಂತ್ರಿಸಕ್ಕೆ ಆಗಲ್ಲ, ತಿನ್ನೋಕೆ ಸೋನಾ ಮುಸುರಿ ಅಕ್ಕಿ  ಬೇಕಾ ಎಂದು ಪ್ರಶ್ನಿಸಿಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳ ವಿರುದ್ಧ ಕಿಡಿಕರಿದ್ದೆ ಅಲ್ಲದೆ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಸವಾಲ್ ಹಾಕಿದ್ದಾರೆ.
ನಿರಂತರ ದಾಳಿಯಿಂದ ಜನ ಕಂಗೆಟ್ಟಿದ್ದು
ನಾಲ್ಕು ದಿನದ ಹಿಂದೆ ಆನೆ ದಾಳಿಗೆ 35 ವರ್ಷದ ಮಹಿಳೆ ಸಾವಪ್ಪಿದ್ದು ಸ್ಥಳಕ್ಕೆ ತೆರಲಿದ್ದ ಶಾಸಕರ ಮೇಲೂ ಅಲ್ಲೇ ಯತ್ನ ನಡೆದಿತ್ತು

ಗುರುವಾರ, ನವೆಂಬರ್ 24, 2022

100 ಬೆಡ್ ಆಸ್ಪತ್ರೆ -ಮೈಕ್ ಗೆ ಅನುಮತಿ ನಿರಾಕರಣೆ: ತಮಟೆ ಹೊಡೆದು ಪ್ರಚಾರ ; ಪೊಲೀಸ್ ಇಲಾಖೆಗೆ ಸಡ್ಡು ಹೊಡೆದ ಯುವಕರು

 


ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ತಾಲೂಕು ಕೇಂದ್ರ ಆಗಿರುವ ಶೃಂಗೇರಿಯಲ್ಲಿ  100 ಹಾಸಿಗೆ ಇರುವ ಆಸ್ಪತ್ರೆ ಆರಂಭಿಸುವ ಬೇಕೆಂಬ ಹೋರಾಟ ಮತ್ತೆ ಮುನ್ನಡೆಗೆ ಬಂದಿದೆ.

ಮುಖ್ಯಮಂತ್ರಿಗಳಾದಿಯಾಗಿ ಎಲ್ಲಾ ಜನ ಪ್ರತಿನಿಧಿಗಳು ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಸಾಕಷ್ಟು ಬಾರಿ ಭರವಸೆ ಪಡೆದು ರೋಸಿ ಹೋದ ಸಮಾನ ಮನಸ್ಕರ ಯುವಕರ ತಂಡ ; ಪ್ರಜ್ಞಾವಂತ ನಾಗರಿಕರು ಈಗ ಅಹೋರಾತ್ರಿ ಚಳುವಳಿಗೆ ಸಿದ್ಧರಾಗಿದ್ದಾರೆ.

ಚಳವಳಿಯ ಬಗ್ಗೆ ಮೈಕ್ ಮೂಲಕ ಪ್ರಚಾರ ನಡೆಸಲು ಪೊಲೀಸ್ ಇಲಾಖೆ ಅನುಮತಿ ನಿರಾಕರಣೆ ಮಾಡಿದ್ದು ಇದರಿಂದ ಸಿಟ್ಟಿಗೆದ್ದ ಯುವಕರು ತಮಟೆ ಬಾರಿಸುತ್ತ ಧರಣಿ ಸತ್ಯಾಗ್ರಹದ ಬಗ್ಗೆ ಪ್ರಚಾರ ನಡೆಸುತ್ತಿದ್ದಾರೆ

ಶೃಂಗೇರಿಯ ಬೀದಿ ಬೀದಿಯಲ್ಲಿ ಸುತ್ತಿ ತಮಟೆ ಪ್ರಚಾರ ನಡೆಸಿದ್ದೇ ಅಲ್ಲದೆ ತಾಲೂಕಿನಾದ್ಯಂತ ಪ್ರಚಾರ ಮಾಡಲು ಮುಂದಾಗಿ ಜನಪ್ರತಿನಿಧಿಗಳು ಹಾಗೂ ಪೊಲೀಸ್ ಇಲಾಖೆಗೆ ಮಂಗಳಾರತಿ ಎತ್ತಿದ್ದಾರೆ .

 ಕಳೆದ ವರ್ಷ ಶೃಂಗೇರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.ಈ ವೇಳೆ ಒಂದು ತಿಂಗಳ ಒಳಗಾಗಿ ಆಸ್ಪತ್ರೆ ಮಂಜೂರು ಮಾಡುತ್ತೇವೆ ಎಂದು ಅಧಿಕಾರಿಗಳು ಭರವಸೆ ಕೊಟ್ಟಿದ್ದೆ ಅಲ್ಲದೆ  ಶೃಂಗೇರಿ ಭೇಟಿ ವೇಳೆ ಮುಖ್ಯಮಂತ್ರಿಗಳುಮಾತು ಕೊಟ್ಟಿದ್ದ ರು.




ಎರಡು ಪ್ರತ್ಯೇಕ ಅಪಘಾತ ಪ್ರಕರಣ : 7 ಜನರಿಗೆ ಗಾಯ -ಆಸ್ಪತ್ರೆಗೆ ದಾಖಲು



ಚಿಕ್ಕಮಗಳೂರು :ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಏಳು ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾರ್ಮಾಡಿ ಘಾಟ್ ನ ತಿರುವಿನಲ್ಲಿಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಆಟೋದಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್ ನ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲಿದ್ದ ನಾಲ್ವರಿಗೆ ಪೆಟ್ಟಾಗಿದ್ದು ಕಕ್ಕಿಂಜೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬಣಕಲ್ ಆಟೋದಲಿದ್ದ ಪ್ರಯಾಣಿಕರು ಧರ್ಮಸ್ಥಳ ಕ್ಕೆ ಹೋಗಿ ದರ್ಶನ ಮುಗಿಸಿ ಬರುವಾಗ ನಡೆದ ಅಪಘಾತ ಎರಡು ವಾಹನಗಳು ಜಖಂ ಗೊಂಡಿದೆ.

ಇನ್ನೊಂದು ಪ್ರಕರಣದಲ್ಲಿ ಬಿದರಳ್ಳಿ ಬಳಿ ಚಲಿಸುತ್ತಿದ್ದ ಆಟೋ ಗೆ ಹಿಂಬದಿಯಿಂದ ಕಾರು ಗುದ್ದಿದ್ದು ಎರಡು ವಾಹನಗಳು ಜಖಂ ಗೊಂಡಿವೆ.

ಆಟೋದಲಿದ್ದ ಮೂವರಿಗೆ ಹೆಚ್ಚಾಗಿ ಪೆಟ್ಟಾಗಿದ್ಫು  ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ


ಬುಧವಾರ, ನವೆಂಬರ್ 23, 2022

ಮಧ್ಯರಾತ್ರಿ ಗ್ರಾಮಕ್ಕೆ ನುಗ್ಗಿ ಕುರಿಯನ್ನು ಹೊತ್ತೊಯ್ದ ಚಿರತೆ




ಚಿಕ್ಕಮಗಳೂರು : ಮಧ್ಯೆರಾತ್ರಿ ಗ್ರಾಮಕ್ಕೆ ನುಗ್ಗಿ

 ಚಿರತೆಯೊಂದು ಕುರಿಯನ್ನ ಹೊತ್ತೊಯ್ದ ಪ್ರಕರಣ

ಚಿಕ್ಕಮಗಳೂರು ತಾಲೂಕಿನ

ಉದ್ದೆಬೋರನಹಳ್ಳಿ-ತಡೆಬೆನಹಳ್ಳಿ ಗ್ರಾಮದಲ್ಲಿ  ನಡೆದಿದೆ

ಒಂದು ಕುರಿಯನ್ನ ಕೊಂದು, ಮತ್ತೊಂದು ಕುರಿಯನ್ನ ಹಚ್ಚಿಕೊಂಡು ಹೋಗಿದೆ

ರಮೇಶ್ ಎಂಬುವರಿಗೆ ಸೇರಿದ ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ್ದು ಕಳೆದ ಮೂರ್ನಾಲ್ಕು ತಿಂಗಳಿನಿಂದ ನಿರಂತರವಾಗಿ  ಚಿರತೆ ಕಾಣಿಸಿಕೊಳ್ಳುತ್ತಿದ್ದು ಚಿರತೆಯನ್ನ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಶಾಸಕ ಟಿ .ಡಿ .ರಾಜೇಗೌಡ ಜಮೀನು ಖರೀದಿ ಪ್ರಕರಣ :ತನಿಖೆ ತೀವ್ರಗೊಳಿಸುವಂತೆ ಜೀವರಾಜ್ ಒತ್ತಾಯ

 



ಚಿಕ್ಕಮಗಳೂರು:  ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರ ವಿರುದ್ಧ ಸಲ್ಲಿಕೆಯಾಗಿರುವ ದೂರು ಆಧರಿಸಿ ಲೋಕಾಯುಕ್ತ ಪೊಲೀಸ್ತರು ತಕ್ಷಣ ಎಫ್ ಐ ಆರ್ ದಾಖಲಿಸಿ ತನಿಖೆ ಚುರುಕುಗೊಳಿಸುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ. ಎನ್ .ಜೀವರಾಜ್ ಆಗ್ರಹಿಸಿದ್ದಾರೆ.

ದೂರು ಪ್ರತಿಯನ್ನು ಮುಂದಿಟ್ಟುಕೊಂಡು ಸುದ್ದಿಗೋಷ್ಠಿ ನಡೆಸಿರುವ ಅವರು ಸುಮಾರು 200 ಎಕರೆ ಜಮೀನನ್ನು ಶಾಸಕ ಟಿ ಡಿ ರಾಜೇಗೌಡ145 ಕೋಟಿ ರೂ.ಗಳಿಗೆ ಪತ್ನಿ ಹೆಸರಿನಲ್ಲಿ ಖರೀದಿಸಿದ್ದು ಅಷ್ಟು ಹಣ ಅವರಿಗೆ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದಾರೆ.

ಆಸ್ತಿ ಖರೀದಿಸಿರುವ ಬಗ್ಗೆ ತಮ್ಮ ತಕರಾರು ಇಲ್ಲ. ಚುನಾವಣೆಗೆ ಸ್ಪರ್ಧಿಸುವ ಸಮಯದಲ್ಲಿ 35 ಲಕ್ಷ ರೂ. ಇರುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಉಳಿಕೆ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿ ಆ ಬಗ್ಗೆ ದಾಖಲೆ ಸಲ್ಲಿಸಿದ್ದಾರೆಯೇ ಎಂದು ಕೇಳಿದ್ದಾರೆ.

ಬಾಳೆಹೊನ್ನೂರು ಸಮೀಪ ಸಿದ್ದಾರ್ಥ ಹೆಗ್ಡೆ ಇವರಿಗೆ ಸಂಬಂಧಿಸಿದ ಜಮೀನು ಖರೀದಿ ಪ್ರಕ್ರಿಯೆಯಲ್ಲಿಯೂ ಸಾಕಷ್ಟು ತೆರಿಗೆ ವಂಚನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ದೂರು ಸಲ್ಲಿಕೆಯಾಗಿ ಸಾಕಷ್ಟು ದಿನಗಳು ಆಗಿದ್ದರು ಶಾಸಕರು ಇನ್ನೂ ಪ್ರತಿಕ್ರಿಯೆ ನೀಡದೆ ಇರುವುದು ತಪ್ಪನ್ನು ಒಪ್ಪಿಕೊಂಡಂತೆ ಆಗಿದೆ ಎಂದು ವ್ಯಾಖ್ಯಾನಿಸಿದರು.

ಲೋಕಾಯುಕ್ತರು ತಕ್ಷಣ ಎಫ್ ಐ ಆರ್ ದಾಖಲಿಸಿ ತನಿಖೆ ತೀವ್ರಗೊಳಿಸುವುದರ ಜೊತೆಗೆ ಕಾನೂನು ಪ್ರಕ್ರಿಯೆಗೂ ಮುಂದಾಗಬೇಕೆಂದು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಅಧ್ಯಕ್ಷ ಕಲ್ಮರುಡಪ್ಪ,' ನಗರಸಭೆ ಮಾಜಿ ಅಧ್ಯಕ್ಷ ದೇವರಾಜ್' ಸುದ್ದಿಗೋಷ್ಠಿಯಲ್ಲಿದ್ದರು.

ಮಂಗಳವಾರ, ನವೆಂಬರ್ 22, 2022

ಎರಡು ಪ್ರತ್ಯೇಕ ಅಪಘಾತ ಪ್ರಕರಣ: ಒಬ್ಬರ ಸಾವು - ಐವರಿಗೆ ಗಾಯ

 


ಚಿಕ್ಕಮಗಳೂರು : ಇಂದು ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬರು ಮೃತಪಟ್ಟು ಹಲವರಿಗೆ ಗಾಯಗಳುಆಗಿವೆ.

ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಿಯಂತ್ರಣ ತಪ್ಪಿ ಜೀಪ್ ಕಂದಕಕ್ಕೆ ಬಿದ್ದು ಅಕ್ಷತಾ (35) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಹೊಸಗದ್ದೆಯಿಂದ ಹೊರನಾಡಿಗೆ ಹೋಗುತ್ತಿದ್ದ ಜೀಪ್  ಇದಾಗಿದ್ದು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕೋಲಾರದಿಂದ ಧರ್ಮಸ್ಥಳ ಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ 20 ಅಡಿ ಪ್ರಪಾತಕ್ಕೆ ಪಲ್ಟಿ ಹೊಡೆದು ವಾಹನದಲಿದ್ದ ಐದು ಜನ ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ

ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಈ ದುರ್ಘಟನೆ ಸಂಭವಿಸಿದ್ದು ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

ಶಾಸಕರ ಮೇಲೆ ಹಲ್ಲೆ : ದಲಿತ ದೌರ್ಜನ್ಯ ಪ್ರಕರಣ ದಾಖಲಿಸಲು ಆಗ್ರಹ



ಚಿಕ್ಕಮಗಳೂರು: ಆನೆ ತುಳಿತದಿಂದ ಸಾವಿಗೀಡಾದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಯವರನ್ನು ಜಾತಿ ನಿಂದನೆ ಮಾಡಿದವರ ವಿರುದ್ಧ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
ಹೊನ್ನೇಶ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಅಂದುಶಾಸಕರನ್ನು ಜಾತಿ ಸೂಚಕ ಪದಗಳಿಂದ ನಿಂದಿಸಿದ್ದು ಈವರೆಗೂ ಆ ಬಗ್ಗೆ ಪ್ರಕರಣ ದಾಖಲಿಸದೆ ಪೊಲೀಸರು ನಿರ್ಲಕ್ಷ ತಾಳಿದ್ದಾರೆ ಎಂದು ಆರೋಪಿಸಿದ್ದಾರೆ.
ಬೀಮ್ ಸೇನಾ ಅರ್ಮಿಯ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.
ಮುಗ್ಧರ ವಿರುದ್ಧ ಕ್ರಮ ಸಲ್ಲದು : ಮೂಡಿಗೆರೆ ಶಾಸಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಮುಗ್ಧರ ವಿರುದ್ಧ ಪ್ರಕರಣದ ದಾಖಲಿಸಿ ಬಂಧಿಸಿರುವುದು ಸರಿಯಲ್ಲ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ' ಕಾಂಗ್ರೆಸ್ ಹಾಗೂ ಜೆಡಿಎಸ್   ಅಭಿಪ್ರಾಯಸಿದೆ.
ಘಟನೆ ಹಿಂದೆ ಬಿಜೆಪಿಯವರದ್ದೇ ಕೆಲವರ ಷಡ್ಯಂತರ ಇದ್ದು ತಪ್ಪಿತಸ್ಥರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ರಾಧಾ  ಸುಂದರೇಶ್ ದೇವರಾಜ್ ಮತ್ತು ಮಂಜಪ್ಪ ಗೌಡ ಒತ್ತಾಯಿಸಿದ್ದಾರೆ




ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದ ನೂರಾರು ಕಾರ್ಯಕರ್ತರು : ಶಾಸಕರಿಗೆ ಶಾಕ್


ಚಿಕ್ಕಮಗಳೂರು :ಶೃಂಗೇರಿ ಕ್ಷೇತ್ರದ ಮಹಲ್ ಗೋಡು ಗೋಡು ಗ್ರಾಮದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಟಿ.ಡಿ.ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ಕೊಟ್ಟಿದ್ದಾರೆ

 ಗ್ರಾ.ಪಂ ಮಾಜಿ ಅಧ್ಯಕ್ಷೆ ಕಮಲ ನೇತೃತ್ವದಲ್ಲಿ ಬೂತ್ ಮಟ್ಟದ ಕಾರ್ಯಕರ್ತರು  ಬಿಜೆಪಿಗೆ ಸೇರಿದ್ದಾರೆ.

ಶಾಸಕ ರಾಜೇಗೌಡ ವಿರುದ್ಧ ಬೇಸತ್ತು ಶಾಮಿಯಾನ ಹಾಕಿ, ಕಾರ್ಯಕ್ರಮ ಮಾಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರಾಜೇಗೌಡರ ಮೇಲೆ ವಿಶ್ವಾಸವಿಲ್ಲ ಎಂದು ಘೋಷಣೆ ಹಾಕಿದ್ದು  ಮಾಜಿ ಸಚಿವ ಜೀವರಾಜ್ ಬಹುತೇಕ ಹಿಂದುಳಿದ ಜನಾಂಗಕ್ಕೆ ಸೇರಿದ ಈ ಕಾರ್ಯಕರ್ತರನ್ನು ಬರ ಮಾಡಿಕೊಂಡಿದ್ದಾರೆ.

ಮೀಸಲಾತಿ ಹೆಚ್ಚಿಸಿದ ಬಿಜೆಪಿಗೆ ಜಿಂದಾಬಾದ್ ಕೂಗಿದ್ದಾರೆ.



ಸೋಮವಾರ, ನವೆಂಬರ್ 21, 2022

ತಮ್ಮ ಮೇಲಿನ ಹಲ್ಲೆ ವ್ಯವಸ್ಥಿತ ಸಂಚು: ರಾಜಕೀಯ ಪಿತೂರಿ-ಮೂಡಿಗೆರೆ ಶಾಸಕ ಎಂ. ಪಿ ಕುಮಾರಸ್ವಾಮಿ

 


ಚಿಕ್ಕಮಗಳೂರು: ಕಾಡಾನೆಯಿಂದ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ ಹಾಗೂ ರಾಜಕೀಯ ಸಂಚು ಎಂದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮೂಡಿಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ತಾವು ಸ್ಥಳಕ್ಕೆತೆರಳಿದ್ದ ಸಂದರ್ಭದಲ್ಲಿ ಬಹಳಷ್ಟು ಜನ ಕೈಯಲ್ಲಿ ದೊಣ್ಣೆ ಇತರೆ ಆಯುಧಗಳು ಇದ್ದು ಎಂದು ದೂರಿದ್ದಾರೆ.
ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿ ಸಹವಾಲು ಸ್ವೀಕರಿಸಲು ತೆರಳಿದ್ದ ಸಂದರ್ಭದಲ್ಲಿ ಗುಂಪು ಕಟ್ಟಿಕೊಂಡು ಆಕ್ರೋಶಭರಿತರಾಗಿದ್ದ ಜನ ಚಪ್ಪಲಿಯಿಂದ ತಳ್ಳಿಸಿದ್ದೆ ಅಲ್ಲದೆ, ಅಟ್ಟಾಡಿಸಿಕೊಂಡು ಬಂದರು ಎಂದು ಘಟನೆಯ ಮಾಹಿತಿ ಕೊಟ್ಟಿದ್ದಾರೆ.
ತಮ್ಮ ಹಾಗೂ ಪೊಲೀಸರ ವಾಹನಗಳ ಮೇಲು ಕಲ್ಲು ತೂರಿದ್ದು ಇದೊಂದು ರಾಜಕೀಯ ವ್ಯವಸ್ಥಿತ ಪಿತೂರಿ ಎಂದು ಆರೋಪಿಸಿ ಮುಂದಿನ ದಿನಗಳಲ್ಲಿ ತಾವು ಚುನಾವಣೆಗೆ ನಿಲ್ಲಬಾರದು ಎನ್ನುವ ಷಡ್ಯಂತರ ಇದರ  ಹಿಂದೆ ಇದೆ ಎಂದರು.
ವ್ಯಾಪಕ ಖಂಡನೆ: ಮೂಡಿಗೆರೆ ಶಾಸಕ ಎಂಪಿ ಕುಮಾರ ಸ್ವಾಮಿ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ವಿವಿಧ ದಲಿತ ಪರ ಸಂಘಟನೆಗಳು ಖಂಡಿಸಿವೆ. ಇಂಥ ಘಟನೆಗಳ ವಿರುದ್ಧ ಸಂಘಟಿತ ಹೋರಾಟ ನಡೆಸುವಂತೆ ಕರೆ ನೀಡಿವೆ
ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿಯನ್ನು ಹತ್ತಿಕ್ಕುವ ಕೆಲಸವನ್ನು ಕೆಲ ಮೇಲ್ವರ್ಗದವರು ನಿರಂತರವಾಗಿ ಮಾಡುತ್ತಿದ್ದು ಅದರ ಮುಂದುವರಿದ ಭಾಗ ಈ ಘಟನೆ ಎಂದು ಸಾರ್ವಜನಿಕ ವಲಯದಲ್ಲೂ ಟೀಕೆ ವ್ಯಕ್ತವಾಗಿದೆ

ಭಾನುವಾರ, ನವೆಂಬರ್ 20, 2022

ಆನೆ ದಾಳಿಗೆ ಮಹಿಳೆ ಸಾವು: ಸ್ಥಳಕ್ಕೆ ತೆರಳಿದ ಶಾಸಕರ ಮೇಲೆ ಹಲ್ಲೆ ಯತ್ನ : ಶವ ಇಟ್ಟು ಪ್ರತಿಭಟನೆ- ಲಾಠಿ ಪ್ರಹಾರ ಕೊಟ್ಟಿಗೆಹಾರ :ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ ಈಗ ಹೊಸ ತಿರುವು ಪಡೆಯ ತೊಡಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆಯು ನಡೆದಿದೆ.ಬೆಳಗ್ಗೆ 7.30ಕ್ಕೆ ಕಾಡಾನೆ ತುಳಿದು ಮಹಿಳೆ ಸಾವಪಿದ್ದು ಸಂಜೆ 6 ಗಂಟೆಗೆ ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ಕುಮಾರಸ್ವಾಮಿ ನಡೆಯನ್ನ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ.ಶಾಸಕ ಕುಮಾರಸ್ವಾಮಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದುಪ್ರಶ್ನೆ ಮಾಡಿದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತವಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಗೊಂಡಿದೆ . ಶಾಸಕರ ಮೇಲೆ ಹಲ್ಲೆ ಯತ್ನ ನಡೆದಿದ್ದು ಅವರನ್ನು ಗ್ರಾಮದಿಂದ ಪೊಲೀಸರು ಜೀಪಿನಲ್ಲಿ ಸುರಕ್ಷಿತವಾಗಿ ಕರೆತಂದಿದ್ದಾರೆ. ಹರಿದು ಹೋದ ಅಂಗಿಯೊಂದಿಗೆ ಸ್ಪಷ್ಟನೆಯನ್ನು ನೀಡಿದ ಶಾಸಕರು ಉದ್ದೇಶಪೂರ್ವಕವಾಗಿ ಈ ಹಲ್ಲೆ ಯತ್ನ ತಡೆದಿದೆ ಎಂದು ಆರೋಪಿಸಿದ್ದಾರೆ

 


ಕೊಟ್ಟಿಗೆಹಾರ :ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ ಈಗ ಹೊಸ ತಿರುವು ಪಡೆಯ ತೊಡಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆಯು ನಡೆದಿದೆ.ಬೆಳಗ್ಗೆ 7.30ಕ್ಕೆ ಕಾಡಾನೆ ತುಳಿದು ಮಹಿಳೆ ಸಾವಪಿದ್ದು ಸಂಜೆ 6 ಗಂಟೆಗೆ ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ಕುಮಾರಸ್ವಾಮಿ ನಡೆಯನ್ನ  ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.
ಈ ವೇಳೆ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ.ಶಾಸಕ ಕುಮಾರಸ್ವಾಮಿಯನ್ನು  ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದುಪ್ರಶ್ನೆ ಮಾಡಿದ ಜನರ ಮೇಲೆ  ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ
ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತವಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಗೊಂಡಿದೆ .
ಶಾಸಕರ ಮೇಲೆ ಹಲ್ಲೆ ಯತ್ನ ನಡೆದಿದ್ದು ಅವರನ್ನು ಗ್ರಾಮದಿಂದ ಪೊಲೀಸರು ಜೀಪಿನಲ್ಲಿ ಸುರಕ್ಷಿತವಾಗಿ ಕರೆತಂದಿದ್ದಾರೆ.
ಹರಿದು ಹೋದ ಅಂಗಿಯೊಂದಿಗೆ ಸ್ಪಷ್ಟನೆಯನ್ನು ನೀಡಿದ ಶಾಸಕರು ಉದ್ದೇಶಪೂರ್ವಕವಾಗಿ ಈ ಹಲ್ಲೆ ಯತ್ನ ತಡೆದಿದೆ ಎಂದು ಆರೋಪಿಸಿದ್ದಾರೆ.











ಚಿನ್ನದ ವರ್ತಕನನ್ನು ಬೆದರಿಸಿ ದರೋಡೆ ; ಅಜ್ಜಂಪುರ ಠಾಣಾಧಿಕಾರಿ ಸೇರಿ ನಾಲ್ಕರ ವಿರುದ್ಧ ಪ್ರಕರಣ ದಾಖಲು : ಆರೋಪಿಗಳು ಎಸ್ಕೇಪ್

 


ಚಿಕ್ಕಮಗಳೂರು: ಚಿನ್ನದ ವರ್ತಕನನ್ನು ಬೆದರಿಸಿ 10 ಲಕ್ಷ ರೂ. ನೀಡುವಂತೆ ಒತ್ತಾಯಿಸಿ ದರೋಡೆ ಮಾಡಿದ  ಆರೋಪದ ಹಿನ್ನೆಲೆಯಲ್ಲಿ ಅಜ್ಜಂಪುರ ಠಾಣಾಧಿಕಾರಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ದಾವಣಗೆರೆಯ ವರ್ತಕ ಭಗವಾನ್  ನೀಡಿರುವ ದೂರು ಆಧರಿಸಿ ಈ ಕ್ರಮ ಕೈಗೊಂಡಿದ್ದು ಅಜ್ಜಂಪುರ ಠಾಣಾಧಿಕಾರಿ ಲಿಂಗರಾಜು ಮುಖ್ಯ ಆರೋಪಿಯಾಗಿದ್ದಾರೆ.
ಸಕ್ಕರಾಯಪಟ್ಟಣದ ಧನಪಾಲ ನಾಯಕ್ ಕುದುರೆಮುಖದ ಓಂಕಾರ ಮೂರ್ತಿ ಲಿಂಗದಹಳ್ಳಿಯ ಶರತ್ ರಾಜ್ ಉಳಿದ ಆರೋಪಿಗಳು.
ದಾವಣಗೆರೆಯ ಚಿನ್ನದ ವರ್ತಕ ಭಗವಾನ್ ರವರ ಪುತ್ರ ರೋಹಿತ್ ಸುಮಾರು 2 ಕೆಜಿ ಚಿನ್ನದ ಆಭರಣಗಳನ್ನು ಬೇಲೂರಿನ  ವರ್ತಕರು ಒಬ್ಬರಿಗೆ ನೀಡಲು ಕಾರಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ರೋಹಿತ್ ಆಭರಣಗಳೊಂದಿಗೆ ಬರುತ್ತಿದ್ದ ಸಂದರ್ಭದಲ್ಲಿ ಬುಕ್ಕಾಂಬುದಿ ಗೇಟಿನ ಬಳಿ ಇಬ್ಬರು ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ.
ನೆರವಾಗಿ ಕಾರಿನ ಒಳಗೆ ಬಂದು ಕುಳಿತ ಪೊಲೀಸ್ ಸಿಬ್ಬಂದಿ, ಸ್ವಲ್ಪ ದೂರದಲ್ಲಿ ಠಾಣಾಧಿಕಾರಿ ಇದ್ದು ಅಲ್ಲಿಗೆ ಕರೆದುಕೊಂಡು ಹೋಗಿದ್ದಾರೆ.
ಅಲ್ಲಿ ರೋಹಿತ್ ಅನ್ನು ಬಲವಂತವಾಗಿ ಬೇರೆ ಸ್ಥಳಕ್ಕೆ ಕರೆದುಕೊಂಡು ಹೋಗಿ 10 ಲಕ್ಷ ರೂ. ನೀಡುವಂತೆ ಬೇಡಿಕೆ ಸಲ್ಲಿಸಿದ್ದಾರೆ.
ತಪ್ಪಿದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುವ ಆರೋಪದ ಮೇಲೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಬೆದರಿಸಿದ್ದಾರೆ ಎನ್ನಲಾಗಿದೆ.
ತಾನು ಕಾನೂನು ಬದ್ಧವಾಗಿ ವ್ಯಾಪಾರ ಮಾಡುತ್ತಿದ್ದು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಿದರು ಬಿಡದೆ ಹಣಕ್ಕೆ ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಅಂತಿಮವಾಗಿ 5 ಲಕ್ಷ ರೂಗಳಿಗೆ ವ್ಯವಹಾರ ಕುದುರಿದ್ದು ರೋಹಿತ್ ಅಜ್ಜಂಪುರದಲ್ಲಿರುವ ವರ್ತಕರೊಬ್ಬರಿಂದ ಹಣವನ್ನು ಪಡೆದು ಇವರಿಗೆ ಸಂದಾಯ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರನ್ನು ಆಧರಿಸಿ ತನಿಖೆ ನಡೆಸಿ ಮೇಲ್ನೋಟಕ್ಕೆ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ.
ಬೇಲಿಯೇ ಎದ್ದು ಹೊಲ ಮೇದಂತೆ ಆಗಿದ್ದು ಈ ಪ್ರಕರಣ ಇಡೀ ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಆಗಿದೆ.




** ಕುದುರೆಮುಖ ಠಾಣಾಧಿಕಾರಿಯೊಬ್ಬರು ಅಕ್ರಮವಾಗಿ ಚಹಾ ಪುಡಿ ಯನ್ನು ಸಾಗಿಸುತ್ತಿರುವ ದೃಶ್ಯವನ್ನು ದಾಖಲೆ ಸಮೇತ ಗ್ರಹ ಸಚಿವರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದೇ ಇಂಥ ಪ್ರಕರಣ ಮರುಕಳಿಸಲು ಕಾರಣ ಎಂದು ಪೊಲೀಸ್ ಇಲಾಖೆಯಲ್ಲಿಯೇ ಮಾತುಗಳು ಕೇಳಿ ಬರುತ್ತಿವೆ

ಮೂಡಿಗೆರೆ ಸಮೀಪ ಕಾಡಾನೆಗೆ ಮಹಿಳೆ ಬಲಿ: ಸ್ಥಳೀಯರ ಅಕ್ರೋಶ

 


ಮೂಡಿಗೆರೆ: ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ.

  45 ವರ್ಷದ ಶೋಭಾ ಅಮೃತ ದುರ್ದೈವಿ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳು ಮನೆ ಸಮೀಪವೇ ಬರುತ್ತಿದ್ದು ಜನರು ಭಯಭೀತರಾಗಿದ್ದಾರೆ.

 ಜಾನುವಾರುಗಳಿಗೆ ಹುಲ್ಲು ತರಲು ಹೋದಾಗ ಶೋಭಾ ಮೇಲೆ ಕಾಡಾನೆ ನಡೆಸಿದ್ದು  ಮಹಿಳೆಯ ದೇಹವನ್ನು ಕಾಡಾನೆ ನಜ್ಜುಗುಜ್ಜು ಮಾಡಿದೆ. ಗ್ರಾಮಸ್ಥರು ಭಯ ಬೀತರಾಗಿದ್ದು ಹಾಡು ಹಗಲೇ ನಡೆದ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿದ್ದಾರೆ.

 ಕಾಡಾನೆಗಳು ಊರಿನಲ್ಲಿ ಇದ್ದರು ಅರಣ್ಯ ಇಲಾಖೆ ತಿಳಿಸಿದರೆ ಅವುಗಳನ್ನು ಕಾಡಿಗಟ್ಟಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ವಿದ್ಯುತ್ ತಂತಿ ತಗುಲಿ ಬಾಲಕ ಸಾವು: ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ಡಿ.ಕೆ ರಾಜಪ್ಪನವರ ಪುತ್ರ ಶರತ್ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾನೆ.

ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಮೋಟಾರ್ ಪಂಪಿನ ಸ್ಟಾರ್ಟರ್ ಬಾಕ್ಸ್ ಮೇಲೆ ಬಿದ್ದಿತ್ತು. ಬಾಕ್ಸ್ನ ಬೀಗ ತೆಗೆಯಲು ಬಂದಿದ್ದ ಶರತ್ ಗೆ ವಿದ್ಯುತ್ ಆಗಲಿ ಸ್ಥಳದಲ್ಲಿ ಸಾವಪ್ಪಿದ್ದಾನೆ.

ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಹಾಗೂ ವಿಮಾಸಂಸ್ಥೆ ಪ್ರತಿನಿಧಿಗಳು ಭೇಟಿ ನೀಡಿ ಸೂಕ್ತ ಪರಿಹಾರ ನೀಡುವ ಭರವಸೆ ಕೊಟ್ಟಿದ್ದಾರೆ

 

ಶನಿವಾರ, ನವೆಂಬರ್ 19, 2022

ಭಾರಿ ಪ್ರಮಾಣದ ಬಾಡಿಗೆ ಬಾಕಿ: ಕೋಳಿ ಅಂಗಡಿ ಮಳಿಗೆಗಳಿಗೆ ಬೀಗ

 


ಚಿಕ್ಕಮಗಳೂರು ನಗರದ ಸಂತೆ ಮಾರುಕಟ್ಟೆಯ ಒಳಗಿರುವ ಬಾಡಿಗೆ ಹಣ ಕಟ್ಟದ ಕೋಳಿ ಮಳಿಗೆಗಳಿಗೆ ಬೀಗ ಹಾಕಲಾಗಿದೆ.

 ಅನೇಕ ತಿಂಗಳುಗಳಿಂದ ಬಾಡಿಗೆ ಕಟ್ಟದೆ  ಲಕ್ಷ ರೂಗಳಿಗೂ ಹೆಚ್ಚು ಬಾಡಿಗೆ ಬಾಕಿ ಉಳಿದಿದ್ದು  ಅನೇಕ ಬಾರಿ ಹೇಳಿದರೂ ನಗರಸಭೆಗೆ ಬಾಡಿಗೆ ಕಟ್ಟಿಲ್ಲ.

ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್  ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಬಾಡಿಗೆ ನೀಡದೆ ಇರುವ ಮಳಿಗೆಗಳನ್ನು ನಗರಸಭೆಯ ವತಿಯಿಂದ ಬಾಗಿಲು ಮುಚ್ಚಿಸಿ ಬೀಗ ಹಾಕಿಸುವ ಕೆಲಸವನ್ನು ನಡೆಸಿದರು,

      ನಗರಸಭಾ ಎಂಜಿನಿಯರ್ ಚಂದನ್  ಕಂದಾಯ ನಿರೀಕ್ಷಕರಾದ ಶಿವಾನಂದ್, ಜಗದೀಶ್, ಬಿಲ್ ಕಲೆಕ್ಟರ್ ಸಂತೋಷ್, ಪ್ರದೀಪ್, ಸತೀಶ್, ಸೂಪರ್ವೈಸರ್ ಮುರುಗೇಶ್, ಇತರೆ   ಸಿಬ್ಬಂದಿ ಉಪಸ್ಥಿತರಿದ್ದರು.

ಬಾಬಾಬುಡನ್ ದರ್ಗಾ ವ್ಯವಸ್ಥಾಪನಾ ಸಮಿತಿಯ ರಚನೆಯಲ್ಲಿ ಬಿಜೆಪಿ ಸರ್ಕಾರದ ಕೋಮುವಾದ : ಚಿಂತಕ ಶಿವಸುಂದರ್ ಟೀಕೆ

 



ಚಿಕ್ಕಮಗಳೂರು  : ಬಾಬಾಬುಡನ್ ದರ್ಗಾ ವಿಷಯದಲ್ಲಿ  ಕೋಮುವಾದಿ ರಾಜಕಾರಣ ಮಾಡುತ್ತಾ ಅಧಿಕಾರಕ್ಕೆ ಬಂದ ಬಿಜೆಪಿ  ನಿರೀಕ್ಷೆಯಂತೆ ಬಾಬಾಬುಡನ್ ದರ್ಗಾ ವ್ಯವಸ್ಥಾಪನಾ ಸಮಿತಿಯ ರಚನೆಯಲ್ಲೂ ಎಲ್ಲಾ ಆಡಳಿತಾತ್ಮಕ  ಹಾಗೂ ಸಾಂವಿಧಾನಾತ್ಮಕ ನೈತಿಕತೆಗಳನು ಗಾಳಿಗೆ ತೂರಿದೆ ಎಂದು ಚಿಂತಕ ಶಿವ ಸುಂದರ ಆರೋಪಿಸಿದ್ದಾರೆ
ಬಾಬಾಬುಡನ್ ದರ್ಗಾದಲ್ಲಿ ಪಾರಂಪರಿಕವಾಗಿ ಆಡಳಿತಾತ್ಮಕ ಹಾಗೂ ಧಾರ್ಮಿಕ ಅಧಿಕಾರವನ್ನು ಹೊಂದಿದ್ದ ಶಾಖಾದ್ರಿಯ ಅಧಿಕಾರವನ್ನು ಕಿತ್ತುಹಾಕಿತು .. ಮತ್ತು  ಅಲ್ಲಿ ಆಡಳಿತ ಮತ್ತು ಧಾರ್ಮಿಕ ನಿರ್ವಹಣೆಗೆ ಒಂದು ವ್ಯವಸ್ಥಾಪನಾ ಸಮಿತಿಯನ್ನು ರಚಿಸಬೇಕೆಂಬ ಆದೇಶವನ್ನು ಹೊರಡಿಸಿತು.
ಪ್ರಸ್ತಾವಿತ ಸಂಸ್ಥೆಗೆ ಹಿಂದೂ ಮತ್ತು ಮುಸ್ಲಿಂ ಎರಡೂ ಧರ್ಮದವರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವುದು .
ಸದರಿ ಸಂಸ್ಥೆಯಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು  ವ್ಯವಸ್ಥಾಪನಾ ಸಮಿತಿ ಅರ್ಚಕ ಹಾಗೂ ಮುಜಾವರ್ ಅವರನ್ನು ನೇಮಿಸುವುದು ಎಂದು ಆದೇಶಿಸಿತ್ತು.
ಆದರೆ  ಬಾಬಾಬುಡನ್ ದರ್ಗಾ ನಿರ್ವಹಣೆಗೆ ಸರ್ಕಾರ  ಮೂರು ವರ್ಷಗಳ ಅವಧಿಗೆ ಘೋಷಿಸಿರುವ  ಎಂಟು ಜನರ ಸಮಿತಿಯಲ್ಲಿ- ಏಳು ಸದಸ್ಯರು ಹಿಂದೂಗಳು.ಒಬ್ಬರು ಮಾತ್ರ ಮುಸ್ಲಿಮರಿದ್ದಾರೆ ಎಂದು ಆಕ್ಷೇಪ  ಹೊರ ಹಾಕಿದ್ದಾರೆ.

ಇದು ಬಿಜೆಪಿ ಸರ್ಕಾರದ ಹಿಂದುತ್ವ ರಾಜಕಾರಣದ ಸರ್ವಾಧಿಕಾರವಲ್ಲದೆ ಮತ್ತೇನು? ಎಂದು ಪ್ರಶ್ನಿಸಿ
ಎರಡೂ ಧರ್ಮದವರನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ಕೋರ್ಟಿನ ಮುಂದೆ ಮುಚ್ಚಳಿಕೆ ಕೊಟ್ಟು ಸಮಿತಿಯಲ್ಲಿ  ನೆಪಮಾತ್ರಕ್ಕೆ ಒಬ್ಬ ಮುಸ್ಲಿಂ ಸದಸ್ಯನನ್ನು  ಮಾತ್ರ ನೇಮಕ ಮಾಡಿದೆ ಎಂದು ಟೀಕಿಸಿದ್ದಾರೆ.
ಇದಕ್ಕಿಂತ ಭಿನ್ನಾವಾದದ್ದನ್ನು ಬಿಜೆಪಿ ಸರ್ಕಾರ ಮಾಡುತ್ತದೆಂಬ ನಿರೀಕ್ಷೆಯೂ ಇರಲಿಲ್ಲ.
ನಾಗರೀಕ ಸಮಾಜ  ಮೌನ ಬಿಜೆಪಿಯ ಕ್ರೌರ್ಯಕ್ಕಿಂತ ಅಪಾಯಕಾರಿ.. ಅಲ್ಲವೇ? ಎಂದು ಹೇಳಿದ್ದಾರೆ

ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ -ಪೀಠಕ್ಕೆ ವ್ಯವಸ್ಥಾಪನ ಸಮಿತಿ ರಚನೆ

 



ಚಿಕ್ಕಮಗಳೂರು :ತಾಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ -ಪೀಠಕ್ಕೆ ಸರ್ಕಾರ ವ್ಯವಸ್ಥಾಪನ ಸಮಿತಿಯನ್ನು ರಚಿಸಿದೆ.

8 ಸದಸ್ಯರನ್ನು ಒಳಗೊಂಡ ಸಮಿತಿ ಇದಾಗಿದೆ. ಸಮಿತಿ ಸದಸ್ಯರಾಗಲು 43 ಜನ ಅರ್ಜಿ ಸಲ್ಲಿಸಿದ್ದು, ಪರಿಶೀಲಿಸಿ ಆಯ್ಕೆಯನ್ನು ಮಾಡಲಾಗಿದೆ.

ಸಮಿತಿ ರಚಿಸಿದ ಸರ್ಕಾರವನ್ನು ಸ್ವಾಗತಿಸಿ ,ಐದು ದಶಕಗಳ ಹೋರಾಟಕ್ಕೆ ಸಂದ ಜಯ ಎಂದು ಶಾಸಕ ಸಿಟಿ ರವಿ ಮತ್ತು ವಿಶ್ವ ಹಿಂದೂ ಪರಿಷತ್ ಪ್ರತಿಕ್ರಿಯಿಸಿದೆ.


ಶುಕ್ರವಾರ, ನವೆಂಬರ್ 18, 2022

ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ- ಮನವಿ ಸಲ್ಲಿಕೆ

 


ಚಿಕ್ಕಮಗಳೂರು ವಿಧಾನ ಪರಿಷತ್ ಮಾಜಿ ಸದಸ್ಯ ಗಾಯತ್ರಿಶಾಂತ ಗೌಡರ ಮನೆ ನಡೆದ ಐಟಿ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಅಂಶುಮನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳನ್ನು ಒಕ್ಕೂಟ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದರು.

ಗಾಯತ್ರಿ ಶಾಂತಗೌಡರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತವಾಗಿದ್ದು , ನಿಜವಾದ ಭ್ರಷ್ಟರ ಮೇಲೆ ದಾಳಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಮಾಜಿ ಸಚಿವೆ ಮೋಟಮ್ಮ ಮುಖಂಡರಾದ ರೇಖಾ ಹುಲಿಯಪ್ಪ ಗೌಡ' ದೇವರಾಜ ಪಾಲ್ಗೊಂಡಿದ್ದರು.


ಜನ ಬಳಕೆ ದೇಶದಲ್ಲಿ ಮೀಸಲು ಅರಣ್ಯ; ಸಾರ್ವಜನಿಕರ ವಿರೋಧ ರಸ್ತೆ ತಡೆ

 



ಚಿಕ್ಕಮಗಳೂರು: ಜನ ಬಳಕೆ ಮಾರ್ಗದಲ್ಲಿ ಮೀಸಲು ಅರಣ್ಯ ಜಾರಿ  ಪ್ರತಿಭಟಿಸಿ ರಾಜ್ಯ ಹೆದ್ದಾರಿ ತಡೆದು ನೂರಾರು ಜನ ಪ್ರತಿಭಟನೆ ಮಾಡಿದ್ದಾರೆ.

ಕೊಪ್ಪ ತಾಲೂಕು ಮೇಗುಂದ ಹೋಬಳಿ ಹೆಗ್ಗಾರು ಗ್ರಾಮದ ಬ್ಲಾಕ್ -1ರಿಂದ  4ರ ವರೆಗೆ  ಒಟ್ಟು 1175.02 ಎಕರೆ ಮತ್ತು ಹರಳಾನೆ ಗ್ರಾಮದ ಗೋಮಾಳ ಮತ್ತು ಸೊಪ್ಪಿನ ಬೆಟ್ಟದ ಪ್ರದೇಶವನ್ನು ಮೀಸಲು ಅರಣ್ಯವಾಗಿ ಘೋಷಿಸುವ ಪ್ರಸ್ತಾವನೆಯನ್ನು  ಸಲ್ಲಿಸಿದ್ದಾರೆ ಎಂದು ಜನ ಆರೋಪಿಸಿದರು.

ಮಲೆನಾಡಿನ ಭಾಗದ ಜನರು ಈಗಾಗಲೇ ಕೃಷಿಗೆ ಬಾಧಿಸಿರುವ ರೋಗಗಳಿಂದ ಹೈರಾಣಗಿದ್ದು ಈ ಅಧಿಸೂಚನೆಯು ಮೊದಲೇ ಆತಂಕದಲ್ಲಿದ್ದ ಜನರನ್ನು ಇನ್ನಷ್ಟು ಆತಂಕಕ್ಕೆ ತಳ್ಳಿದಂತಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಮಲೆನಾಡಿನ ಜನರು ನಾವು ಉಳಿಸಿ ಬೆಳೆಸಿದ ಭೂಮಿ, ಕೃಷಿ, ಪರಿಸರಕ್ಕೆ ಧಕ್ಕೆಯುಂಟಾದಾಗ ಎಲ್ಲವನ್ನು ಬದಿಗಿಟ್ಟು ಒಂದಾಗಿ ಪ್ರತಿಭಟನೆ ಮಾಡುವುದು ಅನಿವಾರ್ಯವಾಗಿದೆ ಎಂದರು

ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಗಡಿಕಲ್ಲು  ಸಮೀಪ ನಾಗರಿಕ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ



ರಸ್ತೆ ತಡೆ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್  ಆಗಿ ವಾಹನ ಸಂಚಾರ ಸ್ಥಗಿತ ಗೊಂಡಿತ್ತು.

ಗುರುವಾರ, ನವೆಂಬರ್ 17, 2022

ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತಗೌಡ ಮನೆಗೆ ಐಟಿ ದಾಳಿ : ರಾಜಕೀಯ ಪ್ರೇರಿತ ರಾಜಕೀಯ ಪ್ರೇರಿತ ಆರೋಪ- ಪ್ರತಿಭಟನೆ

 


ಚಿಕ್ಕಮಗಳೂರು ;ಕಾಂಗ್ರೆಸ್ ನಾಯಕಿ  ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತಗೌಡರ ಮನೆಗೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ.
ಇಂದು ಬೆಳಿಗ್ಗೆ ಮದುವೆ ಮನೆಗೆ ಹೋಗುವ ಸೋಗಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು ನೇರವಾಗಿ ಗಾಯತ್ರಿ    ಶಾಂತಗೌಡರ ಮನೆಗೆ ದಾಳಿ ಮಾಡಿ ಅನೇಕ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು  ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದ್ದುಗಾಯತ್ರಿ ಶಾಂತಗೌಡರನ್ನು ಕುಗ್ಗಿಸುವ ಯತ್ನ ಎಂದು ಆರೋಪಿಸಿ ದಾಳಿಯ ಹಿಂದೆ ಶಾಸಕ ಸಿಟಿ ರವಿ ಕೈವಾಡ ಇದೆ ಆರೋಪಿಸಿದರು.  ಶಾಸಕ ಸಿ.ಟಿ ರವಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.
ಕೇವಲ  ಗಾಯತ್ರಿ ಶಾಂತಗೌಡರ ಮನೆಗೆ ಮಾತ್ರ ದಾಳಿ ನಡೆಸಲಾಗಿದೆ .ಗುತ್ತಿಗೆದಾರ ಸುದರ್ಶನ್ ಮನೆಗೂ ದಾಳಿ ಮಾಡಬೇಕಿತ್ತು ಎಂದು ಒತ್ತಾಯಿಸಿದ್ದಾರೆ.
ಗಾಯತ್ರಿ ಶಾಂತಗೌಡರ ಮನೆ ಕ್ರಶರ್ ಅಳಿಯನ ಮನೆಗಳ ಮೇಲು ದಾಳಿ ನಡೆದಿದೆ. ರಾಜಕೀಯ ವಲಯದಲ್ಲಿ ಸಂಚಲನ ಉಂಟುಮಾಡಿದೆ.

ಮಂಗಳವಾರ, ನವೆಂಬರ್ 15, 2022

ಅಡಿಕೆ ಎಲೆಚುಕ್ಕಿ ರೋಗ : ಗಂಭೀರ ಪರಿಗಣನೆ - ಮುಖ್ಯಮಂತ್ರಿ ಬೊಮ್ಮಾಯಿ

 


ಅಡಿಕೆ ಎಲೆಚುಕ್ಕಿ ರೋಗ :  ಗಂಭೀರ ಪರಿಗಣನೆ - ಮುಖ್ಯಮಂತ್ರಿ  ಬೊಮ್ಮಾಯಿ
ಚಿಕ್ಕಮಗಳೂರು :  ಅಡಿಕೆ ಬೆಳೆಗೆ ತಗಲಿರುವ ಎಲೆಚುಕ್ಕಿ ರೋಗದ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು , ರಾಜ್ಯ ಸರ್ಕಾರ ರೋಗ ತಡೆಗಟ್ಟಲು ಔಷಧಿ ಸಿಂಪಡಣೆಗೆ 10 ಕೋಟಿ ರೂ. ಬಿಡುಗಡೆ ಮಾಡಿಲಾದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಕಡೂರು ಹಾಗೂ ತರೀಕೆರೆ ತಾಲ್ಲೂಕುಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿಎಲೆಚುಕ್ಕಿ ರೋಗವು ದೊಡ್ಡಪ್ರಮಾಣದಲ್ಲಿ ಹರಡುತ್ತಿದ್ದು, ಈ ರೋಗದಿಂದ ಇಳುವರಿ ಕಡಿಮೆಯಾಗಿ ರೈತರಿಗೆ ನಷ್ಟವಾಗುತ್ತಿದೆ ಎಂದರು.
ರೋಗ ನಿವಾರಣೆಗೆ ವಿಶ್ವವಿದ್ಯಾಲಯಗಳ ತಂಡ, ಕೃಷಿ ಇಲಾಖೆ ಹಾಗೂ ಕೇಂದ್ರ ಸರ್ಕಾರದ ಸಂಸ್ಥೆಗಳ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು  ಅವರ ವರದಿ ಆಧರಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಬಳಿಕ ಸುಮಾರು ರೂ. ೩೭೫ ಕೋಟಿ ವೆಚ್ಚದಲ್ಲಿ ತರೀಕೆರೆ ತಾಲ್ಲೂಕಿನ ಪ್ರತಿ ಮನೆಗಳಿಗೆ ಕುಡಿಯುವ ನೀರು  ಕೊಡುವ ಮತ್ತು  ಘರ್‌ಘರ್‌ಗಂಗಾ ಯೋಜನೆಯಡಿಯಲ್ಲಿ ಅಜ್ಜಂಪುರ ಭಾಗದಲ್ಲಿ ಸುಮಾರು ರೂ. ೬೬೯ ಕೋಟಿ ವೆಚ್ಚದ ಬೃಹತ್ ಯೋಜನೆಗಳಿಗೆ ಚಾಲನೆ ನೀಡಿದರು. 
ಭದ್ರಾ ಮೇಲ್ದಂಡೆ ಕಾಮಗಾರಿಗಳಿಗೆ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು , ಎನ್‌ಆರ್‌ಇಜಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಉತ್ತಮ ಸಾಧನೆ ಮಾಡಿದ್ದು ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತರೀಕೆರೆ ಶಾಸಕ ಡಿ.ಎಸ್.ಸುರೇಶ್  ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ  ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಉಪಸ್ಥಿತರಿದ್ದರು.

ಭಾನುವಾರ, ನವೆಂಬರ್ 13, 2022

ವಾಹನ ಕೆಟ್ಟು ನಿಂತು ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್


 

ವಾಹನ ಸವಾರರು ಹೈರಾಣ
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ  11 ನೇ ತಿರುವಿನಲ್ಲಿ   ಪೊಲೀಸ್ ಡಿಆರ್ ವಾಹನ ಕೆಟ್ಟು ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು.
ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ  ಕೆಟ್ಟು ನಿಂತಿದ್ದರಿಂದ ಪ್ರವಾಸಿಗರು ಪರದಾಡುವಂತಾಯಿತು.
ಎರಡು ಬದಿಯಿಂದ ವಾಹನಗಳು ಏಕಕಾಲದಲ್ಲಿ ಸಂಚರಿಸಲಾಗದೇ ಕಿ.ಮೀ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಒಂದು ಬದಿ ವಾಹನ ಸಾಗಲು ಹರಸಾಹಸ ಪಡಬೇಕಾಯಿತು.ವಾರಾಂತ್ಯ ಆದುದರಿಂದ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು.ಸಂಜೆ ಏಳು ಗಂಟೆ ವರೆಗೂ ವಾಹನ ರಿಪೇರಿ ಆಗಿರಲಿಲ್ಲ 

ಶುಕ್ರವಾರ, ನವೆಂಬರ್ 11, 2022

ದತ್ತಮಾಲೆ ಅಭಿಯಾನ ಹಿನ್ನೆಲೆ :1500 ಕ್ಕೂಹೆಚ್ಚು ಪೊಲೀಸರ ನಿಯೋಜನೆ -ಕಟ್ಟುನಿಟ್ಟಿನ ಮುನ್ನೆಚ್ಚರಿಕೆ

 


ಚಿಕ್ಕಮಗಳೂರು :ಇದೇ ತಿಂಗಳ 13 ರಂದು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮ ಸೇನೆ ಆಶ್ರಯದಲ್ಲಿ ನಡೆಯಲಿರುವ ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ .

5 ರಾಜ್ಯ  ಸಶಸ್ತ್ರ ಮೀಸಲು ಪಡೆ ,11 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸೇರಿದಂತೆ 1500 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ .

26 ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿದ್ದು, ವಿಶೇಷ ದಂಡಾಧಿಕಾರಿಗಳನ್ನು ನೇಮಿಸಲಾಗಿದೆ .  13 ರಂದು ಬಾಬಾಬುಡನ್ ಗಿರಿಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ .

ಶೋಭಯಾತ್ರೆ ಹಿನ್ನೆಲೆಯಲ್ಲಿ  13 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬಸವನಹಳ್ಳಿ ಮುಖ್ಯ ರಸ್ತೆ ಮಹಾತ್ಮಗಾಂಧಿ ರಸ್ತೆಯಲ್ಲಿ ವಾಹನ ನಿಲುಗಡೆ ,ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ .

13 ರಂದು ಇಂದಿರಾಗಾಂಧಿ ರಸ್ತೆ, ರತ್ನಗಿರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ . ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ .

ಜಾತಿ ವ್ಯವಸ್ಥೆ ವಿರುದ್ಧ ಸಂದೇಶ ಸಾರಿದ್ದ ಕನಕದಾಸರು: ಜಿಲ್ಲಾಧಿಕಾರಿ ರಮೇಶ್

 


ಚಿಕ್ಕಮಗಳೂರು : ದಾಸಶ್ರೇಷ್ಠರಲ್ಲಿ ಒಬ್ಬರಾದ ಕನಕದಾಸರು, ಸಾಹಿತ್ಯ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಮಹಾನ್ ದಾರ್ಶನಿಕ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಬಣ್ಣಿಸಿದರು.


ಜಿಲ್ಲಾಡಳಿತದ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ  ಆಯೋಜಿಸಿದ್ದ ಕನಕದಾಸ ಜಯಂತಿ ಉದ್ಘಾಟಿಸಿ ಮಾತನಾಡಿದರು.

ವ್ಯಾಸರಾಯರ ಶಿಷ್ಯರಾದ ಕನಕದಾಸರು ವ್ಯಾಕರಣ, ತರ್ಕ , ಮೀಮಾಂಸೆ ಸಾಹಿತ್ಯವನ್ನು ಅಭ್ಯಸಿಸಿ  ೫ ಮಹಾನ್ ಕಾವ್ಯಗಳನ್ನು ರಚಿಸಿದ್ದಾರೆ. ರಾಮಧಾನ್ಯಚರಿತ ಭಾಮಿನಿ ಷಟ್ಪದಿಯಲ್ಲಿ ರಚಿತವಾದ ಈ ಕಾವ್ಯ ೧೫೬ ಪದ್ಯಗಳನ್ನು ಒಳಗೊಂಡಿದ್ದು, ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ ಕೃತಿ ಎಂದರು.

 ಜಾತಿಯ ಮೂಲವನ್ನು ಪ್ರಶ್ನೆ ಮಾಡುವ ಮೂಲಕ ಸಮಾಜದಿಂದ ಜಾತಿ ವ್ಯವಸ್ಥೆಯನ್ಬು ಕಿತ್ತುಹಾಕಬೇಕು , ಮನುಷ್ಯ ತನ್ನ ಕರ್ತವ್ಯ ಮಾಡಬೇಕು ಎನ್ನುವ ಸಂದೇಶ ಸಾರಿದ್ದಾರೆ ಎಂದು  ಹೇಳಿದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ವೆಂಕಟೇಶ್ , ನಗರಸಭೆ ಅಧ್ಯಕ್ಷ  ವರಸಿದ್ಧಿ ವೇಣುಗೋಪಾಲ್ ಇತರರು ಪಾಲ್ಗೊಂಡಿದ್ದರು .

ಚಿಕ್ಕಮಗಳೂರು ಕ್ಷೇತ್ರ :ಮುಸ್ಲೀಂ ಅಭ್ಯರ್ಥಿ ಘೋಷಣೆಗೆ ನಿರ್ಣಯ


 ಚಿಕ್ಕಮಗಳೂರು:- ಸುಮಾರು 32 ಸಾವಿರ ಜನಸಂಖ್ಯೆ ಮುಸ್ಲಿಂ ಸಮುದಾಯದವರಿಗೆ  ಕಾಂಗ್ರೆಸ್ ಪಕ್ಷದಿಂದ  ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕೆಂಬ ನಿರ್ಣಯ ತೆಗೆದುಕೊಳ್ಳಲಾಗಿದೆ  .

ಸಮುದಾಯದ ಮುಖಂಡ ಸಿ.ಎನ್.ಅಕ್ಮಲ್ ಗೆ  ಕಾಂಗ್ರೆಸ್‌ನಿಂದ ಟಿಕೇಟ್ ನೀಡಬೇಕು ಎಂದು ಪಕ್ಷದ ಮುಖಂಡರು, ಮಸೀದಿ ಗುರುಗಳು ಹಾಗೂ ಮುಸ್ಲೀಂ ಸಂಘಟನೆ ಮುಖಂಡರು ನಿರ್ಣಯಿಸಿದ್ದಾರೆ.

ಮೂರು ಬಾರಿ ಶಾಸಕರಾಗಿ /ಸಚಿವರಾಗಿ ಜಿಲ್ಲೆಯ ಜನತೆಗೆ ಅಭಿವೃದ್ದಿಯ ಕೊಡುಗೆ ನೀಡಿದ ಸಗೀರ್ ಅಹ್ಮದ್ ನಂತರದ ಇದುವರೆಗೂ   ಮುಸ್ಲೀಂ ಸಮುದಾಯದ ಅಭ್ಯರ್ಥಿಗೆ ಟೀಕೇಟ್ ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತಗೊಂಡಿತು .

 ಸಂಖ್ಯಾತರನ್ನು ದೊಡ್ಡಶಕ್ತಿ  ಎಂದು ಪರಿಗಣಿಸಿ ಸಿ.

ಎನ್. ಅಕ್ಮಲ್ ಅವರನ್ನು  ಅಭ್ಯರ್ಥಿ ಎಂದು ಘೋಷಿಸಬೇಕು ಒತ್ತಾಯ ಕೇಳಿಬಂದಿದೆ .

ಬ್ಯಾರಿ ಒಕ್ಕೂಟದ ಮಾಜಿ ರಾಜ್ಯಾಧ್ಯಕ್ಷ ಕೆ.ಮಹಮದ್ , ಸಿಡಿಎ ಮಾಜಿ ಅಧ್ಯಕ್ಷ ಅತಿಕ್ ಖೈಸರ್,  ಇತರರು  ಉಪಸ್ಥಿತರಿದ್ದರು.

ಹಣ ದುರ್ಬಳಕೆ ಆರೋಪ : ಮಾಜಿ ಶಾಸಕ ಶ್ರೀನಿವಾಸ್ ಗೆ ಘೇರಾವ್

 


ಚಿಕ್ಕಮಗಳೂರು : ದೇವಸ್ಥಾನದ ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಮಾಜಿ ಶಾಸಕರೊಬ್ಬರಿಗೆ ಘೇರಾವ್ ಹಾಕಿದ ಘಟನೆ ನಡೆದಿದೆ 

ತರೀಕೆರೆಯ ಶ್ರೀ ಗುರು ರೇವಣಸಿದ್ದೇಶ್ವರ ದೇವಸ್ಥಾನ ಕಮಿಟಿಯ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಕನಕ ಜಯಂತಿ ಕಾರ್ಯಕ್ರಮಕ್ಕೆ ತೆರಳಿದ ಮಾಜಿ ಶಾಸಕ ಶ್ರೀನಿವಾಸ್ ಗೆ ಘೇರಾವ್ ಹಾಕಲಾಗಿದೆ .

ರೇವಣಸಿದ್ದೇಶ್ವರ ಕುರುಬ ಸಮಾಜದ ಮುಖಂಡರು ಶಾಸಕರು ಪಾಲ್ಗೊಳ್ಳುವುದನ್ನು ತೀವ್ರ ವಿರೋಧಿಸಿ ಧಿಕ್ಕಾರ ಕೂಗಿದರು  .

ಮೆರವಣಿಗೆಯ ಟ್ರ್ಯಾಕ್ಟರ್ ಏರದಂತೆ, ಧ್ವಜಾರೋಹಣ ಮಾಡದಂತೆ ಆಕ್ರೋಶ ಹೊರಹಾಕಿ  ಕಾರ್ಯಕ್ರಮ ಮುಂದುವರೆಸಿದರು .

ಗುರುವಾರ, ನವೆಂಬರ್ 10, 2022

ಚಾರ್ಮಾಡಿ ಘಾಟ್ ನಲ್ಲಿ ಕಳೆದ ಒಂದು ವಾರದ ಹಿಂದೆ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ಪ್ರತ್ಯಕ್ಷ

 


ಕೊಟ್ಟಿಗೆಹಾರ:ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್  ಸೆರೆ ಹಿಡಿದಿದ್ದಾರೆ. 

ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ‌ ಇದೀಗ ಹೆಬ್ಬಾವಿನ  ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಬುಧವಾರ, ನವೆಂಬರ್ 9, 2022

ಬಿಜೆಪಿ ಮುಖಂಡ ಶಿವಶಂಕರ್ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿಕೆ; ಸಾಬೀತು -ಕ್ರಮಕ್ಕೆ ಸೂಚನೆ

 



ಶೃಂಗೇರಿ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರೂ ಆದ ಶಿವಶಂಕರ್ (ಶೃಂಗೇರಿ ಶಿವಣ್ಣ) ಸುಳ್ಳು ಜಾತಿ ಪ್ರಮಾಣ ಪತ್ರವನ್ನು, ಜಾತಿಯ ಕುರಿತಾದ ಸುಳ್ಳು ಮಾಹಿತಿಯನ್ನು ನೀಡಿ ಸರ್ಕಾರದಿಂದ ಸೌಲಭ್ಯಗಳನ್ನು ಪಡೆದಿರುವುದು ದೃಢಪಟ್ಟಿದೆ .

ಸರ್ಕಾರಕ್ಕೆ ವಂಚಿಸಿರುವುದು ವಿಚಾರಣಾ ಅವಧಿಯಲ್ಲಿ ಧೃಢಪಟ್ಟಿದೆ ಎಂಬುದಾಗಿ ನಾಗರೀಕ ಹಕ್ಕುಜಾರಿ ನಿರ್ದೇಶನಾಲಯ ಧೃಢಪಡಿಸಿದೆ.
ಶಿವಶಂಕರ ಬಿನ್ ಬಂಗಾರಸ್ವಾಮಿ ಇವರ ಜಾತಿ ವಿಚಾರಣೆ ನಡೆಸುವಂತೆ ಪ್ರಶಾಂತ್  ಇಲಾಖೆಯನ್ನು ಕೋರಿದ್ದರು.


ವಿಚಾರಣೆ ಕೈಗೊಂಡ ಇಲಾಖೆ ದಾಖಲಾತಿಗಳನ್ನು ಸಂಗ್ರಹಿಸಿ ವರದಿಯನ್ನು ಸಲ್ಲಿಸಿದೆ. ಈ ವರದಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿದಾಗ ಇವರು ಹಿಂದುಳಿದ ಪ್ರವರ್ಗ – 1 ರಲ್ಲಿ ಬರುವ ಬೋವಿ ಜಾತಿಗೆ ಸೇರಿರುತ್ತಾರೆ ಎಂದು ಧೃಢಪಟ್ಟಿದೆ ಎಂದು ತಿಳಿದುಬಂದಿದೆ .


ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯವನ್ನು ಪಡೆಯುವ ಉದ್ದೇಶದಿಂದ ಶೃಂಗೇರಿ ತಹಸೀಲ್ದಾರ್ ರಿಗೆ ಸುಳ್ಳು ಮಾಹಿತಿ ನೀಡಿ ಪರಿಶಿಷ್ಟ ಜಾತಿಯ ಭೋವಿ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನಿಜವಾದ ಪರಿಶಿಷ್ಟ ಜಾತಿಯ ಜನರನ್ನು ಮತ್ತು ಸರ್ಕಾರವನ್ನು ವಂಚಿಸಿದ್ದಾರೆ ಎಂಬುದಾಗಿ ವಿಚಾರಣಾ ಅವಧಿಯಲ್ಲಿ ಸಾಬೀತಾಗಿದೆ  ಎಂದು ಉಲ್ಲೇಖಿಸಲಾಗಿದೆ.

ಶಿವಶಂಕರ್ ಅವರು ಪಡೆದಿರುವ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸುವ ಸಲುವಾಗಿ ಅಧಿಕಾರಿಗಳು ಮುಂದಿನ ಕ್ರಮಕ್ಕೆ ಸೂಚಿಸಿದ್ದಾರೆ.


ಹಿಂದೂಗಳಿಗೆ ಅವಮಾನ :ಜಾರಕಿಹೊಳಿ ವಿರುದ್ಧ ಬಿಜೆಪಿ ಪ್ರತಿಭಟನೆ -ಶಾಸಕ ರವಿ ಭಾಗಿ

 


ಚಿಕ್ಕಮಗಳೂರು : ಹಿಂದೂಗಳ ವಿರುದ್ಧ ಅವಮಾನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು .

ಆಜಾದ್  ಮೈದಾನದಲ್ಲಿ ಪ್ರತಿಭಟನೆ ನಡೆಸಿ , ಅಶ್ಲೀಲವಾಗಿರುವುದು ಹಿಂದೂ ಪದವಲ್ಲ ' ಕಾಂಗ್ರೆಸ್ ಎಂದು ಆರೋಪಿಸಿ ಹಿಂದೂಗಳಿಗೆ ಅಪಮಾನ ಮಾಡಿರುವ ಜಾರಕಿಹೊಳಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು .

ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಹಿಂದೂಗಳ ವಿರುದ್ಧ ನಿರಂತರವಾಗಿ ದಾಳಿ ನಡೆಸುತ್ತಿದೆ ಮುಂಬರುವ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರ ನೀಡುವಂತೆ ಕರೆ ನೀಡಿದರು .

ಶಾಸಕ ಸಿ ಟಿ ರವಿ , ಪಕ್ಷದ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಇತರರು ಪಾಲ್ಗೊಂಡಿದ್ದರು .



ಕರಡು ಮತದಾರರ ಪಟ್ಟಿ ಪ್ರಕಟ: ಮತದಾರರ ಚೀಟಿ ಪರಿಷ್ಕರಣೆಗೆ ಡಿಸಿ ಸೂಚನೆ

 



ಚಿಕ್ಕಮಗಳೂರು : ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು ಮತದಾರರಲ್ಲಿ  ಜಾಗೃತಿ ಮೂಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಜಿಲ್ಲೆಯಲ್ಲಿ ಒಟ್ಟು ೯,೩೪,೭೬೯ ಮತದಾರರಿದ್ದು, ಅದರಲ್ಲಿ  ೪,೬೪,೨೨೮ ಗಂಡು ಹಾಗೂ ೪,೭೦,೫೦೫ ಹೆಣ್ಣು ಮತದಾರರಿದ್ದಾರೆ. ಅವರಲ್ಲಿ   ಯುವ ಮತದಾರರ ಸಂಖ್ಯೆ  ೧೧,೫೦೨  ಆಗಿದೆ ಎಂದರು
ಭಾರತ ಚುನಾವಣಾ ಆಯೋಗ ೪  ನವೆಂಬರ್ ೧೨, ೨೦, ಡಿಸೆಂಬರ್ ೩ ಮತ್ತು ೪ರಂದು ವಿಶೇಷ ಆಂದೋಲನ  ಹಮ್ಮಿಕೊಂಡಿದ್ದು ಬೂತ್ ಮಟ್ಟದ ಅಧಿಕಾರಿ(ಬಿಎಲ್‌ಒ)ಗಳು ಮನೆಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಡಿಸೆಂಬರ್ ೮ರವರೆಗೆ ಮತದಾರರ ಗುರುತಿನ ಚೀಟಿ ಪರಿಷ್ಕರಣೆಗೆ ಅವಕಾಶವಿದೆ. ಮತದಾರರು ತಮ್ಮ ಹೆಸರು, ಜನ್ಮದಿನಾಂಕ, ವಿಳಾಸ ಪರಿಷ್ಕರಣೆ ಹಾಗೂ ಭಾವಚಿತ್ರ ಬದಲಾವಣೆ ಮಾಡಿಕೊಳ್ಳಬಹುದು ಎಂದರು .
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು  ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮತ್ತು ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪಾ ಉಪಸ್ಥಿತರಿದ್ದರು.  

ಮಂಗಳವಾರ, ನವೆಂಬರ್ 8, 2022

ಲಂಚ ಪಡೆಯುವ ವೇಳೆ ದಾಳಿ: ಲೋಕಾಯುಕ್ತ ಬಲೆಗೆ ಎನ್ ಆರ್ ಪುರ ವೃತ್ತ ನಿರೀಕ್ಷಕ

 


ಚಿಕ್ಕಮಗಳೂರು: ಎನ್.ಆರ್ ಪುರದ ವೃತ್ತ ನಿರೀಕ್ಷಕ ವಸಂತ್ ಶಂಕರ್ ಭಾಗವತ್ ಮಂಗಳವಾರ ಹತ್ತು ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ಮುಸ್ತಾಫ್ ಅಲಿ ಎಂಬುವವರಿಂದ 10 ಸಾವಿರ ಲಂಚಕ್ಕೆ ಡಿಮ್ಯಾಂಡ್ ಸಿಪಿಐ ಡಿಮ್ಯಾಂಡ್ ಮಾಡಿದ್ದರು. 

ಮಂಗಳವಾರ ವೃತ್ತ ನಿರೀಕ್ಷಕ ವಸಂತ್ ಶಂಕರ್ ಭಾಗವತ್ , ಮುಸ್ತಾಫ್ ಅಲಿ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿ ದಾಳಿ ನಡೆಸಿದ್ದಾರೆ. 


(ಚಿಕ್ಕಮಗಳೂರು ಸಮೀಪ ಕಾಡುಕೋಣಗಳ ಮೇರಾಥಾನ್ )

ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಸಿಪಿಐ ವಸಂತ್ ಶಂಕರ್ ಭಾಗವತ್ ಲೋಕಾಯುಕ್ತ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಂಡಿದ್ದು.‌ ಎಫ್.ಐ.ಆರ್ ದಾಖಲಿಸಿದ್ದಾರೆ.

ಸೋಮವಾರ, ನವೆಂಬರ್ 7, 2022

ಹದಗೆಟ್ಟ ರಸ್ತೆ -ವ್ಯಂಗ್ಯಚಿತ್ರಗಳ ಮೂಲಕ ಆಕ್ರೋಶ


 

ಚಿಕ್ಕಮಗಳೂರು :ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರಗಳ ಮೂಲಕ ಕಳಸ ಪಟ್ಟಣದ ನಾಗರಿಕರು ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

 ರಸ್ತೆ ಅವ್ಯವಸ್ಥೆ ಬಗೆಗಿನ ವ್ಯಂಗ್ಯ ಚಿತ್ರಗಳನ್ನು ಪ್ರಕಟಿಸಿ ಕಳಸ ಪಟ್ಟಣದ ಮುಖ್ಯ ರಸ್ತೆಯಿಂದ  ಹೊರನಾಡಿಗೆ ತೆರಳುವ ರಸ್ತೆಯ ದುಸ್ಥಿತಿ ತೆರೆದಿಟ್ಟಿದ್ದಾರೆ .

ವಾಹನಗಳು ಚಲಿಸದಷ್ಟು ಹೊಂಡ-ಗುಂಡುಗಳಿಂದ ರಸ್ತೆ  ಹದಗಟ್ಟಿರುವ ವ್ಯಂಗ್ಯಚಿತ್ರಗಳು ವ್ಯಾಪಕವಾಗಿ ವೈರಲ್ ಆಗಿವೆ.

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತೀವ್ರ ಮುಜುಗರಕ್ಕೆ ಈ ಚಿತ್ರಗಳು ಕಾರಣವಾಗಿವೆ .

ಕಳಸ ತಾಲ್ಲೂಕು ಕೇಂದ್ರವಾಗಿದ್ದರೂ ಅಭಿವೃದ್ದಿ ಶೂನ್ಯ ಎನ್ನುವ ಆಕ್ರೋಶ ವ್ಯಕ್ತಪಡಿಸಿದ್ದಾರೆ 


ಪ್ರತಿವರ್ಷ ಬಂದು ಹೆಣವಿಲ್ಲದ ಗೋರಿ ನೀಡುವುದೇ ಆಗಿದೆ - ನ.13 ರ ನಂತರ ಪರಿಸ್ಥಿತಿ ನೆಟ್ಟಗಿರುವುದಿಲ್ಲ -ಶ್ರೀರಾಮಸೇನೆ ಎಚ್ಚರಿಕೆ

 


ಚಿಕ್ಕಮಗಳೂರು : "ಪ್ರತಿವರ್ಷ ಬಂದು ಹೆಣವಿಲ್ಲದ ಗೋರಿ ನೀಡಿ ಹೋಗುವುದು , ಎಚ್ಚರಿಕೆ ನೀಡಿ...ನೀಡಿ... ಬೇಜಾರು, ಆಕ್ರೋಶವಾಗಿದೆ ನಮಗೆ ಈ‌ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ .

ಈ ರೀತಿಯ ಅಸಹನೆ ವ್ಯಕ್ತ ಪಡಿಸಿದವರು ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ 

ಶ್ರೀರಾಮ ಸೇನೆ ಹಮ್ಮಿಕೊಂಡಿರುವ ದತ್ತಮಾಲಾ ಅಭಿಯಾನದಲ್ಲಿ ಪಾಲ್ಗೊಂಡ ಅವರು  ಧರ್ಮದ ವಿಚಾರದಲ್ಲಿ ಡ್ರಾಮಾ ಒಳ್ಳೆದಲ್ಲ, ತಕ್ಷಣ ಏನಾದ್ರು ಆಗಲಿ ಎಂದು ಗಟ್ಟಿ ನಿರ್ಧಾರ ಮಾಡಿ ಕೂಡಲೇ ದತ್ತಪೀಠವನ್ನ ಹಿಂದೂಗಳ ಪೀಠವೆಂದು ಆದೇಶಿಸಿ, ಹಿಂದೂ ಅರ್ಚಕರ ನೇಮಿಸಿ ಎಂದು ಒತ್ತಾಯಿಸಿದ್ದಾರೆ 

13ನೇ ತಾರೀಖಿನೊಳಗೆ ಅರ್ಚಕರ ನೇಮಿಸದಿದ್ದರೆ ಪರಿಸ್ಥಿತಿ ಕಠಿಣವಾಗುತ್ತೆ ಎಂದು ಎಚ್ಚರಿಸಿರುವ ಅವರು ಹೇಗೆ ಬಿಜೆಪಿ ಅಧ್ಯಕ್ಷರ ಕಾರು ಅಲುಗಾಡಿತ್ತೋ, ಅದೇ ರೀತಿ ಸರ್ಕಾರ ಅಲುಗಾಡುತ್ತೆ ಎಂದು ಹೇಳಿದ್ದಾರೆ .

ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸದಿದ್ದರೆ ಯಡಿಯೂರಪ್ಪರ ಪೀಠ ಹೋಗುತ್ತೆ ಎಂದು ಹೇಳಿದ್ದೆ .ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪ ಪೀಠ ಕಳ್ಕೊಂಡರು ಎಂದು ಉಲ್ಲೇಖಿಸಿದರು .

ಈಗ ಬೊಮ್ಮಾಯಿಗೂ ಹೇಳ್ತಿದ್ದೀವಿ, ಮುಂದೆ ಸರ್ಕಾರ ಬರಬೇಕಂದ್ರೆ ತಕ್ಷಣ ದತ್ತಪೀಠವನ್ನ ಹಿಂದುಗಳಿಗೆ ಒಪ್ಪಿಸಿಇಲ್ಲವಾದರೆ, ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತೆ ಎಂದು ಖಡಕ್ ಸಂದೇಶ ನೀಡಿದ್ದಾರೆ 


ಭಾನುವಾರ, ನವೆಂಬರ್ 6, 2022

ಆನ್ ಲೈನ್ ಎಡವಟ್ಟು :ಟಿಇಟಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳು

 


ಚಿಕ್ಕಮಗಳೂರು : ಆನ್ ಲೈನ್ ಎಡವಟ್ಟಿನಿಂದ  ಟಿಇಟಿ ಪರೀಕ್ಷೆಯಿಂದ  ವಿದ್ಯಾರ್ಥಿಗಳು ವಂಚಿತರಾದ ಪ್ರಕರಣ ನಡೆದಿದೆ 

ಚಿಕ್ಕಮಗಳೂರು ನಗರದ ಹಲವು ಸೆಂಟರ್ ಗಳಲ್ಲಿ  ಶಿಕ್ಷಕರ ನೇಮಕಾತಿ ಹಿನ್ನೆಲೆ ಟಿಇಟಿ ಪರೀಕ್ಷೆ ನಡೆಯುತ್ತಿದ್ದು ,ಆನ್ ಲೈನ್ ನಲ್ಲಿ ಎರಡು ಬಾರಿ ಪ್ರತ್ಯೇಕ ಸೆಂಟರ್ ತೋರಿಸಿದ್ದು ,ಇದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಎದುರಾಗಿದೆ ಬಸವನಹಳ್ಳಿ ಶಾಲೆ ಪರೀಕ್ಷಾ ಕೇಂದ್ರದ ಬಳಿಬ ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದು ಇಲ್ಲದ ಸಬೂಬು ನೀಡಿ ಪರೀಕ್ಷಾ ಕೇಂದ್ರದ ಒಳಗೆ ಸಿಬ್ಬಂದಿ ಪ್ರವೇಶ ನಿರಾಕರಿಸಿದೆ .

ಪರೀಕ್ಷೆ ಬರೆಯದೇ ಬಳ್ಳಾರಿಯಿಂದ ಬಂದಿದ್ದ ಅಭ್ಯರ್ಥಿಗಳು ವಂಚಿತರಾಗಿದ್ದಾರೆ .

ಅನಧಿಕೃತ ಕಟ್ಟಡ ನಿರ್ಮಾಣ : ದಾಖಲೆ ಸಲ್ಲಿಕೆಗೆ ಸೂಚನೆ

 


ಚಿಕ್ಕಮಗಳೂರು ನಗರದ ಹೊರವಲಯದ ಬೈಪಾಸ್ ರಸ್ತೆಗೆ ಹೊಂದಿಕೊಂಡಂತೆ ಇರೋ ಆಶ್ರಯ ಕಾಲೋನಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ ಪತ್ತೆಯಾಗಿದ್ದು ದಾಖಲೆ ಸಲ್ಲಿಸುವಂತೆ ನಗರಸಭೆ ಅಧಿಕಾರಿಗಳು ಸೂಚಿಸಿದ್ದಾರೆ .

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಆಯುಕ್ತ ಬಸವರಾಜ್ ನೇತತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ,ಮೇಲ್ನೋಟಕ್ಕೆ ಇದೊಂದು ಮಸಿದಿ ಎಂದು ತಿಳಿದು ಬಂದಿದ್ದು 3 ದಿನದೊಳಗೆ ಅಗತ್ಯ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ .

ಸೂಕ್ತ ದಾಖಲೆಗಳನ್ನು ನಿಗದಿತ ಸಮಯದಲ್ಲಿ ಒದಗಿಸದೆ ಇದ್ದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ಹೇಳಿದ್ದಾರೆ .


ಪತ್ರಕರ್ತನ ಮೇಲೆ ಹಲ್ಲೆ ಖಂಡನೆ :ಶೃಂಗೇರಿಯ ಪತ್ರಕರ್ತ ರಾಘವೇಂದ್ರ ಮೇಲೆ ಶಾಸಕ ಟಿ ಡಿ ರಾಜೇಗೌಡ ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ .

ಪ್ರಸನ್ನ ಶೆಟ್ಟಿ ಮತ್ತು ಶ್ರೀನಿವಾಸ್ ಶೆಟ್ಟಿ ಎಂಬಿಬ್ಬರು  ನಗರದ ಸೋಮೇಶ್ವರ ಹೋಟೆಲ್ ಒಂದರ ಬಳಿ ಹಲ್ಲೆ ಮಾಡಿದ್ದುಬಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ .

ರಾಘವೇಂದ್ರ ಮೇಲೆ ನಡೆದ ಹಲ್ಲೆಯನ್ನು ಪತ್ರಕರ್ತರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಖಂಡಿಸಿವೆ .

ಶನಿವಾರ, ನವೆಂಬರ್ 5, 2022

ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತ ; ಸ್ಥಳೀಯರಲ್ಲಿ ನಿರಾಸೆ



ಮೂಡಿಗೆರೆ :ತಾಲ್ಲೂಕಿನ ಊರುಬಗೆ ಅರಣ್ಯ ಪ್ರದೇಶದಲ್ಲಿ ನರಹಂತಕ ಕಾಡಾನೆಯನ್ನು ಹಿಡಿದು ಸಾಗಿಸುವ  ಆಪರೇಷನ್ ಬೈರ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಕಾರ್ಯಾಚರಣೆಗೆ ಬಂದಿದ್ದ 6 ದಸರಾ ಆನೆಗಳು ವಾಪಸ್ ತೆರಳಿದೆ. 
ಅಭಿಮನ್ಯುವಿಗೆ ಜ್ವರ ಭೇದಿ ಬಾಧಿಸಿದೆ. ಅಜ್ಜಯ್ಯ ಮತ್ತು ಗೋಪಾಲಸ್ವಾಮಿ ಆನೆಗೆ ಮದ ಬಂದಿದೆ. ಬೈರ ಮೂಡಿಗೆರೆ ತಾಲ್ಲೂಕಿನ ಅರಣ್ಯ ಪ್ರದೇಶದಿಂದ ತಪ್ಪಿಸಿಕೊಂಡು ಸಕಲೇಶಪುರ ಅಥವ ಮಂಗಳೂರು ಅರಣ್ಯ ಭಾಗಕ್ಕೆ ತೆರಳಿರುವ ಬಗ್ಗೆ ಸಂಶಯ ವ್ಯಕ್ತಪಡಿಸಲಾಗಿದೆ.

 ಈ ಕಾರಣದಿಂದ ಕಾರ್ಯಚರಣೆ ಮಾಡಲು ಸಾಧ್ಯವಿಲ್ಲವೆಂದು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಡಿಸಿಎಫ್ ಕ್ರಾಂತಿ  ತಿಳಿಸಿದ್ದಾರೆ.

ನಿರಾಶೆ :ಮೂಡಿಗೆರೆ ತಾಲ್ಲೂಕಿನ ವಿವಿಧ ಭಾಗಗಳಿಗೆ ಲಗ್ಗೆ ಇಡುತ್ತಿದ್ದ  ಕಾಡಾನೆ ಈವರೆಗೆ ಹಲವರನ್ನು ಬಲಿ ತೆಗೆದುಕೊಂಡಿದ್ದು ಸಾಕಷ್ಟು ಬೆಳೆಯನ್ನು ಹಾನಿ ಮಾಡಿದೆ .

ಆನೆ ಹಿಡಿಯುವಂತೆ ಸ್ಥಳೀಯರು ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಿದ್ದು , ಕಾರ್ಯಾಚರಣೆ ಆರಂಭವಾಗಿ ಸ್ಥಳೀಯರು ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಡುವ ವೇಳೆಗೆ ಕಾರ್ಯಾಚರಣೆ ಸ್ಥಗಿತ ಕೊಂಡು ನಿರಾಶೆ ತಂದಿದೆ

ಕಾಡಾನೆ ಸೆರೆ ಕಾರ್ಯಾಚರಣೆಗೆ ಬಂದ ಆನೆ ಅಭಿಮನ್ಯುಗೆ ಅನಾರೋಗ್ಯ ;ಅಂಬಾರಿ ಹೊರುವ ಆನೆ ಬಳಕೆಗೆ ತಕರಾರು

 


ಕೊಟ್ಟಿಗೆಹಾರ:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆಯಲ್ಲಿ ಕಾಡಾನೆ ಸೆರೆಗೆ ಆಗಮಿಸಿರುವ ದಸರಾದಲ್ಲಿ ಅಂಬಾರಿ‌ ಹೊರುವ ಆನೆ ಅಭಿಮನ್ಯುವಿಗೆ ಅನಾರೋಗ್ಯ ಪ್ರಾರಂಭವಾಗಿದೆ.

 ಜ್ವರ ಹಾಗೂ ಬೇಧಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು ಆಪರೇಷನ್ ಭೈರ ಕಾರ್ಯಾಚರಣೆ ಸದ್ಯಕ್ಕೆ ಸ್ಥಗಿತಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.

ಕಾರ್ಯಾಚರಣೆಗೆ ಬಂದಿರುವ  ಅಜಯ್, ಗೋಪಾಲಸ್ವಾಮಿ  ಆನೆಗಳಿಗೆ ಮದ ಬಂದಿರುವುದರಿಂದ ಅವುಗಳನ್ನು ಕಾರ್ಯಾಚರಣೆಗೆ ಬಳಸಲು ಅಸಾಧ್ಯವಾಗಿದೆ.

ಅಭಿಮನ್ಯು ಬಳಕೆಗೆ ಆಕ್ಷೇಪ :

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾಡಾನೆ ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಭಿಮನ್ಯು ಆನೆ ಈ ದೇಶದ ಆಸ್ತಿ. ಬುದ್ದಿವಂತ ಹಾಗೂ ವಿಶಿಷ್ಟ  ಆನೆಯನ್ನು ಕಾರ್ಯಾಚರಣೆಗೆ ಬಳಸಿಕೊಳ್ಳುವುದು ಸರಿಯಲ್ಲಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ .

ಊರುಬಗೆಯಲ್ಲಿ ಕಾಡಾನೆ ಸೆರೆಗೆ ಅಭಿಮನ್ಯು ವನ್ನು ಕರೆ ತಂದಿದ್ದು  ಅಭಿಮನ್ಯು ವಿಗೆ ಜ್ವರ ಹಾಗೂ ನಿರ್ಜಲೀಕರಣ ಪ್ರಾರಂಭವಾಗಿದೆ. ಅರಣ್ಯ ಇಲಾಖೆ ಈ ಬಗ್ಗೆ ಗಮನ ಹರಿಸಲಿ ಎಂದು ಒತ್ತಾಯಿಸಿದ್ದಾರೆ.



ಶುಕ್ರವಾರ, ನವೆಂಬರ್ 4, 2022

ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ: ನ.೧೩ ರಂದು ಸಾರ್ವಜನಿಕ ಪ್ರವೇಶ ನಿರ್ಬಂಧ

 


ಚಿಕ್ಕಮಗಳೂರು : ಚಿಕ್ಕಮಗಳೂರು ತಾಲ್ಲೂಕು, ಐ.ಡಿ ಪೀಠ ಗ್ರಾಮದ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ನ . ೧೩ರಂದು  ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ .

 ಶ್ರೀರಾಮಸೇನಾ ಕಾರ್ಯಕರ್ತರು ವಾರ್ಷಿಕ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿರುವ   ಹಿನ್ನೆಲೆಯಲ್ಲಿ ಸಂಸ್ಥೆಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.೧೩ರ ಬೆಳಿಗ್ಗೆ ೬ ಗಂಟೆಯಿಂದ ನ.೧೪ರ ಬೆಳಿಗ್ಗೆ ೧೦ ಗಂಟೆಯವರೆಗೆ ಪ್ರವಾಸಿಗರು ಬರುವುದನ್ನು ನಿಷೇಧಿಸಿ ಹಾಗೂ ಲಾಂಗ್ ಚಾಸಿಸ್‌ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೆಶ್ ಆದೇಶಿಸಿದ್ದಾರೆ.


ನಿರಾಶೆ ಮೂಡಿಸಿದ ಸಿದ್ಧರಾಮಯ್ಯ ಭೇಟಿ ; ಮುಖಂಡರ ಟೀಕೆ


 

ಚಿಕ್ಕಮಗಳೂರು :ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯನವರ ಭೇಟಿ ಕಾಂಗ್ರೆಸ್ ಪಾಳಯದಲ್ಲಿ ಹುರುಪು ಮೂಡಿಸುವ ಬದಲು  ಅಸಮಾಧಾನಕ್ಕೆ ಕಾರಣವಾಗಿದೆ .
ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪಕ್ಷದ ಜಿಲ್ಲಾ ಮಟ್ಟದ ಪ್ರಮುಖರೊಂದಿಗೆ ಚರ್ಚಿಸುವ ಬದಲು ಏಕಾಂತದಲ್ಲೇ ಹೆಚ್ಚು ಕಾಲಹರಣ ಮಾಡಿದರು ಎನ್ನುವ ಆರೋಪ ಕೇಳಿಬಂದಿದೆ .
ಪ್ರತಿಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಜಿಲ್ಲೆಯ ಆಗುಹೋಗುಗಳ ಬಗ್ಗೆ ಪರಾಮರ್ಶೆ ನಡೆಸಿ ಮುಂದಿನ ಚುನಾವಣೆಯ ಸಿದ್ಧತೆಗಳ ಬಗ್ಗೆಯೂ ಸಮಾಲೋಚನೆ ನಡೆಸಬಹುದಿತ್ತು ಎನ್ನುವುದು ಹಲವರ ಅಭಿಪ್ರಾಯ .
ಖಾಸಗಿ ರೆಸಾರ್ಟ್ ನಲ್ಲಿ ತಂಗಿದ್ದ ಅವರನ್ನು  ಭೇಟಿ ಮಾಡಲು ಸಾಕಷ್ಟು ನಾಯಕರಿಗೆ ಸಾಧ್ಯವಾಗಲೇ ಇಲ್ಲ .ಕೆಲವರಷ್ಟೆ ಭೇಟಿಮಾಡಿ ಇತರರು ಅತ್ತ ಸುಳಿಯದಂತೆ 'ಬೇಲಿ' ನಿರ್ಮಿಸಿದ್ದರು ಎನ್ನುವ ಆರೋಪವೂ ವ್ಯಕ್ತವಾಗಿದೆ .
ಪಕ್ಷದ ಕಚೇರಿಗೆ ಆಗಮಿಸದೆ ,ಪಕ್ಷದ ವಿವಿಧ ಘಟಕಗಳ ಮುಖಂಡರೊಂದಿಗೆ ಸಮಾಲೋಚನೆಯನ್ನೂ ಮಾಡದೆ  ತಮ್ಮ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಎಡವಿದ್ದಾರೆ ಎನ್ನುವ ಟೀಕೆ ಕೇಳಿಬಂದಿದೆ .
ಅಧ್ಯಕ್ಷರ ವಿರುದ್ಧ ದೂರು : ಈ ನಡುವೆ ಪಕ್ಷದ ಅಧ್ಯಕ್ಷ ಅಂಶುಮಂತ್ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸದೆ ಏಕಪಕ್ಷೀಯವಾಗಿ ವರ್ತಿಸುತ್ತಿದೆ  ಎಂದು 1ಬಣ ಸಿದ್ಧರಾಮಯ್ಯನವರಲ್ಲಿ ದೂರು ಸಲ್ಲಿಸಿದೆ .
ತಮಾಷೆಯ ಸಂಗತಿಯೆಂದರೆ ಸಿದ್ಧರಾಮಯ್ಯನವರ ಚಿಕ್ಕಮಗಳೂರು ಭೇಟಿ ಸಾಕಷ್ಟು ಮುಖಂಡರಿಗೆ ಗೊತ್ತೇ ಇಲ್ಲ ಎನ್ನುವುದು

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...